Homeಅಂಕಣಗಳುಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

ಬಹುಜನ ಭಾರತ; ಫ್ಯಾಸಿಸ್ಟ್ ಕನ್ನಡಿಯನ್ನು ಒಡೆಯಿರೆಂಬ ಹರಾರಿ ಕಿವಿಮಾತು

- Advertisement -
- Advertisement -

ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದ ಮಹಾಸ್ಫೋಟಕ್ಕೆ ಭೂಮಂಡಲ ಸಾಕ್ಷಿಯಾಗಿದೆ. ಮಾಹಿತಿ ಅಥವಾ ಡೇಟಾವನ್ನು ಹೊಸ ಪ್ರಬಲ ಅಸ್ತ್ರ ಎಂದು ಬಣ್ಣಿಸಲಾಗುತ್ತಿದೆ. ಡೇಟಾವನ್ನು ನಿಯಂತ್ರಿಸುವಾತನೇ ಸರ್ವಶಕ್ತ ಎಂಬುದು ಈ ಯುಗದ ಹೊಸ ಸತ್ಯ.

ಚಿಂತಕರು, ತಂತ್ರಜ್ಞನಿಪುಣರು ಕೆಲವು ವರ್ಷಗಳಿಂದ ಪ್ರತಿಪಾದಿಸುತ್ತಾ ಬಂದಿರುವ ಈ ಅಂಶ ದಿನಗಳೆದಂತೆ ಮತ್ತಷ್ಟು ಗಟ್ಟಿಯಾಗಿ ಸ್ಫುಟವಾಗಿ ಹರಳುಗಟ್ಟತೊಡಗಿದೆ. ಜೊತೆಜೊತೆಗೆ ಸರ್ವಾಧಿಕಾರಗಳು, ಧ್ರುವೀಕರಣ ರಾಜಕಾರಣ ಬೇರಿಳಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ತಮ್ಮ ಮೇಲೆ ಪ್ರಯೋಗಿಸಲಾಗಿರುವ ಮಂಕುಬೂದಿಯನ್ನು ಜನಸಮುದಾಯಗಳು ಕೊಡವಿಕೊಳ್ಳದಿದ್ದರೆ ಈ ಅಪಾಯ ಕೈಮೀರಲಿದೆ ಮತ್ತು ಗಹಗಹಿಸಲಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಈ ಸನ್ನಿವೇಶದಲ್ಲಿ ಇಸ್ರೇಲಿ ಮೂಲದ ಜಗತ್ಪ್ರಸಿದ್ಧ ಯುವ ಚಿಂತಕ ಯುವಾಲ್ ನೋವಾ ಹರಾರಿ ಅವರ ಕೆಳಕಂಡ ಚಿಂತನೆಗೆ ಕಿವಿಗೊಟ್ಟು ಧೇನಿಸಬೇಕಿದೆ.

ಹರಾರಿ ಹೇಳುತ್ತಾರೆ… ಆರಂಭದಲ್ಲಿ ಭೂವಿಸ್ತಾರ, ಆನಂತರ ಯಂತ್ರಗಳು, ಇದೀಗ ಡೇಟಾ ಬಹುದೊಡ್ಡ ಆಸ್ತಿಯೆಂದು ಪರಿಗಣಿಸಲಾಗಿದೆ. ಡೇಟಾವನ್ನು ನಿಯಂತ್ರಿಸುವವರು ಭಾರೀ ಜನಸಮೂಹಗಳನ್ನು ಮತ್ತು ಆ ಮೂಲಕ ಅಧಿಕಾರವನ್ನು ನಿಯಂತ್ರಿಸುತ್ತಾರೆ ಎನ್ನುವ ವಾದ ಊರ್ಜಿತಗೊಂಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿಯೇ ಉದಾರವಾದಿ ಜನತಂತ್ರದ ಪಾಲಿಗೆ ಬಲು ದೊಡ್ಡ ಬೆದರಿಕೆಯಾಗಿ ಪರಿಣಮಿಸಿದೆ. ಮಾಹಿತಿ ತಂತ್ರಜ್ಞಾನವು ಕಟಾವು ಮಾಡಿರುವ ಡೇಟಾದ ಮಹಾ ಇಳುವರಿಯು ಜನತಂತ್ರಗಳಿಗೆ ಶಕ್ತಿ ತುಂಬುವ ಬದಲು ಸರ್ವಾಧಿಕಾರಗಳ ಕೈ ಬಲಪಡಿಸಲಿದೆ

