HomeUncategorizedಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

ಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

- Advertisement -
- Advertisement -

ಕರ್ನಾಟಕವು ಏಕೀಕರಣಗೊಂಡ ನಂತರ 19 ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ 20ನೇ ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ಮುನ್ನಡೆಸಲು ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಲು ಇದೇನು ಹಿತಕರ ಕಾಲಘಟ್ಟವಲ್ಲ. ಒಂದು ಕಡೆ ದೇಶ ಮತ್ತು ರಾಜ್ಯಗಳೆರಡರ ಆರ್ಥಿಕತೆ ಗಣನೀಯವಾಗಿ ಕುಸಿದಿದೆ. ಕೊರೊನಾ ಸಾಂಕ್ರಾಮಿಕ ಮಧ್ಯಮ ಮತ್ತು ಬಡಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ. ಇಷ್ಟು ಸಾಲದು ಎಂಬಂತೆ ’ಭಿನ್ನ’ವಾದ ಬಿಜೆಪಿ ಪಕ್ಷದಲ್ಲಿ ಇರುವ ಆಂತರಿಕ ಭಿನ್ನಮತ ಹೊಸ ಮುಖ್ಯಮಂತ್ರಿಯವರ ಆಯ್ಕೆಯಿಂದ ಶಮನವಾಗುತ್ತದೆ ಎಂಬ ಯಾವ ಭರವಸೆಗಳೂ ಗೋಚರಿಸುತ್ತಿಲ್ಲ. ’ಹಳೆಯ’ ಆರ್‌ಎಸ್‌ಎಸ್ ಕಟ್ಟಾಳು ಯಡಿಯೂರಪ್ಪನವರನ್ನೇ ಇಳಿಸಲು ಪ್ರಯತ್ನಿಸಿದ ’ಹೊಸ’ ನಮೂನೆಯ ಆರ್‌ಎಸ್‌ಎಸ್‌ಗಳು, ಆರ್‌ಎಸ್‌ಎಸ್ ಮೂಲದವರಲ್ಲದ ವಲಸಿಗ ಬೊಮ್ಮಾಯಿ ಅವರನ್ನು ಎಷ್ಟು ಸುಸೂತ್ರವಾಗಿ ಕೆಲಸ ಮಾಡಲು ಬಿಡುತ್ತಾರೆ ಎಂದು ನೋಡುವಷ್ಟರಲ್ಲಿಯೇ ಬಹುಶಃ ಉಳಿದ ಒಂದೂ ಮುಕ್ಕಾಲು ವರ್ಷ ಕಳೆದುಹೋಗಬಹುದು. ಅಷ್ಟು ಹೊತ್ತಿಗೆ ಕರ್ನಾಟಕದ ಪಾಡೇನು ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಾಗದೆ ಇರಲಿ ಎಂದು ಸದ್ಯಕ್ಕೆ ಪ್ರಾರ್ಥಿಸೋಣ.

ಎಸ್ ಆರ್ ಬೊಮ್ಮಾಯಿ ಪ್ರಕರಣ ನೀಡಿದ ಕೊಡುಗೆ ನೆನಪಿರಲಿ

ಇಂದಿನ ಸಂದರ್ಭದಲ್ಲಿ ಒಕ್ಕೂಟ ಸರ್ಕಾರದ ಜೊತೆಗೆ ಸೆಣೆಸಿ ರಾಜ್ಯದ ಹಿತ ಕಾಯ್ದುಕೊಳ್ಳುವ ಧೈರ್ಯವನ್ನು ಮಾಡುವ ಯಾವುದೇ ಬಿಜೆಪಿ ರಾಜ್ಯ ಸರ್ಕಾರ ಇರುವುದಕ್ಕೆ ಸಾಧ್ಯವಿಲ್ಲ. ಅದು ತಮಗೆ ನ್ಯಾಯಬದ್ಧವಾಗಿ ಸಿಗಬೇಕಿರುವ ಜಿಎಸ್‌ಟಿ ಬಾಕಿ ಕೇಳುವುದಕ್ಕೆ ಇರಲಿ ಅಥವಾ ಸದ್ಯದ ಕೊರೊನಾ ಸನ್ನಿವೇಶದಲ್ಲಿ ತುರ್ತಾಗಿ ಸಿಗಬೇಕಿರುವ ಲಸಿಕೆಗೆ ಆಗ್ರಹ ಮಾಡುವುದಕ್ಕಾದರೂ ಇರಲಿ. ಆದರೆ ಬಸವರಾಜ ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರ ಸರ್ಕಾರವನ್ನು ಅಂದಿನ ಕಾಂಗ್ರೆಸ್ ಆಡಳಿತದ ಒಕ್ಕೂಟ ಸರ್ಕಾರ ವಜಾ ಮಾಡಿದ ನಂತರ, ಎಸ್ ಆರ್ ಬೊಮ್ಮಾಯಿಯವರು ಸುಪ್ರೀಂ ಕೋರ್ಟ್‌ಗೆ ತೆರಳಿ, ಒಕ್ಕೂಟ ತತ್ವದ ವ್ಯಾಖ್ಯಾನವನ್ನು ನೆನಪಿಸುವುದಕ್ಕೆ ಕಾರಣೀಭೂತರಾದವರು. ಇದು ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚು ನೆನಪಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಕ್ಕೂಟ ಸರ್ಕಾರದ ಅಡಿಯಾಳಲ್ಲ, ಬದಲಿಗೆ ರಾಜ್ಯ ಒಕ್ಕೂಟ ತತ್ವದಲ್ಲಿ ಸರ್ವ ಸ್ವತಂತ್ರ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಂಡು ಆಡಳಿತ ನಡೆಸಲಿ ಎಂಬುದು ಕೂಡ ಆರು ಕೋಟಿಗೂ ಮೀರಿದ ಕರ್ನಾಟಕದ ನಾಗರಿಕರ ಆಗ್ರಹ.

