Homeಮುಖಪುಟತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

- Advertisement -
- Advertisement -

ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರಲ್ಲಿ ಗುರುವಾರ ಪ್ರಕಟವಾದ ವರದಿಯಲ್ಲಿ ಹೇಳಲಾಗಿದೆ.

38 ವರ್ಷದ ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ದಾನಿಶ್ ಸಿದ್ದೀಕಿ ಕಸ್ಟಮ್ಸ್ ಪೋಸ್ಟ್‌ ಬಳಿಯಿದ್ದಾಗ ತಾಲಿಬಾನಿಗಳ ದಾಳಿಯಿಂದ ಅವರ ತಂಡ ಬೇರ್ಪಟ್ಟಿತ್ತು. ಅಫ್ಘಾನ್‌‌‌‌ ವಿಶೇಷ ಪಡೆಯ ಕಮಾಂಡರ್ ಮತ್ತು ಇತರ ಸೈನಿಕರು ಸಿದ್ದೀಕಿ ಅವರಿಂದ ಬೇರ್ಪಟ್ಟು, ಅವರು ಇತರ ಮೂರು ಅಫ್ಘಾನ್ ಪಡೆಗಳೊಂದಿಗೆ ಉಳಿದಿದ್ದರು ಎಂದು ವಾಷಿಂಗ್ಟನ್ ಎಕ್ಸಾಮಿನರ್ ವರದಿ ಮಾಡಿದೆ.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ಈ ದಾಳಿಯ ಸಮಯದಲ್ಲಿ, ಸಿದ್ದೀಕಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅವರ ತಂಡವು ಸ್ಥಳೀಯ ಮಸೀದಿಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಆದರೆ, ಒಬ್ಬ ಪತ್ರಕರ್ತ ಮಸೀದಿಯಲ್ಲಿದ್ದನೆಂಬ ಸುದ್ದಿ ಹರಡುತ್ತಿದ್ದಂತೆ, ತಾಲಿಬಾನಿಗಳು ಮಸೀದಿ ಮೇಲೆ ದಾಳಿ ಮಾಡಿದ್ದರು.

ತಾಲಿಬಾನ್‌ಗಳು ಮಸೀದಿಯ ಮೇಲೆ ದಾಳಿ ನಡೆಸಿರುವುದು ಸಿದ್ದಿಕಿಯವರು ಅಲ್ಲಿ ಇದ್ದದ್ದರಿಂದ ಮಾತ್ರವೇ ಎಂದು ಸ್ಥಳೀಯ ತನಿಖೆಯು ವರದಿ ಬಹಿರಂಗ ಪಡಿಸಿದೆ.

“ತಾಲಿಬಾನಿಗಳು ಅವರನ್ನು ಸೆರೆಹಿಡಿದಾಗ ಸಿದ್ದಿಕಿ ಜೀವಂತವಾಗಿದ್ದರು. ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತನ್ನು ಪರಿಶೀಲಿಸಿದ ನಂತರ ಅವರನ್ನು ಮತ್ತು ಅವರ ಜೊತೆಗಿದ್ದವರನ್ನು ಕೊಲ್ಲಲಾಗಿದೆ. ಕಮಾಂಡರ್ ಮತ್ತು ಅವರ ತಂಡದ ಉಳಿದವರು ಸಿದ್ದಿಕಿ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ಸಾವನ್ನಪ್ಪಿದ್ದರು” ಎಂದು ಸ್ಥಳೀಯ ತನಿಖೆಯು ವರದಿ ಹೇಳಿದೆ.

“ವ್ಯಾಪಕವಾಗಿ ವೈರಲ್ ಆದ ಛಾಯಾಚಿತ್ರದಲ್ಲಿ ಸಿದ್ದಿಕಿ ಅವರ ಮುಖವನ್ನು ಗುರುತಿಸಬಹುದು. ಇದರ ಜೊತೆಗೆ ನಾನು ಉಳಿದ ಚಿತ್ರಗಳನ್ನು ಪರಿಶೀಲಿಸಿದ್ದೇನೆ ಮತ್ತು ಸಿದ್ದಿಕಿ ಅವರ ಮೃತದೇಹದ ವಿಡಿಯೊ ಕೂಡ ಪರಿಶೀಲಿಸಿದ್ದು, ತಾಲಿಬಾನಿಗಳು ಸಿದ್ದಿಕಿಯವರ ತಲೆಯ ಸುತ್ತ ಹೊಡೆದು ನಂತರ ಅವರ ದೇಹಕ್ಕೆ ಗುಂಡುಗಳಿಂದ ಹೊಡೆದಿದ್ದಾರೆ” ಎಂದು ಅಮೆರಿಕನ್ ಎಂಟರ್‌ಪ್ರೈಸ್ ಇನ್‌ಸ್ಟಿಟ್ಯೂಟ್‌ನ ಹಿರಿಯ ಬರಹಗಾರ ಮೈಕೆಲ್ ರೂಬಿನ್ ಬರೆದಿದ್ದಾರೆ.

ಸಿದ್ದಿಕಿ ಅವರನ್ನುಈ ರೀತಿಯಲ್ಲಿ ಕೊಲ್ಲುವ ತಾಲಿಬಾನ್ ನಿರ್ಧಾರ ಮತ್ತು ನಂತರ ಅವರ ಮೃತ ದೇಹವನ್ನು ವಿರೂಪಗೊಳಿಸಿರುವುದು, ಯುದ್ಧದ ನಿಯಮಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...