Homeಮುಖಪುಟ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

- Advertisement -
- Advertisement -

‘ಐಟಿ ಸಂಸದೀಯ ಸ್ಥಾಯಿ ಸಭೆ’ಯಲ್ಲಿ ತೃಣಮೂಲ ಕಾಂಗ್ರೆಸ್‌ ಸಂಸದೆ ಮಾಹುವಾ ಮೊಯಿತ್ರಾ ಅವರು ತನ್ನನ್ನು ‘ಬಿಹಾರಿ ಗೂಂಡಾ’ ಎಂದು ಮೂರು ಬಾರಿ ಕರೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದುಬೆ ದೂರು ನೀಡಿದ್ದಾರೆ.

ಆದರೆ ಮಾಹುವಾ ಮೊಯಿತ್ರಾ ಅವರು ಈ ಆರೋಪವನ್ನು ನಿರಾಕರಿಸಿದ್ದು, ಈ ಸಭೆ ನಡೆದೆ ಇಲ್ಲ, ನಡೆಯದ ಸಭೆಯಲ್ಲಿ ಇದು ಹೇಗೆ ಸಾಧ್ಯ ಎಂದು ಅವರು ಕೇಳಿದ್ದಾರೆ.

ಈ ಬಗ್ಗೆ ಬುಧವಾರದಂದು ಹೇಳಿಕೆ ನೀಡಿದ ದುಬೆ, “ಹಿಂದಿ ಮಾತನಾಡುವ ಎಲ್ಲಾ ಜನರ ಮೇಲೆ ಟಿಎಂಸಿಗೆ ಅಲರ್ಜಿ ಇದೆ. ಅದಕ್ಕಾಗಿಯೇ ಅವರು ನನ್ನನ್ನು ‘ಬಿಹಾರಿ ಗೂಂಡಾ’ ಎಂದು ಕರೆದರು. ಇದು ಬಿಹಾರದ ಅಭಿಮಾನದ ಮೇಲಿನ ದಾಳಿ. ನಾನು ಎಲ್ಲ ಸಂಗತಿಗಳನ್ನು ಸ್ಪೀಕರ್‌ಗೆ ತಿಳಿಸಿದ್ದೇನೆ. ಮಾಹುವಾ ಮೊಯಿತ್ರಾ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

ಅಲ್ಲದೆ ತೃಣಮೂಲ ಮುಖ್ಯಸ್ಥೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ ಅವರು, “ಬಿಹಾರಿ ಗೂಂಡಾ ಎಂಬ ಪದಗಳನ್ನು ಬಳಸಿ ನಿಮ್ಮ ಸಂಸದರು ನನ್ನನ್ನು ನಿಂದಿಸಿರುವುದು, ಉತ್ತರ ಭಾರತೀಯರು ಮತ್ತು ಹಿಂದಿ ಮಾತನಾಡುವ ಜನರ ಬಗ್ಗೆ ನಿಮ್ಮ ಪಕ್ಷದ ದ್ವೇಷವನ್ನು ದೇಶದ ಮುಂದೆ ಬಹಿರಂಗವಾಗಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಟ್ವಿಟರ್‌‌ನಲ್ಲೇ ಪ್ರತಿಕ್ರಿಯಿಸಿರುವ ಸಂಸದೆ ಮೊಯಿತ್ರಾ, “ಹೆಸರು ಕರೆದಿದ್ದೇನೆ ಎಂಬ ಆರೋಪ ನನ್ನ ಮೇಲೆ ಹಾಕಲಾಗಿದೆ. ಯಾವುದೇ ಕೋರಂ – ಸದಸ್ಯರು ಹಾಜರಾಗದ ಕಾರಣ ಐಟಿ ಸಭೆ ನಡೆಯಲಿಲ್ಲ. ಹಾಜರಿಲ್ಲದ ಒಬ್ಬರ ಹೆಸರನ್ನು ನಾನು ಹೇಗೆ ಕರೆಯಲು ಸಾಧ್ಯ!! ಹಾಜರಾತಿ ಪಟ್ಟಿಯನ್ನು ಪರಿಶೀಲಿಸಿ !” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ಅಷ್ಟೇ ಅಲ್ಲದೆ ಸಂಸದೆಯು ತಮ್ಮ ಟ್ವೀಟ್‌ನಲ್ಲಿ, ಕಾಂಗ್ರೆಸ್ ಸಂಸದರಾದ ಶಶಿ ತರೂರ್, ಕಾರ್ತಿ ಚಿದಂಬರಂ ಮತ್ತು ನಾಸಿರ್ ಹುಸೇನ್ ಮತ್ತು ತೃಣಮೂಲ ಸಂಸದ ನದೀಮುಲ್ ಹಕ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ನಿನ್ನೆ ನಡೆಯಬೇಕಿದ್ದ ಐಟಿ ಸಂಸದೀಯ ಸ್ಥಾಯಿ ಸಮಿತಿಯ ಸಭೆಯನ್ನು ಬಿಜೆಪಿ ಸಂಸದರು ಬಹಿಷ್ಕರಿಸಿದ್ದರು ಮತ್ತು ಹಾಜರಾತಿ ನೋಂದಣಿಗೆ ಸಹಿ ಹಾಕಲು ನಿರಾಕರಿಸಿದ್ದರು. ಈ ಸಂಸದೀಯ ಸಮಿತಿಯಲ್ಲಿನ ಅಧ್ಯಕ್ಷರಾಗಿರುವ ಶಶಿ ತರೂರ್ ಅವರನ್ನು ಹುದ್ದೆಯಿಂದ ತೆಗೆದು ಹಾಕಬೇಕೆಂಬ ದುಬೆ ಅವರು ಬೇಡಿಕೆಯಿಟ್ಟಿದ್ದರು.

ಇಸ್ರೇಲಿ ಮೂಲದ ಪೆಗಾಸಸ್‌ ತಂತ್ರಾಂಶ ಬಳಸಿ ಪ್ರತಿಪಕ್ಷದ ರಾಜಕಾರಣಿಗಳು, ಇಬ್ಬರು ಒಕ್ಕೂಟ ಸರ್ಕಾರದ ಮಂತ್ರಿಗಳು ಮತ್ತು 40 ಪತ್ರಕರ್ತರ ಮೇಲೆ ಕಣ್ಗಾವಲು ಮಾಡಿರುವ ವಿವಾದದ ಬಗ್ಗೆ ಚರ್ಚೆ ನಡೆಸಲು ಐಟಿ ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆದಿತ್ತು. ಆದರೆ ಸಾಕಷ್ಟು ಸದಸ್ಯರು ಭಾಗವಹಿಸದೆ ಇರುವುದರಿಂದ ಸಭೆಯು ರದ್ದುಗೊಂಡಿತು.

ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ವಿಡಿಯೊ ನೋಡಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದ ಕೇಂದ್ರ ಸರ್ಕಾರ.. ಹಾಗಾದರೆ ಇವು ಏನು??

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...