ಸರ್ವಾಧಿಕಾರಗಳು ತಮ್ಮ ಲಾಭಕ್ಕಾಗಿ ಎಲ್ಲ ಡೇಟಾವನ್ನು ಒಂದೆಡೆ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿವೆ. ತಂತ್ರಜ್ಞಾನ ಬೆಳೆದಂತೆಲ್ಲ ಅಪಾರ ಡೇಟಾವನ್ನು ಒಂದೆಡೆ ಸಂಸ್ಕರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸಲೀಸಾಗಿ ಹೋಗಿದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೀವತಂತ್ರಜ್ಞಾನ (ಐಟಿ ಮತ್ತು ಬಿಟಿ) ಒಂದರೊಡನೆ ಮತ್ತೊಂದು ವಿಲೀನಗೊಳ್ಳುವ ವಿದ್ಯಮಾನವು ’ಆಲ್ಗರಿದಮ್’ಗಳನ್ನು ಸೃಷ್ಟಿಸಿದೆ. ಈ ’ಆಲ್ಗರಿದಮ್’ಗಳು ವ್ಯಕ್ತಿಗಳ ಅನಿಸಿಕೆ ಆಶಯ ಆಯ್ಕೆಗಳನ್ನು ಖುದ್ದು ಅವರೇ ಅರಿತಿರುವುದಕ್ಕಿಂತ ಹೆಚ್ಚು ನಿಖರವಾಗಿ ನಿಚ್ಚಳವಾಗಿ ಅರಿಯಬಲ್ಲವು. ಸರ್ಕಾರದಂತಹ ಸಂಸ್ಥೆಗಳು ಈ ತಂತ್ರಜ್ಞಾನದ ಲಾಭ ಪಡೆದು ಜನಸಮುದಾಯಗಳ ಒಲವು ನಿಲುವುಗಳನ್ನು ಮುಂದಾಗಿಯೇ ಕಂಡುಕೊಳ್ಳಬಲ್ಲವು. ಆವರ ಭಾವನೆಗಳನ್ನು ತಮಗೆ ಬೇಕಾದಂತೆ ತಿದ್ದಿ ತೀಡಬಲ್ಲವು. ಉದಾಹರಣೆಗೆ ತನ್ನ ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಲಾರದ ಸರ್ವಾಧಿಕಾರಿಯೊಬ್ಬನು ತನ್ನ ಜನರು ತನ್ನನ್ನು ಪ್ರೀತಿಸುವಂತೆಯೂ ಪ್ರತಿಪಕ್ಷಗಳನ್ನು ದ್ವೇಷಿಸುವಂತೆಯೂ ಮಾಡಬಲ್ಲ. ಅಂತಹ ವಿರೋಧಾಭಾಸದ ಪರಿಸ್ಥಿತಿಯಲ್ಲಿ ಜನತಂತ್ರ ಉಳಿದು ಬೆಳೆಯಲಾರದು. ಅಂತಹ ವಾತಾವರಣದಲ್ಲಿ ಜನತಂತ್ರವು ಸರಿತಪ್ಪುಗಳನ್ನು ವಿವೇಚಿಸುವ ಮಾನವ ಆಲೋಚನಾ ಶಕ್ತಿಯ ಆಧಾರವನ್ನು ಕಳೆದುಕೊಳ್ಳುತ್ತದೆ. ಬುದ್ಧಿಯ ಜಾಗವನ್ನು ಭಾವುಕತೆ ಆವರಿಸುತ್ತದೆ. ನಮ್ಮ ಭಾವನೆಗಳನ್ನು ಹ್ಯಾಕ್ ಮಾಡಿ ಧ್ರುವೀಕರಣ ಮಾಡಿ ಜನತಂತ್ರವನ್ನು ನಾಶ ಮಾಡಲು ಬಳಸಿಕೊಳ್ಳಲಾಗುತ್ತದೆ. ಜನತಂತ್ರವು ಕೇವಲ ಒಂದು ಭಾವನಾತ್ಮಕ ಗೊಂಬೆಯಾಟ ಆಗಿಬಿಡುತ್ತದೆ.

