Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

ಫ್ಯಾಕ್ಟ್‌‌ಚೆಕ್: ಆರೆಸ್ಸೆಸ್ಸಿನ ಸ್ವಯಂ ಸೇವಕಿ ಪಾಕಿಸ್ತಾನದ ಕುಸ್ತಿಪಟುವಿಗೆ ಹೊಡೆದ್ದಾರೆಂದು ವೈರಲ್‌ ಆದ ಈ ವಿಡಿಯೊ ಸುಳ್ಳು!

- Advertisement -
- Advertisement -

ಮುಕ್ತ ಶೈಲಿಯ ಕುಸ್ತಿ ಸ್ಪರ್ಧೆಯಲ್ಲಿ ಇಬ್ಬರು ಮಹಿಳೆಯರು ಕುಸ್ತಿಯಾಡುತ್ತಿರುವ ವಿಡಿಯೊವನ್ನು, ‘‘ಪಾಕಿಸ್ತಾನದ ಕುಸ್ತಿ ಪಟು ಭಾರತವನ್ನು ನಿಂದಿಸಿದಾಗ ಆರೆಸ್ಸೆಸ್‌‌ನ ಅಂಗ ಸಂಸ್ಥೆ ದುರ್ಗಾ ವಾಹಿನಿಯ ಸ್ವಯಂ ಸೇವಕಿ ಸಂಧ್ಯಾ ಪಡಕೆ ಬಂದು ಅವರನ್ನು ಹೊಡೆದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಪೋಸ್ಟ್‌ನಲ್ಲಿ“ ಪಾಕಿಸ್ತಾನಿ ಕುಸ್ತಿ ಪಟು ತನ್ನ ವಿರುದ್ದ ಹೋರಾಡಲು ಸವಾಲು ಹಾಕಿದರು, ಅವರನ್ನು ಆರೆಸ್ಸೆಸ್ಸಿನ ಸ್ವಯಂ ಸೇವಕಿ ಸಂಧ್ಯಾ ಪಡಕೆ ಹೊಡೆದರು” ಎಂದು ಕೂಡಾ ವೈರಲ್ ಆಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ವಾಸ್ತವದಲ್ಲಿ, ಹರಿಯಾಣದ ಮಾಜಿ ಪೋಲಿಸ್ ಅಧಿಕಾರಿ ಕವಿತಾ ಮತ್ತು ಪವರ್ ಲಿಫ್ಟಿಂಗ್ ಹಾಗೂ ಎಂಎಂಎ ಚಾಂಪಿಯನ್ ಬುಲ್ ಬುಲ್ ಅವರ ನಡುವೆ ನಡೆದ ಕುಸ್ತಿಯಾಗಿದೆ ಈ ವಿಡಿಯೊ. ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್‌ಬುಲ್‌‌, ತನ್ನ ವಿರುದ್ಧ ಸೆಣಸಲು ಪ್ರೇಕ್ಷಕರಿಗೆ ಸವಾಲು ಹಾಕಿದಂತೆ ವೀಡಿಯೊದಲ್ಲಿ ತೋರಿಸಲಾಗುತ್ತದೆ.

ವೈರಲ್‌ ವಿಡಿಯೋ ಬಗ್ಗೆ ಸಂಬಂಧಿತ ಕೀವರ್ಡ್‌ಗಳೊಂದಿಗೆ ಇಂಟರ್‌ನೆಟ್‌ನಲ್ಲಿ ಹುಡುಕಿದಾಗ, ಅದೇ ವೀಡಿಯೊವನ್ನು ಮಾಜಿ WWE ಕುಸ್ತಿಪಟು ಖಲಿ (ದಲೀಪ್ ಸಿಂಗ್) ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 2016 ರಲ್ಲಿ ಹಂಚಿಕೊಂಡಿದ್ದರು.

