Homeಮುಖಪುಟತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

- Advertisement -
- Advertisement -

ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರಲ್ಲಿ ಗುರುವಾರ ಪ್ರಕಟವಾದ ವರದಿಯಲ್ಲಿ ಹೇಳಲಾಗಿದೆ.

38 ವರ್ಷದ ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ದಾನಿಶ್ ಸಿದ್ದೀಕಿ ಕಸ್ಟಮ್ಸ್ ಪೋಸ್ಟ್‌ ಬಳಿಯಿದ್ದಾಗ ತಾಲಿಬಾನಿಗಳ ದಾಳಿಯಿಂದ ಅವರ ತಂಡ ಬೇರ್ಪಟ್ಟಿತ್ತು. ಅಫ್ಘಾನ್‌‌‌‌ ವಿಶೇಷ ಪಡೆಯ ಕಮಾಂಡರ್ ಮತ್ತು ಇತರ ಸೈನಿಕರು ಸಿದ್ದೀಕಿ ಅವರಿಂದ ಬೇರ್ಪಟ್ಟು, ಅವರು ಇತರ ಮೂರು ಅಫ್ಘಾನ್ ಪಡೆಗಳೊಂದಿಗೆ ಉಳಿದಿದ್ದರು ಎಂದು ವಾಷಿಂಗ್ಟನ್ ಎಕ್ಸಾಮಿನರ್ ವರದಿ ಮಾಡಿದೆ.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ಈ ದಾಳಿಯ ಸಮಯದಲ್ಲಿ, ಸಿದ್ದೀಕಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅವರ ತಂಡವು ಸ್ಥಳೀಯ ಮಸೀದಿಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಆದರೆ, ಒಬ್ಬ ಪತ್ರಕರ್ತ ಮಸೀದಿಯಲ್ಲಿದ್ದನೆಂಬ ಸುದ್ದಿ ಹರಡುತ್ತಿದ್ದಂತೆ, ತಾಲಿಬಾನಿಗಳು ಮಸೀದಿ ಮೇಲೆ ದಾಳಿ ಮಾಡಿದ್ದರು.

ತಾಲಿಬಾನ್‌ಗಳು ಮಸೀದಿಯ ಮೇಲೆ ದಾಳಿ ನಡೆಸಿರುವುದು ಸಿದ್ದಿಕಿಯವರು ಅಲ್ಲಿ ಇದ್ದದ್ದರಿಂದ ಮಾತ್ರವೇ ಎಂದು ಸ್ಥಳೀಯ ತನಿಖೆಯು ವರದಿ ಬಹಿರಂಗ ಪಡಿಸಿದೆ.

“ತಾಲಿಬಾನಿಗಳು ಅವರನ್ನು ಸೆರೆಹಿಡಿದಾಗ ಸಿದ್ದಿಕಿ ಜೀವಂತವಾಗಿದ್ದರು. ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತನ್ನು ಪರಿಶೀಲಿಸಿದ ನಂತರ ಅವರನ್ನು ಮತ್ತು ಅವರ ಜೊತೆಗಿದ್ದವರನ್ನು ಕೊಲ್ಲಲಾಗಿದೆ. ಕಮಾಂಡರ್ ಮತ್ತು ಅವರ ತಂಡದ ಉಳಿದವರು ಸಿದ್ದಿಕಿ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ಸಾವನ್ನಪ್ಪಿದ್ದರು” ಎಂದು ಸ್ಥಳೀಯ ತನಿಖೆಯು ವರದಿ ಹೇಳಿದೆ.

“ವ್ಯಾಪಕವಾಗಿ ವೈರಲ್ ಆದ ಛಾಯಾಚಿತ್ರದಲ್ಲಿ ಸಿದ್ದಿಕಿ ಅವರ ಮುಖವನ್ನು ಗುರುತಿಸಬಹುದು. ಇದರ ಜೊತೆಗೆ ನಾನು ಉಳಿದ ಚಿತ್ರಗಳನ್ನು ಪರಿಶೀಲಿಸಿದ್ದೇನೆ ಮತ್ತು ಸಿದ್ದಿಕಿ ಅವರ ಮೃತದೇಹದ ವಿಡಿಯೊ ಕೂಡ ಪರಿಶೀಲಿಸಿದ್ದು, ತಾಲಿಬಾನಿಗಳು ಸಿದ್ದಿಕಿಯವರ ತಲೆಯ ಸುತ್ತ ಹೊಡೆದು ನಂತರ ಅವರ ದೇಹಕ್ಕೆ ಗುಂಡುಗಳಿಂದ ಹೊಡೆದಿದ್ದಾರೆ” ಎಂದು ಅಮೆರಿಕನ್ ಎಂಟರ್‌ಪ್ರೈಸ್ ಇನ್‌ಸ್ಟಿಟ್ಯೂಟ್‌ನ ಹಿರಿಯ ಬರಹಗಾರ ಮೈಕೆಲ್ ರೂಬಿನ್ ಬರೆದಿದ್ದಾರೆ.

ಸಿದ್ದಿಕಿ ಅವರನ್ನುಈ ರೀತಿಯಲ್ಲಿ ಕೊಲ್ಲುವ ತಾಲಿಬಾನ್ ನಿರ್ಧಾರ ಮತ್ತು ನಂತರ ಅವರ ಮೃತ ದೇಹವನ್ನು ವಿರೂಪಗೊಳಿಸಿರುವುದು, ಯುದ್ಧದ ನಿಯಮಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...