ಇಂತಹ ಅಪಾಯವನ್ನು ತಪ್ಪಿಸಲು ಭಾರೀ ಡೇಟಾ ಒಂದೇ ಕಡೆ ಕೇಂದ್ರೀಕೃತ ಆಗುವುದನ್ನು ತಪ್ಪಿಸಬೇಕು. ಡೇಟಾ ನಿಯಂತ್ರಿಸುವವರು ನಮ್ಮ ಭಾವನೆಗಳನ್ನು ತಮ್ಮ ಅಗತ್ಯಗಳಿಗೆ ತಕ್ಕಂತೆ ತಿದ್ದಿ ತೀಡಿಕೊಳ್ಳುವುದಕ್ಕೆ ಆಗ ಸಾಧ್ಯವಾಗುವುದಿಲ್ಲ.

ದೈನಂದಿನ ಗ್ರಾಹಕ ಸರಕು ಸರಂಜಾಮುಗಳನ್ನು ನಮಗೆ ಮಾರಾಟ ಮಾಡಲು ಮಾಹಿತಿ ತಂತ್ರಜ್ಞಾನದ ಆಲ್ಗರಿದಂ ವಿಧಾನದ ಪ್ರಯೋಗ ಈಗಾಗಲೆ ಜಾರಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಜನತಂತ್ರದ ಶತ್ರುಗಳು ಇದೇ ವಿಧಾನವನ್ನು ಅನುಸರಿಸಿ ಭಯ, ದ್ವೇಷ ಹಾಗೂ ಒಣಪ್ರತಿಷ್ಠೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಇವುಗಳ ಮಾರಾಟ ಶೂನ್ಯದಲ್ಲಿ ಸಾಧ್ಯವಿಲ್ಲ. ಅವರು ಜನಸಮೂಹಗಳ ದೌರ್ಬಲ್ಯಗಳನ್ನು ಗುರುತಿಸಿ ಅವುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ತಮ್ಮ ದೌರ್ಬಲ್ಯಗಳು ಜನತಂತ್ರದ ಶತ್ರುಗಳ ಕೈಯಲ್ಲಿನ ಅಸ್ತ್ರವಾಗದಂತೆ ಜನಸಮೂಹಗಳು ಜಾಗ್ರತೆ ವಹಿಸಬೇಕು. ದೌರ್ಬಲ್ಯಗಳನ್ನು ಅರಿತು ಇಂತಹ ಎಚ್ಚರಿಕೆ ವಹಿಸುವುದು ಜನರನ್ನು ಫ್ಯಾಸಿಸ್ಟ್ ಕನ್ನಡಿಯಿಂದಲೂ ಕಾಪಾಡುತ್ತದೆ. ಫ್ಯಾಸಿಸಮ್ ನಮ್ಮ ಒಣಪ್ರತಿಷ್ಠೆಯಂತಹ ದೌರ್ಬಲ್ಯಗಳನ್ನು ಬಳಸಿಕೊಂಡು ಬೇರೂರುತ್ತದೆ. ನಾವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ನಮ್ಮನ್ನು ತೋರುತ್ತದೆ. ನಮ್ಮನ್ನು ನಾವು ಚೆನ್ನಾಗಿ ಬಲ್ಲೆವಾದರೆ ಈ ಮೋಹಪರವಶತೆಗೆ ಬಲಿ ಬೀಳುವುದು ಸಾಧ್ಯವಿಲ್ಲ. ಸರ್ವಾಧಿಕಾರಿಗಳು ನಿಮ್ಮ ಕಣ್ಣೆದುರಿಗೆ ಫ್ಯಾಸಿಸ್ಟ್ ಕನ್ನಡಿಯೊಂದನ್ನು ಇಡುತ್ತಾರೆ. ಆ ಕನ್ನಡಿಯು ನಿಮ್ಮ ಎಲ್ಲ ಕುರೂಪವನ್ನು ಅಡಗಿಸಿಟ್ಟು ನೀವು ಇರುವುದಕ್ಕಿಂತಲೂ ಹೆಚ್ಚು ಸುಂದರವಾಗಿ ತೋರಿಸುತ್ತದೆ. ನಿಮಗೆ ವಾಸ್ತವದಲ್ಲಿ ಇಲ್ಲದಸಲ್ಲದ ಪ್ರಾಮುಖ್ಯತೆಯನ್ನು ತೊಡಿಸುತ್ತದೆ. ಈ ಅವಾಸ್ತವಿಕ ಕನ್ನಡಿಯನ್ನು ಒಡೆಯಿರಿ….


ಇದನ್ನೂ ಓದಿ: ಬಹುಜನ ಭಾರತ; ಜನತಂತ್ರದ ಸ್ತಂಭಗಳ ಮೇಲೆ ನಡೆದ ಕರಾಳ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...