Homeಮುಖಪುಟಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಅಸ್ಸಾಂ ಮತ್ತು ಮಿಜೋರಾಂ ಅಂತರ ರಾಜ್ಯ ಗಡಿಯಲ್ಲಿ ನಡೆದ ಸಂಘರ್ಷದಿಂದಾಗಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇದಾಗಿಯು ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಈ ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

“ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ಹೇಳಿದೆ.

ಮಿಜೋರಾಂನಲ್ಲಿ ಕೆಲಸ ಮಾಡುತ್ತಿರುವ ರಾಜ್ಯದ ಜನರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಅಸ್ಸಾಂ ಸರ್ಕಾರ ಸಲಹೆ ನೀಡಿದೆ. ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಪ್ರತಿಯೊಂದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಸರ್ಕಾರ ಹೇಳಿದೆ.

“ಅಕ್ರಮ ಮಾದಕವಸ್ತುಗಳ ಕಳ್ಳಸಾಗಣೆ ಪರಿಶೀಲಿಸಲು, ಮಿಜೋರಾಂನಿಂದ ಅಸ್ಸಾಂಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸುವುದು ಅವಶ್ಯಕ. ವಾಹನಗಳನ್ನು ಅಸ್ಸಾಂ ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸುತ್ತಾರೆ. ಸಬ್‌ ಇನ್ಸ್‌‌ಪೆಕ್ಟರ್‌‌ ಹುದ್ದೆಗಿಂತ ಕೆಳಗಿಲ್ಲದ ಅಧಿಕಾರಿಯೊಬ್ಬರು ವಾಹನಗಳನ್ನು ಪರಿಶೀಲಿಸಿ ವಾಹನದಲ್ಲಿ ಅಕ್ರಮ ದ್ರವ್ಯಗಳು ಇಲ್ಲ ಎಂದು ತಿಳಿದ ನಂತರವೇ ಬಿಡುಗಡೆ ಮಾಡಲಾಗುವುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಈ ಮಧ್ಯೆ, ಅಸ್ಸಾಂ ಮೂಲದ ಸಂಘಟನೆ ಮಿಜೋರಾಂಗೆ ಹೇರಿದ ಆರ್ಥಿಕ ದಿಗ್ಬಂಧನ ಮುಂದುವರೆದಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡುವಂತೆ ಮಿಜೋರಾಂ ಒಕ್ಕೂಟ ಸರ್ಕಾರವನ್ನು ಕೋರಿದೆ.

ಅಸ್ಸಾಂ ಸಿಎಂ ವಿರುದ್ದ ಕಿಡಿ ಕಾರಿದ ವಿದ್ಯಾರ್ಥಿ ನಾಯಕ

ಮಿಜೋ ಸ್ಟೂಡೆಂಟ್ಸ್ ಯೂನಿಯನ್ (ಎಂಎಸ್‌ಯು) ಅಧ್ಯಕ್ಷ ಜೆ. ಲಾಲ್ಮುವಾನ್‌ಜುವಲಾ, “ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಈಶಾನ್ಯ ರಾಜ್ಯಗಳ ಶಾಂತಿಗೆ ಭಂಗ ಮಾಡಿದ್ದಾರೆ. ಅವರು ರಾಜಕೀಯ ಜಗತ್ತಿಗೆ ಪ್ರವೇಶಿಸುವ ಮೊದಲು ಇಲ್ಲಿ ಶಾಂತಿ ಇತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ 1 ಲಕ್ಷ ಬಹುಮಾನ ಘೋಷಿಸಿದ ಮಿಜೋರಾಂ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...