ಈ ಪೋಸ್ಟ್‌ನಲ್ಲಿ ಸವಾಲೆಸೆಯುವ ಮಹಿಳೆಯನ್ನು (ಕಪ್ಪು ಬಣ್ಣದ ಬಟ್ಟೆ ಧರಿಸಿರುವ) ಬುಲ್ ಬುಲ್ ಗುರುತಿಸಲಾಗಿದೆ. ಮತ್ತೊಬ್ಬ ಮಹಿಳೆ (ಕೇಸರಿ ಸಲ್ವಾರ್-ಕಮೀಜ್‌ ಧರಿಸಿರುವ)ಯನ್ನು ಹರಿಯಾಣದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಕವಿತಾ ಎಂದು ಗುರುತಿಸಲಾಗಿದೆ. ವೈರಲ್‌ ಪೋಸ್ಟ್‌ನಲ್ಲಿ ಹೇಳಿರುವಂತೆ ಅವರ ಹೆಸರು ಸಂಧ್ಯಾ ಪಡಕೆ ಅಲ್ಲ.

ಅದೇ ವೀಡಿಯೊ ಬಗ್ಗೆ ವರದಿ ಮಾಡಿದ 2016 ರ ಸುದ್ದಿ ಲೇಖನದಲ್ಲಿ ಮಹಿಳೆಯರಿಬ್ಬರನ್ನು ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಬುಲ್ ಬುಲ್ ಮತ್ತು ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಕವಿತಾ ಮತ್ತು ಪವರ್-ಲಿಫ್ಟಿಂಗ್, ಎಂಎಂಎ (ಮಿಶ್ರ ಮಾರ್ಷಲ್ ಆರ್ಟ್ಸ್) ಚಾಂಪಿಯನ್ ಎಂದು ಗುರುತಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೊ ಬಗ್ಗೆಯೆ ವರದಿ ಮಾಡಿದ ಇನ್ನೊಂದು ಸದ್ದಿಯಲ್ಲಿ ಮಹಿಳೆಯರ ಗುರುತಿನ ಬಗ್ಗೆಯೂ ಅದೇ ಮಾತನ್ನು ಪುನರುಚ್ಚರಿಸಿದೆ. ಆದಾಗ್ಯೂ, ಈ ಯಾವುದೇ ಸುದ್ದಿ ಲೇಖನಗಳು ಈ ಯಾವುದೇ ಮಹಿಳೆಯರನ್ನು ಪಾಕಿಸ್ತಾನ ಅಥವಾ ಆರ್‌ಎಸ್‌ಎಸ್‌ಗೆ ಸಂಬಧದ ಬಗ್ಗೆ ಉಲ್ಲೇಖಿಸಿಲ್ಲ.

ಮತ್ತೊಂದು ವೀಡಿಯೊದಲ್ಲಿ, ಬುಲ್ ಬುಲ್ (ಕಪ್ಪು ಬಣ್ಣದ ಬಟ್ಟೆ ಧರಿಸಿರುವವರು) ಕವಿತಾ ದೇವಿಯ ಮೇಲೆ ಸೇಡು ತೀರಿಸಿಕೊಳ್ಳುವುದನ್ನು ಕಾಣಬಹುದು. ಆದುದರಿಂದ, ಈ ಎಲ್ಲ ಸಾಕ್ಷ್ಯಗಳು ಸೂಚಿಸುತ್ತಿರುವುದು ಏನೆಂದರೆ ಈ ಇಬ್ಬರೂ ಮಹಿಳೆಯರು ಪಾಕಿಸ್ತಾನದೊಂದಿಗೆಯೋ, ಆರೆಸ್ಸೆಸ್‌‌ನೊಂದಿಗೆಯೋ ಸಂಬಂಧ ಹೊಂದಿಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತೀಯ ಮಹಿಳಾ ಕುಸ್ತಿ ಪಂದ್ಯದ ಹಳೆಯ ವಿಡಿಯೋವನ್ನು ಪಾಕಿಸ್ತಾನದ ಕುಸ್ತಿಪಟುವನ್ನು ಆರೆಸ್ಸೆಸ್ ಸದಸ್ಯೆ ಹೊಡೆದರು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹುಚ್ಚ ಸೂಳೆ ಮಕ್ಕಳ ಮೆದುಳಲ್ಲಿ ಸೆಗಣಿಯೇ ತುಂಬಿರುವಾಗ ಇಂತಹ fake news ಹಬ್ಬಿಸಿ ಮತೀಯ ದ್ವೇಷ, ಭಾರತ ಪಾಕಿಸ್ತಾನ ಮಧ್ಯೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವುದರಲ್ಲಿ ಈ ನಾಯಿಗಳು ನಿಸ್ಸೀಮರು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...