HomeUncategorizedಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

ಹೊಸ ಮುಖ್ಯಮಂತ್ರಿ ಒಕ್ಕೂಟ ತತ್ವದ ಆದರ್ಶಕ್ಕೆ ಆಗ್ರಹಿಸಿ ನಿಲ್ಲಲಿ

- Advertisement -
- Advertisement -

ಕರ್ನಾಟಕವು ಏಕೀಕರಣಗೊಂಡ ನಂತರ 19 ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ 20ನೇ ಮುಖ್ಯಮಂತ್ರಿಯಾಗಿ ಕರ್ನಾಟಕ ಸರ್ಕಾರವನ್ನು ಮುನ್ನಡೆಸಲು ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಲು ಇದೇನು ಹಿತಕರ ಕಾಲಘಟ್ಟವಲ್ಲ. ಒಂದು ಕಡೆ ದೇಶ ಮತ್ತು ರಾಜ್ಯಗಳೆರಡರ ಆರ್ಥಿಕತೆ ಗಣನೀಯವಾಗಿ ಕುಸಿದಿದೆ. ಕೊರೊನಾ ಸಾಂಕ್ರಾಮಿಕ ಮಧ್ಯಮ ಮತ್ತು ಬಡಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ. ಇಷ್ಟು ಸಾಲದು ಎಂಬಂತೆ ’ಭಿನ್ನ’ವಾದ ಬಿಜೆಪಿ ಪಕ್ಷದಲ್ಲಿ ಇರುವ ಆಂತರಿಕ ಭಿನ್ನಮತ ಹೊಸ ಮುಖ್ಯಮಂತ್ರಿಯವರ ಆಯ್ಕೆಯಿಂದ ಶಮನವಾಗುತ್ತದೆ ಎಂಬ ಯಾವ ಭರವಸೆಗಳೂ ಗೋಚರಿಸುತ್ತಿಲ್ಲ. ’ಹಳೆಯ’ ಆರ್‌ಎಸ್‌ಎಸ್ ಕಟ್ಟಾಳು ಯಡಿಯೂರಪ್ಪನವರನ್ನೇ ಇಳಿಸಲು ಪ್ರಯತ್ನಿಸಿದ ’ಹೊಸ’ ನಮೂನೆಯ ಆರ್‌ಎಸ್‌ಎಸ್‌ಗಳು, ಆರ್‌ಎಸ್‌ಎಸ್ ಮೂಲದವರಲ್ಲದ ವಲಸಿಗ ಬೊಮ್ಮಾಯಿ ಅವರನ್ನು ಎಷ್ಟು ಸುಸೂತ್ರವಾಗಿ ಕೆಲಸ ಮಾಡಲು ಬಿಡುತ್ತಾರೆ ಎಂದು ನೋಡುವಷ್ಟರಲ್ಲಿಯೇ ಬಹುಶಃ ಉಳಿದ ಒಂದೂ ಮುಕ್ಕಾಲು ವರ್ಷ ಕಳೆದುಹೋಗಬಹುದು. ಅಷ್ಟು ಹೊತ್ತಿಗೆ ಕರ್ನಾಟಕದ ಪಾಡೇನು ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ. ಹಾಗಾಗದೆ ಇರಲಿ ಎಂದು ಸದ್ಯಕ್ಕೆ ಪ್ರಾರ್ಥಿಸೋಣ.