ಕೌಬೆಲ್ಟ್ ಹಿಂದುತ್ವ ರಾಜ್ಯದಲ್ಲಿ ನಡೆಯುವುದಿಲ್ಲ ಎಂಬ ಎಚ್ಚರಿಕೆ ಜಾಗೃತವಾಗಿರಲಿ

ಬಸವರಾಜ್ ಬೊಮ್ಮಾಯಿಯವರ ಆಯ್ಕೆಗೂ ಮುನ್ನ ಅತಿ ಹೆಚ್ಚು ಚರ್ಚೆಯಲ್ಲಿದ್ದ ಸಂಗತಿ ಕರ್ನಾಟಕದಲ್ಲಿ ಹಿಂದುತ್ವವನ್ನು ಉಚ್ಛ್ರಾಯ ಸ್ಥಿತಿಗೆ ತಲುಪಿಸುವ ಹಾರ್ಡ್‌ಕೋರ್ ಹಿಂದುತ್ವವಾದಿಗೆ ಮುಖ್ಯಮಂತ್ರಿ ಗಾದಿ ಒಲಿಯಲಿದೆ ಎಂಬ ಸುದ್ದಿ. ಹಿಂದುತ್ವ ಹಾರ್ಡ್ ಆಗಿರಲಿ ಅಥವಾ ಮೆತ್ತಗೆ ಮೃದುವಾಗಿರಲಿ ಅದು ಅಪಾಯಕಾರಿ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ, ಇನ್ನೆಲ್ಲಾ ಬಿಟ್ಟು ದಿನಾಲು ೨೪ ಗಂಟೆ ಕೋಮು ವಿಷ ಕಾರಲು ಶಕ್ತಿ ಇದ್ದ ಹತ್ತಾರು ಸಚಿವರು ಹಿಂದಕ್ಕೆ ಸರಿದಿದ್ದಾರೆ ಎಂದರೆ ಬಿಜೆಪಿಯ ಹೈಕಮಾಂಡ್ ಮತ್ತು ಆರ್‌ಎಸ್‌ಎಸ್ ಥಿಂಕ್ ಟ್ಯಾಂಕ್‌ಗೆ ಕರ್ನಾಟಕದಲ್ಲಿರುವ ಪ್ರತಿರೋಧ ತುಸುವಾದರೂ ಅರ್ಥವಾಗಿರಲಿಕ್ಕೆ ಸಾಕು. ಇಲ್ಲಿ ಜಾತಿ ಐಡೆಂಟಿಟಿ ಸಂಘ ಪರಿವಾರ ಪ್ರತಿಪಾದಿಸುವ ’ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು’ ಹಿಂದುತ್ವ ಸಿದ್ಧಾಂತಕ್ಕಿಂತ ಬಲಶಾಲಿಯಾಗಿದೆ ಎಂಬುದು ಒಂದು ಮಟ್ಟಿಗಿನ ನಿಜ ಸಂಗತಿಯಾದರೂ, ಅದನ್ನು ಮೀರಿದ ಒಂದು ಪ್ರಜ್ಞೆಯೂ ಕನ್ನಡಿಗರಲ್ಲಿ ಇದೆ ಅನ್ನುವುದೂ ನಿಜ. ಬಸವಣ್ಣ, ನಾಲ್ವಡಿ, ಕುವೆಂಪು, ಬಿ ಕೃಷ್ಣಪ್ಪ, ಬಿ ಬಸವಲಿಂಗಪ್ಪ ಆದಿಯಾಗಿ ಹಲವು ಧೀಮಂತರು ಕಟ್ಟಿಕೊಟ್ಟಿರುವ ಸಾಂಸ್ಕೃತಿಕ-ರಾಜಕೀಯ ಎಚ್ಚರಿಕೆಯ ಪರಂಪರೆಯೂ ಜನರ ಸ್ಮೃತಿಯಲ್ಲಿ ಎಲ್ಲೋ ಅಡಕವಾಗಿದೆ. ಅದು ಆಗಾಗ ಜಾಗೃತವಾಗುವುದಕ್ಕೂ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಹೊಸ ಮುಖ್ಯಮಂತ್ರಿಗಳಿಗೆ ಇರಲಿ. ಎಲ್ಲ ಸಮುದಾಯಗಳನ್ನು ಒಳಗೊಳ್ಳುವ ಬಹುತ್ವದ ರಾಜಕಾರಣವನ್ನು ಅವರು ಮರೆಯದಿರಲಿ.

