HomeUncategorizedಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

ಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

- Advertisement -
- Advertisement -

ಕರ್ನಾಟಕವು ಏಕೀಕರಣಗೊಂಡ ನಂತರ 19 ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ 20ನೇ ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ಮುನ್ನಡೆಸಲು ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಲು ಇದೇನು ಹಿತಕರ ಕಾಲಘಟ್ಟವಲ್ಲ. ಒಂದು ಕಡೆ ದೇಶ ಮತ್ತು ರಾಜ್ಯಗಳೆರಡರ ಆರ್ಥಿಕತೆ ಗಣನೀಯವಾಗಿ ಕುಸಿದಿದೆ. ಕೊರೊನಾ ಸಾಂಕ್ರಾಮಿಕ ಮಧ್ಯಮ ಮತ್ತು ಬಡಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ. ಇಷ್ಟು ಸಾಲದು ಎಂಬಂತೆ ’ಭಿನ್ನ’ವಾದ ಬಿಜೆಪಿ ಪಕ್ಷದಲ್ಲಿ ಇರುವ ಆಂತರಿಕ ಭಿನ್ನಮತ ಹೊಸ ಮುಖ್ಯಮಂತ್ರಿಯವರ ಆಯ್ಕೆಯಿಂದ ಶಮನವಾಗುತ್ತದೆ ಎಂಬ ಯಾವ ಭರವಸೆಗಳೂ ಗೋಚರಿಸುತ್ತಿಲ್ಲ. ’ಹಳೆಯ’ ಆರ್‌ಎಸ್‌ಎಸ್ ಕಟ್ಟಾಳು ಯಡಿಯೂರಪ್ಪನವರನ್ನೇ ಇಳಿಸಲು ಪ್ರಯತ್ನಿಸಿದ ’ಹೊಸ’ ನಮೂನೆಯ ಆರ್‌ಎಸ್‌ಎಸ್‌ಗಳು, ಆರ್‌ಎಸ್‌ಎಸ್ ಮೂಲದವರಲ್ಲದ ವಲಸಿಗ ಬೊಮ್ಮಾಯಿ ಅವರನ್ನು ಎಷ್ಟು ಸುಸೂತ್ರವಾಗಿ ಕೆಲಸ ಮಾಡಲು ಬಿಡುತ್ತಾರೆ ಎಂದು ನೋಡುವಷ್ಟರಲ್ಲಿಯೇ ಬಹುಶಃ ಉಳಿದ ಒಂದೂ ಮುಕ್ಕಾಲು ವರ್ಷ ಕಳೆದುಹೋಗಬಹುದು. ಅಷ್ಟು ಹೊತ್ತಿಗೆ ಕರ್ನಾಟಕದ ಪಾಡೇನು ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಾಗದೆ ಇರಲಿ ಎಂದು ಸದ್ಯಕ್ಕೆ ಪ್ರಾರ್ಥಿಸೋಣ.

ಎಸ್ ಆರ್ ಬೊಮ್ಮಾಯಿ ಪ್ರಕರಣ ನೀಡಿದ ಕೊಡುಗೆ ನೆನಪಿರಲಿ

ಇಂದಿನ ಸಂದರ್ಭದಲ್ಲಿ ಒಕ್ಕೂಟ ಸರ್ಕಾರದ ಜೊತೆಗೆ ಸೆಣೆಸಿ ರಾಜ್ಯದ ಹಿತ ಕಾಯ್ದುಕೊಳ್ಳುವ ಧೈರ್ಯವನ್ನು ಮಾಡುವ ಯಾವುದೇ ಬಿಜೆಪಿ ರಾಜ್ಯ ಸರ್ಕಾರ ಇರುವುದಕ್ಕೆ ಸಾಧ್ಯವಿಲ್ಲ. ಅದು ತಮಗೆ ನ್ಯಾಯಬದ್ಧವಾಗಿ ಸಿಗಬೇಕಿರುವ ಜಿಎಸ್‌ಟಿ ಬಾಕಿ ಕೇಳುವುದಕ್ಕೆ ಇರಲಿ ಅಥವಾ ಸದ್ಯದ ಕೊರೊನಾ ಸನ್ನಿವೇಶದಲ್ಲಿ ತುರ್ತಾಗಿ ಸಿಗಬೇಕಿರುವ ಲಸಿಕೆಗೆ ಆಗ್ರಹ ಮಾಡುವುದಕ್ಕಾದರೂ ಇರಲಿ. ಆದರೆ ಬಸವರಾಜ ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರ ಸರ್ಕಾರವನ್ನು ಅಂದಿನ ಕಾಂಗ್ರೆಸ್ ಆಡಳಿತದ ಒಕ್ಕೂಟ ಸರ್ಕಾರ ವಜಾ ಮಾಡಿದ ನಂತರ, ಎಸ್ ಆರ್ ಬೊಮ್ಮಾಯಿಯವರು ಸುಪ್ರೀಂ ಕೋರ್ಟ್‌ಗೆ ತೆರಳಿ, ಒಕ್ಕೂಟ ತತ್ವದ ವ್ಯಾಖ್ಯಾನವನ್ನು ನೆನಪಿಸುವುದಕ್ಕೆ ಕಾರಣೀಭೂತರಾದವರು. ಇದು ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚು ನೆನಪಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಕ್ಕೂಟ ಸರ್ಕಾರದ ಅಡಿಯಾಳಲ್ಲ, ಬದಲಿಗೆ ರಾಜ್ಯ ಒಕ್ಕೂಟ ತತ್ವದಲ್ಲಿ ಸರ್ವ ಸ್ವತಂತ್ರ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಂಡು ಆಡಳಿತ ನಡೆಸಲಿ ಎಂಬುದು ಕೂಡ ಆರು ಕೋಟಿಗೂ ಮೀರಿದ ಕರ್ನಾಟಕದ ನಾಗರಿಕರ ಆಗ್ರಹ.