ಎಸ್ ಆರ್ ಬೊಮ್ಮಾಯಿ ಪ್ರಕರಣ ನೀಡಿದ ಕೊಡುಗೆ ನೆನಪಿರಲಿ

ಇಂದಿನ ಸಂದರ್ಭದಲ್ಲಿ ಒಕ್ಕೂಟ ಸರ್ಕಾರದ ಜೊತೆಗೆ ಸೆಣೆಸಿ ರಾಜ್ಯದ ಹಿತ ಕಾಯ್ದುಕೊಳ್ಳುವ ಧೈರ್ಯವನ್ನು ಮಾಡುವ ಯಾವುದೇ ಬಿಜೆಪಿ ರಾಜ್ಯ ಸರ್ಕಾರ ಇರುವುದಕ್ಕೆ ಸಾಧ್ಯವಿಲ್ಲ. ಅದು ತಮಗೆ ನ್ಯಾಯಬದ್ಧವಾಗಿ ಸಿಗಬೇಕಿರುವ ಜಿಎಸ್‌ಟಿ ಬಾಕಿ ಕೇಳುವುದಕ್ಕೆ ಇರಲಿ ಅಥವಾ ಸದ್ಯದ ಕೊರೊನಾ ಸನ್ನಿವೇಶದಲ್ಲಿ ತುರ್ತಾಗಿ ಸಿಗಬೇಕಿರುವ ಲಸಿಕೆಗೆ ಆಗ್ರಹ ಮಾಡುವುದಕ್ಕಾದರೂ ಇರಲಿ. ಆದರೆ ಬಸವರಾಜ ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರ ಸರ್ಕಾರವನ್ನು ಅಂದಿನ ಕಾಂಗ್ರೆಸ್ ಆಡಳಿತದ ಒಕ್ಕೂಟ ಸರ್ಕಾರ ವಜಾ ಮಾಡಿದ ನಂತರ, ಎಸ್ ಆರ್ ಬೊಮ್ಮಾಯಿಯವರು ಸುಪ್ರೀಂ ಕೋರ್ಟ್‌ಗೆ ತೆರಳಿ, ಒಕ್ಕೂಟ ತತ್ವದ ವ್ಯಾಖ್ಯಾನವನ್ನು ನೆನಪಿಸುವುದಕ್ಕೆ ಕಾರಣೀಭೂತರಾದವರು. ಇದು ಬಸವರಾಜ್ ಬೊಮ್ಮಾಯಿಯವರಿಗೆ ಹೆಚ್ಚು ನೆನಪಿರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಕ್ಕೂಟ ಸರ್ಕಾರದ ಅಡಿಯಾಳಲ್ಲ, ಬದಲಿಗೆ ರಾಜ್ಯ ಒಕ್ಕೂಟ ತತ್ವದಲ್ಲಿ ಸರ್ವ ಸ್ವತಂತ್ರ ಸಾರ್ವಭೌಮ ಎಂಬುದನ್ನು ನೆನಪಿಟ್ಟುಕೊಂಡು ಆಡಳಿತ ನಡೆಸಲಿ ಎಂಬುದು ಕೂಡ ಆರು ಕೋಟಿಗೂ ಮೀರಿದ ಕರ್ನಾಟಕದ ನಾಗರಿಕರ ಆಗ್ರಹ.

