Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...