Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...