Homeಮುಖಪುಟಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಜಾರ್ಖಂಡ್ ರಾಜ್ಯದ ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರಿಗೆ ದುಷ್ಕರ್ಮಿಗಳು ಆಟೋದಿಂದ ಗುದ್ದಿದ ಸಿಸಿಟಿವಿ ವಿಡಿಯೋ ದೊರಕಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಸಹ ಅವರು ಬದುಕುಳಿಯಲಿಲ್ಲ.

ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗಿ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿದೆ. ಅವರು ಕುಸಿದುಬಿದ್ದ ನಂತರ ದುಷ್ಕರ್ಮಿಗಳು ಪರಾರಿಯಾಗಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಸಿಸಿಕ್ಯಾಮರ ದೃಶ್ಯಾವಳಿಗಳು ದೊರೆತ ನಂತರ ಇದು ಪೂರ್ವನಿಯೋಜಿತ ಹತ್ಯೆ ಎಂಬುದು ಸಾಬೀತಾಗಿದೆ. ನ್ಯಾಯಾಂಗದ ಮೇಲಿನ ಕ್ರೂರ ಹಲ್ಲೆ ಎಂದು ಕರೆದಿರುವ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನ್ಯಾಯಾಧೀಶರನ್ನು ಕೊಂದ ಆಟೋ ಯಾರದೆಂಬುದು ಇನ್ನು ಪತ್ತೆಯಾಗಿಲ್ಲ. ನ್ಯಾಯಾಧೀಶರನ್ನು ಆಸ್ಪತ್ರೆಗೆ ಸೇರಿಸಿದಾಗ ಆತ ಯಾರೆಂಬುದು ಸಹ ಗೊತ್ತಿರಲಿಲ್ಲ ಎನ್ನಲಾಗಿದೆ. ಅವರ ಕುಟುಂಬ 7 ಗಂಟೆಯಾದರೂ ಅವರು ಮನೆಗೆ ಬಾರದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸ್ ಹುಡುಕಾಟದಲ್ಲಿ ಅವರು ಆಸ್ಪತ್ರೆಯಲ್ಲಿ ಸಾವನಪ್ಪಿರುವುದು ಪತ್ತೆಯಾಗಿದೆ.

ನ್ಯಾಯಾಧೀಶರ ಕೊಲೆಯ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿರುವುದನ್ನು ಸಿಸಿಟಿವಿ ಸಾಕ್ಷಿಗಳು ದೃಢಪಡಿಸಿವೆ. ಆರಂಭಿಕ ತನಿಖೆಯಲ್ಲಿ ಹತ್ಯೆಯ ಕೆಲವೇ ಗಂಟೆಗಳ ಹಿಂದೆ ಆಟೋವನ್ನು ಅಪಹರಿಸಿರುವುದು ಬೆಳಕಿಗೆ ಬಂದಿದೆ. ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಉನ್ನತ ಮಟ್ಟದ ತನಿಖೆಗೆ ಒತ್ತಡ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶರಾದ ಆನಂದ್‌ರವರು ಧನಬಾದ್ ನಗರದ ಮಾಫಿಯಾ ಕೊಲೆಗಳ ವಿಚಾರಣೆ ನಡೆಸುತ್ತಿದ್ದರು ಮತ್ತು ಇತ್ತೀಚೆಗೆ ಇಬ್ಬರು ಗ್ಯಾಂಗ್‌ಸ್ಟರ್‌ಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಈ ಘಟನೆಯನ್ನು ವಿವರಿಸಿರುವ ವಕೀಲ ವಿಕಾಸ್ ಸಿಂಗ್ “ಇದು ನ್ಯಾಯಾಂಗದ ಮೇಲಿನ ಲಜ್ಜೆಗೆಟ್ಟ ದಾಳಿ. ಈ ಕುರಿತು ಸಿಬಿಐ ತನಿಖೆ ನಡೆಸಬೇಕಾಗಿದೆ. ಬೆಳಿಗ್ಗೆ ವಾಕಿಂಗ್ ಮಾಡುವಾಗ ನ್ಯಾಯಾಧೀಶರನ್ನು ಆಟೋದಲ್ಲಿ ಗುದ್ದಿ ಸಾಯಿಸುವುದು ಎಂದರೆ ಏನರ್ಥ? ಅವರು ಗ್ಯಾಂಗ್‌ಸ್ಟರ್‌ಗಳ ಜಾಮೀನು ವಿಚಾರಣೆ ನಡೆಸುತ್ತಿದ್ದರು. ಇದು ನ್ಯಾಯಾಂಗ ಸ್ವಾತಂತ್ರ್ಯದ ಮೇಲಿನ ದಾಳಿ” ಎಂದು ನೋವು ತೋಡಿಕೊಂಡಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮುಂದೆ ಈ ಪ್ರಕರಣವನ್ನು ಪ್ರಸ್ತಾಪಿಸುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ: ರಸ್ತೆಯಲ್ಲಿ ಮಲಗಿದ್ದ 18 ಕಾರ್ಮಿಕರ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...