ಕೌಬೆಲ್ಟ್ ಹಿಂದುತ್ವ ರಾಜ್ಯದಲ್ಲಿ ನಡೆಯುವುದಿಲ್ಲ ಎಂಬ ಎಚ್ಚರಿಕೆ ಜಾಗೃತವಾಗಿರಲಿ

ಬಸವರಾಜ್ ಬೊಮ್ಮಾಯಿಯವರ ಆಯ್ಕೆಗೂ ಮುನ್ನ ಅತಿ ಹೆಚ್ಚು ಚರ್ಚೆಯಲ್ಲಿದ್ದ ಸಂಗತಿ ಕರ್ನಾಟಕದಲ್ಲಿ ಹಿಂದುತ್ವವನ್ನು ಉಚ್ಛ್ರಾಯ ಸ್ಥಿತಿಗೆ ತಲುಪಿಸುವ ಹಾರ್ಡ್‌ಕೋರ್ ಹಿಂದುತ್ವವಾದಿಗೆ ಮುಖ್ಯಮಂತ್ರಿ ಗಾದಿ ಒಲಿಯಲಿದೆ ಎಂಬ ಸುದ್ದಿ. ಹಿಂದುತ್ವ ಹಾರ್ಡ್ ಆಗಿರಲಿ ಅಥವಾ ಮೆತ್ತಗೆ ಮೃದುವಾಗಿರಲಿ ಅದು ಅಪಾಯಕಾರಿ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ, ಇನ್ನೆಲ್ಲಾ ಬಿಟ್ಟು ದಿನಾಲು ೨೪ ಗಂಟೆ ಕೋಮು ವಿಷ ಕಾರಲು ಶಕ್ತಿ ಇದ್ದ ಹತ್ತಾರು ಸಚಿವರು ಹಿಂದಕ್ಕೆ ಸರಿದಿದ್ದಾರೆ ಎಂದರೆ ಬಿಜೆಪಿಯ ಹೈಕಮಾಂಡ್ ಮತ್ತು ಆರ್‌ಎಸ್‌ಎಸ್ ಥಿಂಕ್ ಟ್ಯಾಂಕ್‌ಗೆ ಕರ್ನಾಟಕದಲ್ಲಿರುವ ಪ್ರತಿರೋಧ ತುಸುವಾದರೂ ಅರ್ಥವಾಗಿರಲಿಕ್ಕೆ ಸಾಕು. ಇಲ್ಲಿ ಜಾತಿ ಐಡೆಂಟಿಟಿ ಸಂಘ ಪರಿವಾರ ಪ್ರತಿಪಾದಿಸುವ ’ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು’ ಹಿಂದುತ್ವ ಸಿದ್ಧಾಂತಕ್ಕಿಂತ ಬಲಶಾಲಿಯಾಗಿದೆ ಎಂಬುದು ಒಂದು ಮಟ್ಟಿಗಿನ ನಿಜ ಸಂಗತಿಯಾದರೂ, ಅದನ್ನು ಮೀರಿದ ಒಂದು ಪ್ರಜ್ಞೆಯೂ ಕನ್ನಡಿಗರಲ್ಲಿ ಇದೆ ಅನ್ನುವುದೂ ನಿಜ. ಬಸವಣ್ಣ, ನಾಲ್ವಡಿ, ಕುವೆಂಪು, ಬಿ ಕೃಷ್ಣಪ್ಪ, ಬಿ ಬಸವಲಿಂಗಪ್ಪ ಆದಿಯಾಗಿ ಹಲವು ಧೀಮಂತರು ಕಟ್ಟಿಕೊಟ್ಟಿರುವ ಸಾಂಸ್ಕೃತಿಕ-ರಾಜಕೀಯ ಎಚ್ಚರಿಕೆಯ ಪರಂಪರೆಯೂ ಜನರ ಸ್ಮೃತಿಯಲ್ಲಿ ಎಲ್ಲೋ ಅಡಕವಾಗಿದೆ. ಅದು ಆಗಾಗ ಜಾಗೃತವಾಗುವುದಕ್ಕೂ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಹೊಸ ಮುಖ್ಯಮಂತ್ರಿಗಳಿಗೆ ಇರಲಿ. ಎಲ್ಲ ಸಮುದಾಯಗಳನ್ನು ಒಳಗೊಳ್ಳುವ ಬಹುತ್ವದ ರಾಜಕಾರಣವನ್ನು ಅವರು ಮರೆಯದಿರಲಿ.

