Homeಕರ್ನಾಟಕಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

- Advertisement -
- Advertisement -

“ಎರಡು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ, ಶಾಸಕರನ್ನು ಕೊಂಡುಕೊಂಡು ವಾಮಮಾರ್ಗದ ಮೂಲಕ ಯಡಿಯೂರಪ್ಪ ಅಧಿಕಾರಕ್ಕೆ ಬಂದರು. ಅದಕ್ಕೆ ಈ ಸರ್ಕಾರವನ್ನು ಅನೈತಿಕ ಸರ್ಕಾರ ಎಂದು ಕರೆಯುತ್ತೇವೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆದ, ಬಿಜೆಪಿ ಸರ್ಕಾರದ 2 ವರ್ಷಗಳ ಆಡಳಿತದ ವೈಫಲ್ಯಗಳ ಕುರಿತು ಪತ್ರಿಕಾಗೋಷ್ಠಿ ಮತ್ತು ಕಿರು ಹೊತ್ತಿಗೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಬಿಜೆಪಿ ವೈಫಲ್ಯಗಳ ಪುಸ್ತಕವನ್ನು ಬಿಡುಗಡೆ ಮಾಡಿದ ಅವರು,  “ಭ್ರಷ್ಟಾಚಾರ ಮತ್ತು ಕಪ್ಪುಹಣದ ಮೂಲಕವೆ ರಚಿಸಲ್ಪಟ್ಟ ಸರ್ಕಾರ ದುರಾಡಳಿತ, ಭ್ರಷ್ಟಾಚಾರವನ್ನು ಮತ್ತು ಶೂನ್ಯ ಅಭಿವೃದ್ದಿ ಮಾಡಿದೆ. ಹೆಣ್ಣುಮಕ್ಕಳಿಗೆ ಮತ್ತು ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಅವರು ದುಡ್ದು ಹೊಡೆದಿದ್ದಾರೆ. ಕೊರೊನಾ ಸೋಂಕು ಬಂದಾಗ ಅದರ ಸಲಕರಣೆಯಲ್ಲೂ ಅವರು ಭ್ರಷ್ಟಾಚಾರ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ

“ಮೊದಲನೆ ಅಲೆ ಮತ್ತುಎರಡನೆ ಅಲೆಯಲ್ಲಿ 36 ಸಾವಿರ ಜನರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರ ಹೇಳುತ್ತದೆ, ಆದರೆ ನನ್ನ ಲೆಕ್ಕಾಚಾರಗಳ ಪ್ರಕಾರ ಇದರ ಪ್ರಮಾಣ ಹತ್ತು ಪಟ್ಟು ಹೆಚ್ಚಿದೆ. ಅಂದರೆ ಮೂರುವರೆ ಲಕ್ಷ ಜನರು ಕೊರೊನಾದಿಂದ ಸಾವಿಗೀಡಾಗಿದ್ದಾರೆ. ಚಾಮರಾಜನಗರದಲ್ಲಿ ನಡೆದ ಘಟನೆಯಲ್ಲೇ ಅವರು ಸುಳ್ಳು ಹೇಳಿದ್ದಾರೆ. ಇದೊಂದು ಉದಾಹರಣೆ ಮಾತ್ರ. ಇಡೀ ದೇಶದಲ್ಲಿ ಐವತ್ತು ಲಕ್ಷ ಜನರು ಸತ್ತಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ” ಎಂದು ಕೇಳಿದ್ದಾರೆ.

ಪತ್ರಿಕಾಗೋಷ್ಟಿಯ ನಂತರ ಟ್ವೀಟ್ ಮಾಡಿದ ಅವರು, “ಯಡಿಯೂರಪ್ಪನವರ ಸರ್ಕಾರಕ್ಕೆ ಜುಲೈ 26 ಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನಾ ಕಾರ್ಯಕ್ರಮವನ್ನು ಮಾಡಿ, ಕಷ್ಟದ ಕಾಲದಲ್ಲೂ ತಾವೇನೋ ಸಾಧನೆ ಮಾಡಿದ್ದೇವೆ ಎಂದು ಸುಳ್ಳುಗಳನ್ನು ಹೇಳಿದ್ದಾರೆ. ನನ್ನ ಪ್ರಕಾರ ಭ್ರಷ್ಟಾಚಾರವೇ ಇವರ ಎರಡು ವರ್ಷದ ದೊಡ್ಡ ಸಾಧನೆ” ಎಂದು ಕಿಡಿ ಕಾರಿದ್ದಾರೆ.

“ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಅಧಿವೇಶನವನ್ನೇ ಮಾಡಿಲ್ಲ, 371(ಜೆ) ಅಡಿ ಹೈದ್ರಾಬಾದ್ ಕರ್ನಾಟದ ಅಭಿವೃದ್ಧಿಗೆ ನೀಡಬೇಕಿದ್ದ ಅನುದಾನವನ್ನು 1 ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಿಸಿದರೆ ಸಾಕೆ? ಕರ್ನಾಟಕ ಕಲ್ಯಾಣವಾಗುವುದು ಬೇಡವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಒಬ್ಬ ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ: ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...