Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

- Advertisement -
- Advertisement -

ಮುಕ್ತ ಶೈಲಿಯ ಕುಸ್ತಿ ಸ್ಪರ್ಧೆಯಲ್ಲಿ ಇಬ್ಬರು ಮಹಿಳೆಯರು ಕುಸ್ತಿಯಾಡುತ್ತಿರುವ ವಿಡಿಯೊವನ್ನು, ‘‘ಪಾಕಿಸ್ತಾನದ ಕುಸ್ತಿ ಪಟು ಭಾರತವನ್ನು ನಿಂದಿಸಿದಾಗ ಆರೆಸ್ಸೆಸ್‌‌ನ ಅಂಗ ಸಂಸ್ಥೆ ದುರ್ಗಾ ವಾಹಿನಿಯ ಸ್ವಯಂ ಸೇವಕಿ ಸಂಧ್ಯಾ ಪಡಕೆ ಬಂದು ಅವರನ್ನು ಹೊಡೆದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಪೋಸ್ಟ್‌ನಲ್ಲಿ“ ಪಾಕಿಸ್ತಾನಿ ಕುಸ್ತಿ ಪಟು ತನ್ನ ವಿರುದ್ದ ಹೋರಾಡಲು ಸವಾಲು ಹಾಕಿದರು, ಅವರನ್ನು ಆರೆಸ್ಸೆಸ್ಸಿನ ಸ್ವಯಂ ಸೇವಕಿ ಸಂಧ್ಯಾ ಪಡಕೆ ಹೊಡೆದರು” ಎಂದು ಕೂಡಾ ವೈರಲ್ ಆಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ವಾಸ್ತವದಲ್ಲಿ, ಹರಿಯಾಣದ ಮಾಜಿ ಪೋಲಿಸ್ ಅಧಿಕಾರಿ ಕವಿತಾ ಮತ್ತು ಪವರ್ ಲಿಫ್ಟಿಂಗ್ ಹಾಗೂ ಎಂಎಂಎ ಚಾಂಪಿಯನ್ ಬುಲ್ ಬುಲ್ ಅವರ ನಡುವೆ ನಡೆದ ಕುಸ್ತಿಯಾಗಿದೆ ಈ ವಿಡಿಯೊ. ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್‌ಬುಲ್‌‌, ತನ್ನ ವಿರುದ್ಧ ಸೆಣಸಲು ಪ್ರೇಕ್ಷಕರಿಗೆ ಸವಾಲು ಹಾಕಿದಂತೆ ವೀಡಿಯೊದಲ್ಲಿ ತೋರಿಸಲಾಗುತ್ತದೆ.

ವೈರಲ್‌ ವಿಡಿಯೋ ಬಗ್ಗೆ ಸಂಬಂಧಿತ ಕೀವರ್ಡ್‌ಗಳೊಂದಿಗೆ ಇಂಟರ್‌ನೆಟ್‌ನಲ್ಲಿ ಹುಡುಕಿದಾಗ, ಅದೇ ವೀಡಿಯೊವನ್ನು ಮಾಜಿ WWE ಕುಸ್ತಿಪಟು ಖಲಿ (ದಲೀಪ್ ಸಿಂಗ್) ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 2016 ರಲ್ಲಿ ಹಂಚಿಕೊಂಡಿದ್ದರು.

ಈ ಪೋಸ್ಟ್‌ನಲ್ಲಿ ಸವಾಲೆಸೆಯುವ ಮಹಿಳೆಯನ್ನು (ಕಪ್ಪು ಬಣ್ಣದ ಬಟ್ಟೆ ಧರಿಸಿರುವ) ಬುಲ್ ಬುಲ್ ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆ (ಕೇಸರಿ ಸಲ್ವಾರ್-ಕಮೀಜ್‌ ಧರಿಸಿರುವ)ಯನ್ನು ಹರಿಯಾಣದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಕವಿತಾ ಎಂದು ಗುರುತಿಸಲಾಗಿದೆ. ವೈರಲ್‌ ಪೋಸ್ಟ್‌ನಲ್ಲಿ ಹೇಳಿರುವಂತೆ ಅವರ ಹೆಸರು ಸಂಧ್ಯಾ ಪಡಕೆ ಅಲ್ಲ.

ಅದೇ ವೀಡಿಯೊ ಬಗ್ಗೆ ವರದಿ ಮಾಡಿದ 2016 ರ ಸುದ್ದಿ ಲೇಖನದಲ್ಲಿ ಮಹಿಳೆಯರಿಬ್ಬರನ್ನು ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್ ಬುಲ್ ಮತ್ತು ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಕವಿತಾ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೊ ಬಗ್ಗೆಯೆ ವರದಿ ಮಾಡಿದ ಇನ್ನೊಂದು ಸದ್ದಿಯಲ್ಲಿ ಮಹಿಳೆಯರ ಗುರುತಿನ ಬಗ್ಗೆಯೂ ಅದೇ ಮಾತನ್ನು ಪುನರುಚ್ಚರಿಸಿದೆ. ಆದಾಗ್ಯೂ, ಈ ಯಾವುದೇ ಸುದ್ದಿ ಲೇಖನಗಳು ಈ ಯಾವುದೇ ಮಹಿಳೆಯರನ್ನು ಪಾಕಿಸ್ತಾನ ಅಥವಾ ಆರ್‌ಎಸ್‌ಎಸ್‌ಗೆ ಸಂಬಧದ ಬಗ್ಗೆ ಉಲ್ಲೇಖಿಸಿಲ್ಲ.

ಮತ್ತೊಂದು ವೀಡಿಯೊದಲ್ಲಿ, ಬುಲ್ ಬುಲ್ (ಕಪ್ಪು ಬಣ್ಣದ ಬಟ್ಟೆ ಧರಿಸಿರುವವರು) ಕವಿತಾ ದೇವಿಯ ಮೇಲೆ ಸೇಡು ತೀರಿಸಿಕೊಳ್ಳುವುದನ್ನು ಕಾಣಬಹುದು. ಆದುದರಿಂದ, ಈ ಎಲ್ಲ ಸಾಕ್ಷ್ಯಗಳು ಸೂಚಿಸುತ್ತಿರುವುದು ಏನೆಂದರೆ ಈ ಇಬ್ಬರೂ ಮಹಿಳೆಯರು ಪಾಕಿಸ್ತಾನದೊಂದಿಗೆಯೋ, ಆರೆಸ್ಸೆಸ್‌‌ನೊಂದಿಗೆಯೋ ಸಂಬಂಧ ಹೊಂದಿಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತೀಯ ಮಹಿಳಾ ಕುಸ್ತಿ ಪಂದ್ಯದ ಹಳೆಯ ವಿಡಿಯೋವನ್ನು ಪಾಕಿಸ್ತಾನದ ಕುಸ್ತಿಪಟುವನ್ನು ಆರೆಸ್ಸೆಸ್ ಸದಸ್ಯೆ ಹೊಡೆದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚ ಸೂಳೆ ಮಕ್ಕಳ ಮೆದುಳಲ್ಲಿ ಸೆಗಣಿಯೇ ತುಂಬಿರುವಾಗ ಇಂತಹ fake news ಹಬ್ಬಿಸಿ ಮತೀಯ ದ್ವೇಷ, ಭಾರತ ಪಾಕಿಸ್ತಾನ ಮಧ್ಯೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವುದರಲ್ಲಿ ಈ ನಾಯಿಗಳು ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...