ಕೌಬೆಲ್ಟ್ ಹಿಂದುತ್ವ ರಾಜ್ಯದಲ್ಲಿ ನಡೆಯುವುದಿಲ್ಲ ಎಂಬ ಎಚ್ಚರಿಕೆ ಜಾಗೃತವಾಗಿರಲಿ

ಬಸವರಾಜ್ ಬೊಮ್ಮಾಯಿಯವರ ಆಯ್ಕೆಗೂ ಮುನ್ನ ಅತಿ ಹೆಚ್ಚು ಚರ್ಚೆಯಲ್ಲಿದ್ದ ಸಂಗತಿ ಕರ್ನಾಟಕದಲ್ಲಿ ಹಿಂದುತ್ವವನ್ನು ಉಚ್ಛ್ರಾಯ ಸ್ಥಿತಿಗೆ ತಲುಪಿಸುವ ಹಾರ್ಡ್‌ಕೋರ್ ಹಿಂದುತ್ವವಾದಿಗೆ ಮುಖ್ಯಮಂತ್ರಿ ಗಾದಿ ಒಲಿಯಲಿದೆ ಎಂಬ ಸುದ್ದಿ. ಹಿಂದುತ್ವ ಹಾರ್ಡ್ ಆಗಿರಲಿ ಅಥವಾ ಮೆತ್ತಗೆ ಮೃದುವಾಗಿರಲಿ ಅದು ಅಪಾಯಕಾರಿ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ ಕರ್ನಾಟಕದ ಮಟ್ಟಿಗೆ, ಇನ್ನೆಲ್ಲಾ ಬಿಟ್ಟು ದಿನಾಲು ೨೪ ಗಂಟೆ ಕೋಮು ವಿಷ ಕಾರಲು ಶಕ್ತಿ ಇದ್ದ ಹತ್ತಾರು ಸಚಿವರು ಹಿಂದಕ್ಕೆ ಸರಿದಿದ್ದಾರೆ ಎಂದರೆ ಬಿಜೆಪಿಯ ಹೈಕಮಾಂಡ್ ಮತ್ತು ಆರ್‌ಎಸ್‌ಎಸ್ ಥಿಂಕ್ ಟ್ಯಾಂಕ್‌ಗೆ ಕರ್ನಾಟಕದಲ್ಲಿರುವ ಪ್ರತಿರೋಧ ತುಸುವಾದರೂ ಅರ್ಥವಾಗಿರಲಿಕ್ಕೆ ಸಾಕು. ಇಲ್ಲಿ ಜಾತಿ ಐಡೆಂಟಿಟಿ ಸಂಘ ಪರಿವಾರ ಪ್ರತಿಪಾದಿಸುವ ’ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು’ ಹಿಂದುತ್ವ ಸಿದ್ಧಾಂತಕ್ಕಿಂತ ಬಲಶಾಲಿಯಾಗಿದೆ ಎಂಬುದು ಒಂದು ಮಟ್ಟಿಗಿನ ನಿಜ ಸಂಗತಿಯಾದರೂ, ಅದನ್ನು ಮೀರಿದ ಒಂದು ಪ್ರಜ್ಞೆಯೂ ಕನ್ನಡಿಗರಲ್ಲಿ ಇದೆ ಅನ್ನುವುದೂ ನಿಜ. ಬಸವಣ್ಣ, ನಾಲ್ವಡಿ, ಕುವೆಂಪು, ಬಿ ಕೃಷ್ಣಪ್ಪ, ಬಿ ಬಸವಲಿಂಗಪ್ಪ ಆದಿಯಾಗಿ ಹಲವು ಧೀಮಂತರು ಕಟ್ಟಿಕೊಟ್ಟಿರುವ ಸಾಂಸ್ಕೃತಿಕ-ರಾಜಕೀಯ ಎಚ್ಚರಿಕೆಯ ಪರಂಪರೆಯೂ ಜನರ ಸ್ಮೃತಿಯಲ್ಲಿ ಎಲ್ಲೋ ಅಡಕವಾಗಿದೆ. ಅದು ಆಗಾಗ ಜಾಗೃತವಾಗುವುದಕ್ಕೂ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆ ಹೊಸ ಮುಖ್ಯಮಂತ್ರಿಗಳಿಗೆ ಇರಲಿ. ಎಲ್ಲ ಸಮುದಾಯಗಳನ್ನು ಒಳಗೊಳ್ಳುವ ಬಹುತ್ವದ ರಾಜಕಾರಣವನ್ನು ಅವರು ಮರೆಯದಿರಲಿ.

