Homeಮುಖಪುಟಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಸುಮಾರು 200 ಅಸ್ಸಾಂ ಪೊಲೀಸರು ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ-ಮಿಜೋರಾಂ ಗೃಹ ಸಚಿವ

- Advertisement -
- Advertisement -

ಅಸ್ಸಾಂ- ಮಿಜೋರಾಂ ಈಶಾನ್ಯ ರಾಜ್ಯಗಳ ನಡುವಿನ ವಿವಾದಿತ ಗಡಿಯಲ್ಲಿ ಸೋಮವಾರ ನಡೆದ ಗಡಿ ಘರ್ಷಣೆಯ ಪಿತೂರಿಯಲ್ಲಿ ಮಿಜೋರಾಂನ ಆಡಳಿತ ಪಕ್ಷದ ಸಂಸತ್ ಸದಸ್ಯನ ಪಾತ್ರವಿದೆ ಎಂದಿರುವ ಅಸ್ಸಾಂ ಪೊಲೀಸರು. ಇದರ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

“ರಾಜ್ಯಸಭಾ ಸಂಸದ ಕೆ.ವನ್ಲಾಲ್ವೆನಾ ಅವರ ಮಾಧ್ಯಮ ಸಂದರ್ಶನ ಬೆಳಕಿಗೆ ಬಂಬ ಬಳಿಕ, ಸಂಘರ್ಷದ ಹಿಂದಿನ ಪಿತೂರಿಯಲ್ಲಿ ಅವರ ಪಾತ್ರವಿರುವುದು ತಿಳಿದೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಅಸ್ಸಾಂ ಪೊಲೀಸರ ತನಿಖಾ ತಂಡವು ದೆಹಲಿಗೆ ತೆರಳುತ್ತಿದೆ’ ಎಂದು ಬುಧವಾರ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

ಸಂದರ್ಶನದಲ್ಲಿ ಅಸ್ಸಾಂ ಪೊಲೀಸರು ಮತ್ತೆ ತಮ್ಮ ರಾಜ್ಯದ ಭೂಪ್ರದೇಶಕ್ಕೆ ಪ್ರವೇಶಿಸಿದರೆ ಎಲ್ಲರೂ ಕೊಲ್ಲಲ್ಪಡುತ್ತಾರೆ ಎಂದು ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಅಸ್ಸಾಂ ಪೋಲಿಸರು ಆರೋಪಿಸಿದ್ದಾರೆ. ಕೆ.ವನ್ಲಾಲ್ವೆನಾ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್‌ ಸಂಸದರಾಗಿದ್ದಾರೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಅಸ್ಸಾಂ ಪೊಲೀಸರು, ಸಂಸದರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮತ್ತು ಕೊಲೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ಅತಿಕ್ರಮಣ, ಮಾನವ ಜೀವಕ್ಕೆ ಅಪಾಯ, ಕೊಲೆ ಯತ್ನ ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಅಸ್ಸಾಂನ ಆರು ಪೊಲೀಸರು ಹತ್ಯೆಯಾಗಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಸಂಘರ್ಷದಲ್ಲಿ ಭಾಗಿಯಾಗಿರುವವರ ಬಂಧನಕ್ಕೆ ಪೂರಕವಾದ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಘರ್ಷಣೆಗಳಿಂದ ಅಸ್ಸಾಂ ಕಡೆಯಿಂದ 41 ಜನರು ಗಾಯಗೊಂಡಿದ್ದರೆ, ಮಿಜೋರಾಂ ತನ್ನ ಕಡೆಯಿಂದ ಯಾವುದೇ ಗಾಯಗಳ ವಿವರಗಳನ್ನು ನೀಡಿಲ್ಲ. ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ. ಘರ್ಷಣೆ ಬಗ್ಗೆ ಉಭಯ ರಾಜ್ಯಗಳು ಪರಸ್ಪರ ದೂಷಿಸುತ್ತಿವೆ.

ಮಿಜೋರಾಂನ ಗೃಹ ಸಚಿವ ಲಾಲ್‌ಚಾಮ್ಲಿಯಾನಾ, ಸುಮಾರು 200 ಅಸ್ಸಾಂ ಪೊಲೀಸ್ ಸಿಬ್ಬಂದಿ ತಮ್ಮ ರಾಜ್ಯಕ್ಕೆ ಬಲವಂತವಾಗಿ ಪ್ರವೇಶಿಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಗಡಿ ವಿವಾದವೇನು?

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೋಲಾಸಿಬ್ ಮತ್ತು ಮಾಮಿತ್ ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಈ ಪ್ರದೇಶವು ಹಲವು ವರ್ಷಗಳಿಂದ ಘರ್ಷಣೆಯಲ್ಲಿ ಮುಳುಗಿದೆ. ಸ್ಥಳೀಯರು ಮತ್ತು ಭದ್ರತಾ ಪಡೆಗಳು ಒಳನುಸುಳುವಿಕೆ ಬಗ್ಗೆ ಪದೇ ಪದೇ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಗಡಿ ಗುರುತಿಸುವಿಕೆಯನ್ನು ಎದುರಿಸಲು ಮಿಜೋರಾಂ ಸರ್ಕಾರ ಗಡಿ ಆಯೋಗವನ್ನು ರಚಿಸಿದೆ. ಅಸ್ಸಾಂ ರಾಜ್ಯವು ಮೇಘಾಲಯ ಮತ್ತು ಅರುಣಾಚಲ ಪ್ರದೇಶದೊಂದಿಗೆ ಗಡಿ ವಿವಾದಗಳನ್ನು ಹೊಂದಿದೆ.


ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...