PC: Mangalorean.com

ಭ್ರಷ್ಟಾಚಾರ ತಗ್ಗಲಿ; ಆಡಳಿತದಲ್ಲಿ ಹೊಸ ಹುರುಪು, ಪಾರದರ್ಶಕತೆ ಮತ್ತು ಚಾಕಚಕ್ಯತೆ ಇರಲಿ

ಭ್ರಷ್ಟಾಚಾರ ಕೊನೆಗೊಳಿಸುವ ಸರ್ಕಾರ ನೋಡಲು ಕರ್ನಾಟಕ ಜನತೆಗೆ ಯೋಗ ಯಾವಾಗ ಕೂಡಿಬರುತ್ತದೋ ತಿಳಿದಿಲ್ಲ. ಆದರೆ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮ ಆಡಳಿತ ನಡೆಸಿ ಎಂದು ಹೊಸ ಸರ್ಕಾರ ಬಂದಾಗ ಕೇಳಿಕೊಳ್ಳುವುದನ್ನಾದರೂ ಮಾಡಬಹುದೇನೋ! ಉದಾಹರಣೆಗೆ ಶಿಕ್ಷಣ ಸಚಿವಾಲಯವನ್ನೇ ನೋಡಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸಗಳಿಗೆ ಹೋಗುವಂತಾಗಿದೆ. ಆ ಮಕ್ಕಳ ಶಿಕ್ಷಣಕ್ಕೆ ಪರಿಹಾರ ಸಿಗುವಂತಹ ಒಂದು ಆರೋಗ್ಯಕರ ನೀತಿಯನ್ನು ಸೃಷ್ಟಿಸಲು ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ. ಪರೀಕ್ಷೆಗಳನ್ನು ನಡೆಸುವುದೇ ಸಾಧನೆ ಎಂಬಂತೆ ನಡೆದುಕೊಳ್ಳುವ ಶಿಕ್ಷಣ ಸಚಿವರು ಹೆಸರಿಗೆ ದಕ್ಷರು ಮತ್ತು ಸಜ್ಜನರು. ಡಿಜಿಟಲ್ ಡಿವೈಡ್‌ನಿಂದ ಬಡಮಕ್ಕಳಿಗೆ ಆಗಿರುವ ಸಮಸ್ಯೆಯ ಬಗ್ಗೆ ಒಂದು ಪರಿಹಾರವನ್ನೂ ಈ ಸಚಿವರು ಸೂಚಿಸಿರುವ ಉದಾಹರಣೆಯಿಲ್ಲ. ಹಲವಾರು ಶಿಕ್ಷಣ ತಜ್ಞರನ್ನು ಒಳಗೊಂಡಿರುವ ಕರ್ನಾಟಕದಲ್ಲಿ ಸಲಹೆಗೇನೂ ಬರವಿರಲಿಲ್ಲ ಅಲ್ಲವೇ?

ಇದು ಒಂದು ಇಲಾಖೆಯ ಉದಾಹರಣೆಯಾದರೆ ಕೃಷಿ, ಕಾರ್ಮಿಕ, ಆರೋಗ್ಯ, ವಸತಿ, ಸಾರಿಗೆ ಹೀಗೆ ಯಾವ ಇಲಾಖೆಯನ್ನೂ ತೆಗೆದುಕೊಂಡರೂ ಸಮಸ್ಯೆಗಳ ಆಗರವಾಗಿದೆ. ಸಾಮಾನ್ಯ ಜನರ ಸಮಸ್ಯೆಗೆ ಮಿಡಿಯುವವರಿಲ್ಲದೆ ಆಡಳಿತ ಕುಂಟುವುದನ್ನೂ ನಿಲ್ಲಿಸಿ ಮಕಾಡೆ ಮಲಗಿದೆ. ಹೊಸ ಸಚಿವ ಸಂಪುಟ ಈ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ತಮಗೆ ಸಿಕ್ಕಿರುವ ಈ ಸಣ್ಣ ಆದರೆ ಸವಾಲಿನ ಸಮಯದಲ್ಲಿ ಕೆಲಸ ಮಾಡುವಂತಾಗಲಿ. ಇದಕ್ಕೆ ನೂತನ ಮುಖ್ಯಮಂತ್ರಿಗಳು ಸ್ಪೂರ್ತಿಯಾಗಿ,
ಆದರ್ಶಪ್ರಾಯವಾಗಿ ಕೆಲಸ ಮಾಡಿ ರಾಜ್ಯವನ್ನು ಮುನ್ನಡೆಸಲಿ.


ಇದನ್ನೂ ಓದಿ: ಯಡಿಯೂರಪ್ಪ ಪದಚ್ಯುತಿ; ದುಃಖಕ್ಕೂ ಸಂಭ್ರಮಕ್ಕೂ ಯೋಗ್ಯವಲ್ಲದ ಬದಲಾವಣೆ

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...