PC: Mangalorean.com

ಭ್ರಷ್ಟಾಚಾರ ತಗ್ಗಲಿ; ಆಡಳಿತದಲ್ಲಿ ಹೊಸ ಹುರುಪು, ಪಾರದರ್ಶಕತೆ ಮತ್ತು ಚಾಕಚಕ್ಯತೆ ಇರಲಿ

ಭ್ರಷ್ಟಾಚಾರ ಕೊನೆಗೊಳಿಸುವ ಸರ್ಕಾರ ನೋಡಲು ಕರ್ನಾಟಕ ಜನತೆಗೆ ಯೋಗ ಯಾವಾಗ ಕೂಡಿಬರುತ್ತದೋ ತಿಳಿದಿಲ್ಲ. ಆದರೆ ಹಿಂದಿನ ಸರ್ಕಾರಕ್ಕಿಂತಲೂ ಉತ್ತಮ ಆಡಳಿತ ನಡೆಸಿ ಎಂದು ಹೊಸ ಸರ್ಕಾರ ಬಂದಾಗ ಕೇಳಿಕೊಳ್ಳುವುದನ್ನಾದರೂ ಮಾಡಬಹುದೇನೋ! ಉದಾಹರಣೆಗೆ ಶಿಕ್ಷಣ ಸಚಿವಾಲಯವನ್ನೇ ನೋಡಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಕೆಲಸಗಳಿಗೆ ಹೋಗುವಂತಾಗಿದೆ. ಆ ಮಕ್ಕಳ ಶಿಕ್ಷಣಕ್ಕೆ ಪರಿಹಾರ ಸಿಗುವಂತಹ ಒಂದು ಆರೋಗ್ಯಕರ ನೀತಿಯನ್ನು ಸೃಷ್ಟಿಸಲು ಶಿಕ್ಷಣ ಇಲಾಖೆಗೆ ಸಾಧ್ಯವಾಗಿಲ್ಲ. ಪರೀಕ್ಷೆಗಳನ್ನು ನಡೆಸುವುದೇ ಸಾಧನೆ ಎಂಬಂತೆ ನಡೆದುಕೊಳ್ಳುವ ಶಿಕ್ಷಣ ಸಚಿವರು ಹೆಸರಿಗೆ ದಕ್ಷರು ಮತ್ತು ಸಜ್ಜನರು. ಡಿಜಿಟಲ್ ಡಿವೈಡ್‌ನಿಂದ ಬಡಮಕ್ಕಳಿಗೆ ಆಗಿರುವ ಸಮಸ್ಯೆಯ ಬಗ್ಗೆ ಒಂದು ಪರಿಹಾರವನ್ನೂ ಈ ಸಚಿವರು ಸೂಚಿಸಿರುವ ಉದಾಹರಣೆಯಿಲ್ಲ. ಹಲವಾರು ಶಿಕ್ಷಣ ತಜ್ಞರನ್ನು ಒಳಗೊಂಡಿರುವ ಕರ್ನಾಟಕದಲ್ಲಿ ಸಲಹೆಗೇನೂ ಬರವಿರಲಿಲ್ಲ ಅಲ್ಲವೇ?

ಇದು ಒಂದು ಇಲಾಖೆಯ ಉದಾಹರಣೆಯಾದರೆ ಕೃಷಿ, ಕಾರ್ಮಿಕ, ಆರೋಗ್ಯ, ವಸತಿ, ಸಾರಿಗೆ ಹೀಗೆ ಯಾವ ಇಲಾಖೆಯನ್ನೂ ತೆಗೆದುಕೊಂಡರೂ ಸಮಸ್ಯೆಗಳ ಆಗರವಾಗಿದೆ. ಸಾಮಾನ್ಯ ಜನರ ಸಮಸ್ಯೆಗೆ ಮಿಡಿಯುವವರಿಲ್ಲದೆ ಆಡಳಿತ ಕುಂಟುವುದನ್ನೂ ನಿಲ್ಲಿಸಿ ಮಕಾಡೆ ಮಲಗಿದೆ. ಹೊಸ ಸಚಿವ ಸಂಪುಟ ಈ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ತಮಗೆ ಸಿಕ್ಕಿರುವ ಈ ಸಣ್ಣ ಆದರೆ ಸವಾಲಿನ ಸಮಯದಲ್ಲಿ ಕೆಲಸ ಮಾಡುವಂತಾಗಲಿ. ಇದಕ್ಕೆ ನೂತನ ಮುಖ್ಯಮಂತ್ರಿಗಳು ಸ್ಪೂರ್ತಿಯಾಗಿ,
ಆದರ್ಶಪ್ರಾಯವಾಗಿ ಕೆಲಸ ಮಾಡಿ ರಾಜ್ಯವನ್ನು ಮುನ್ನಡೆಸಲಿ.


ಇದನ್ನೂ ಓದಿ: ಯಡಿಯೂರಪ್ಪ ಪದಚ್ಯುತಿ; ದುಃಖಕ್ಕೂ ಸಂಭ್ರಮಕ್ಕೂ ಯೋಗ್ಯವಲ್ಲದ ಬದಲಾವಣೆ

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...