PC: Mangalorean.com

ಭ್ರಷ್ಟಾಚಾರ ತಗ್ಗಲಿ; ಆಡಳಿತದಲ್ಲಿ ಹೊಸ ಹುರುಪು, ಪಾರದರ್ಶಕತೆ ಮತ್ತು ಚಾಕಚಕ್ಯತೆ ಇರಲಿ

ಭ್ರಷ್ಟಾಚಾರ ಕೊನೆಗೊಳಿಸುವ ಸರ್ಕಾರ ನೋಡಲು ಕರ್ನಾಟಕ ಜನತೆಗೆ ಯೋಗ ಯಾವಾಗ ಕೂಡಿಬರುತ್ತದೋ ತಿಳಿದಿಲ್ಲ. ಆದರೆ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮ ಆಡಳಿತ ನಡೆಸಿ ಎಂದು ಹೊಸ ಸರ್ಕಾರ ಬಂದಾಗ ಕೇಳಿಕೊಳ್ಳುವುದನ್ನಾದರೂ ಮಾಡಬಹುದೇನೋ! ಉದಾಹರಣೆಗೆ ಶಿಕ್ಷಣ ಸಚಿವಾಲಯವನ್ನೇ ನೋಡಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸಗಳಿಗೆ ಹೋಗುವಂತಾಗಿದೆ. ಆ ಮಕ್ಕಳ ಶಿಕ್ಷಣಕ್ಕೆ ಪರಿಹಾರ ಸಿಗುವಂತಹ ಒಂದು ಆರೋಗ್ಯಕರ ನೀತಿಯನ್ನು ಸೃಷ್ಟಿಸಲು ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ. ಪರೀಕ್ಷೆಗಳನ್ನು ನಡೆಸುವುದೇ ಸಾಧನೆ ಎಂಬಂತೆ ನಡೆದುಕೊಳ್ಳುವ ಶಿಕ್ಷಣ ಸಚಿವರು ಹೆಸರಿಗೆ ದಕ್ಷರು ಮತ್ತು ಸಜ್ಜನರು. ಡಿಜಿಟಲ್ ಡಿವೈಡ್‌ನಿಂದ ಬಡಮಕ್ಕಳಿಗೆ ಆಗಿರುವ ಸಮಸ್ಯೆಯ ಬಗ್ಗೆ ಒಂದು ಪರಿಹಾರವನ್ನೂ ಈ ಸಚಿವರು ಸೂಚಿಸಿರುವ ಉದಾಹರಣೆಯಿಲ್ಲ. ಹಲವಾರು ಶಿಕ್ಷಣ ತಜ್ಞರನ್ನು ಒಳಗೊಂಡಿರುವ ಕರ್ನಾಟಕದಲ್ಲಿ ಸಲಹೆಗೇನೂ ಬರವಿರಲಿಲ್ಲ ಅಲ್ಲವೇ?

ಇದು ಒಂದು ಇಲಾಖೆಯ ಉದಾಹರಣೆಯಾದರೆ ಕೃಷಿ, ಕಾರ್ಮಿಕ, ಆರೋಗ್ಯ, ವಸತಿ, ಸಾರಿಗೆ ಹೀಗೆ ಯಾವ ಇಲಾಖೆಯನ್ನೂ ತೆಗೆದುಕೊಂಡರೂ ಸಮಸ್ಯೆಗಳ ಆಗರವಾಗಿದೆ. ಸಾಮಾನ್ಯ ಜನರ ಸಮಸ್ಯೆಗೆ ಮಿಡಿಯುವವರಿಲ್ಲದೆ ಆಡಳಿತ ಕುಂಟುವುದನ್ನೂ ನಿಲ್ಲಿಸಿ ಮಕಾಡೆ ಮಲಗಿದೆ. ಹೊಸ ಸಚಿವ ಸಂಪುಟ ಈ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ತಮಗೆ ಸಿಕ್ಕಿರುವ ಈ ಸಣ್ಣ ಆದರೆ ಸವಾಲಿನ ಸಮಯದಲ್ಲಿ ಕೆಲಸ ಮಾಡುವಂತಾಗಲಿ. ಇದಕ್ಕೆ ನೂತನ ಮುಖ್ಯಮಂತ್ರಿಗಳು ಸ್ಪೂರ್ತಿಯಾಗಿ,
ಆದರ್ಶಪ್ರಾಯವಾಗಿ ಕೆಲಸ ಮಾಡಿ ರಾಜ್ಯವನ್ನು ಮುನ್ನಡೆಸಲಿ.


ಇದನ್ನೂ ಓದಿ: ಯಡಿಯೂರಪ್ಪ ಪದಚ್ಯುತಿ; ದುಃಖಕ್ಕೂ ಸಂಭ್ರಮಕ್ಕೂ ಯೋಗ್ಯವಲ್ಲದ ಬದಲಾವಣೆ

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...