Homeಮುಖಪುಟ‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

‘ಬಿಹಾರಿ ಗೂಂಡಾ’ ಎಂದು ನಿಂದಿಸಿದ್ದಾರೆಂದು ಸ್ಪೀಕರ್‌ಗೆ ದೂರು ನೀಡಿದ ಬಿಜೆಪಿ ಸಂಸದ!

- Advertisement -
- Advertisement -

‘ಐಟಿ ಸಂಸದೀಯ ಸ್ಥಾಯಿ ಸಭೆ’ಯಲ್ಲಿ ತೃಣಮೂಲ ಕಾಂಗ್ರೆಸ್‌ ಸಂಸದೆ ಮಾಹುವಾ ಮೊಯಿತ್ರಾ ಅವರು ತನ್ನನ್ನು ‘ಬಿಹಾರಿ ಗೂಂಡಾ’ ಎಂದು ಮೂರು ಬಾರಿ ಕರೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದುಬೆ ದೂರು ನೀಡಿದ್ದಾರೆ.

ಆದರೆ ಮಾಹುವಾ ಮೊಯಿತ್ರಾ ಅವರು ಈ ಆರೋಪವನ್ನು ನಿರಾಕರಿಸಿದ್ದು, ಈ ಸಭೆ ನಡೆದೆ ಇಲ್ಲ, ನಡೆಯದ ಸಭೆಯಲ್ಲಿ ಇದು ಹೇಗೆ ಸಾಧ್ಯ ಎಂದು ಅವರು ಕೇಳಿದ್ದಾರೆ.

ಈ ಬಗ್ಗೆ ಬುಧವಾರದಂದು ಹೇಳಿಕೆ ನೀಡಿದ ದುಬೆ, “ಹಿಂದಿ ಮಾತನಾಡುವ ಎಲ್ಲಾ ಜನರ ಮೇಲೆ ಟಿಎಂಸಿಗೆ ಅಲರ್ಜಿ ಇದೆ. ಅದಕ್ಕಾಗಿಯೇ ಅವರು ನನ್ನನ್ನು ‘ಬಿಹಾರಿ ಗೂಂಡಾ’ ಎಂದು ಕರೆದರು. ಇದು ಬಿಹಾರದ ಅಭಿಮಾನದ ಮೇಲಿನ ದಾಳಿ. ನಾನು ಎಲ್ಲ ಸಂಗತಿಗಳನ್ನು ಸ್ಪೀಕರ್‌ಗೆ ತಿಳಿಸಿದ್ದೇನೆ. ಮಾಹುವಾ ಮೊಯಿತ್ರಾ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

ಅಲ್ಲದೆ ತೃಣಮೂಲ ಮುಖ್ಯಸ್ಥೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ ಅವರು, “ಬಿಹಾರಿ ಗೂಂಡಾ ಎಂಬ ಪದಗಳನ್ನು ಬಳಸಿ ನಿಮ್ಮ ಸಂಸದರು ನನ್ನನ್ನು ನಿಂದಿಸಿರುವುದು, ಉತ್ತರ ಭಾರತೀಯರು ಮತ್ತು ಹಿಂದಿ ಮಾತನಾಡುವ ಜನರ ಬಗ್ಗೆ ನಿಮ್ಮ ಪಕ್ಷದ ದ್ವೇಷವನ್ನು ದೇಶದ ಮುಂದೆ ಬಹಿರಂಗವಾಗಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಟ್ವಿಟರ್‌‌ನಲ್ಲೇ ಪ್ರತಿಕ್ರಿಯಿಸಿರುವ ಸಂಸದೆ ಮೊಯಿತ್ರಾ, “ಹೆಸರು ಕರೆದಿದ್ದೇನೆ ಎಂಬ ಆರೋಪ ನನ್ನ ಮೇಲೆ ಹಾಕಲಾಗಿದೆ. ಯಾವುದೇ ಕೋರಂ – ಸದಸ್ಯರು ಹಾಜರಾಗದ ಕಾರಣ ಐಟಿ ಸಭೆ ನಡೆಯಲಿಲ್ಲ. ಹಾಜರಿಲ್ಲದ ಒಬ್ಬರ ಹೆಸರನ್ನು ನಾನು ಹೇಗೆ ಕರೆಯಲು ಸಾಧ್ಯ!! ಹಾಜರಾತಿ ಪಟ್ಟಿಯನ್ನು ಪರಿಶೀಲಿಸಿ !” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ಅಷ್ಟೇ ಅಲ್ಲದೆ ಸಂಸದೆಯು ತಮ್ಮ ಟ್ವೀಟ್‌ನಲ್ಲಿ, ಕಾಂಗ್ರೆಸ್ ಸಂಸದರಾದ ಶಶಿ ತರೂರ್, ಕಾರ್ತಿ ಚಿದಂಬರಂ ಮತ್ತು ನಾಸಿರ್ ಹುಸೇನ್ ಮತ್ತು ತೃಣಮೂಲ ಸಂಸದ ನದೀಮುಲ್ ಹಕ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ನಿನ್ನೆ ನಡೆಯಬೇಕಿದ್ದ ಐಟಿ ಸಂಸದೀಯ ಸ್ಥಾಯಿ ಸಮಿತಿಯ ಸಭೆಯನ್ನು ಬಿಜೆಪಿ ಸಂಸದರು ಬಹಿಷ್ಕರಿಸಿದ್ದರು ಮತ್ತು ಹಾಜರಾತಿ ನೋಂದಣಿಗೆ ಸಹಿ ಹಾಕಲು ನಿರಾಕರಿಸಿದ್ದರು. ಈ ಸಂಸದೀಯ ಸಮಿತಿಯಲ್ಲಿನ ಅಧ್ಯಕ್ಷರಾಗಿರುವ ಶಶಿ ತರೂರ್ ಅವರನ್ನು ಹುದ್ದೆಯಿಂದ ತೆಗೆದು ಹಾಕಬೇಕೆಂಬ ದುಬೆ ಅವರು ಬೇಡಿಕೆಯಿಟ್ಟಿದ್ದರು.

ಇಸ್ರೇಲಿ ಮೂಲದ ಪೆಗಾಸಸ್‌ ತಂತ್ರಾಂಶ ಬಳಸಿ ಪ್ರತಿಪಕ್ಷದ ರಾಜಕಾರಣಿಗಳು, ಇಬ್ಬರು ಒಕ್ಕೂಟ ಸರ್ಕಾರದ ಮಂತ್ರಿಗಳು ಮತ್ತು 40 ಪತ್ರಕರ್ತರ ಮೇಲೆ ಕಣ್ಗಾವಲು ಮಾಡಿರುವ ವಿವಾದದ ಬಗ್ಗೆ ಚರ್ಚೆ ನಡೆಸಲು ಐಟಿ ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆದಿತ್ತು. ಆದರೆ ಸಾಕಷ್ಟು ಸದಸ್ಯರು ಭಾಗವಹಿಸದೆ ಇರುವುದರಿಂದ ಸಭೆಯು ರದ್ದುಗೊಂಡಿತು.

ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ವಿಡಿಯೊ ನೋಡಿ: ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದ ಕೇಂದ್ರ ಸರ್ಕಾರ.. ಹಾಗಾದರೆ ಇವು ಏನು??

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...