Homeಅಂಕಣಗಳುಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಗ್ಲಿರಿಸೀಡಿಯಾ ಎಂಬ ಖರ್ಚಿಲ್ಲದ ಗೊಬ್ಬರ ಗಿಡದ ಬಗ್ಗೆ ನಿಮಗೆಷ್ಟು ಗೊತ್ತು?

ಅಪಾರ ಸಾರಜನಕ ಒಳಗೊಂಡ ಈ ಹಸಿರು ಸೊಪ್ಪನ್ನು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ.

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ…: ಭಾಗ-10

ಕೆಲವು ಗಿಡಗಳಿಗೆ ಅದೇನು ಶಕ್ತಿಯೋ ಕಾಣೆ. ಕತ್ತರಿಸಿದರೆ ಹೊಸ ಜೀವ ಪಡೆದು ಚಿಗುರುತ್ತವೆ. ಚಿಗುರು ಕಡ್ಡಿಗಳ ಈ ಈ ಜಾತಿಗೆ ಸೇರಿದ್ದು ಈ ಗ್ಲಿರಿಸೀಡಿಯಾ. ಇದನ್ನು ನಮ್ಮ ಜನ ಗೊಬ್ಬರದ ಗಿಡ ಎಂದೇ ಕರೆಯುವುದು ರೂಢಿ. ನಮ್ಮ ತೋಟದಲ್ಲಿ ಇದಕ್ಕೆ ಪ್ರಮುಖ ಸ್ಥಾನವಿದೆ. ಇದರ ಸೊಪ್ಪು ಅಪಾರ ಸಾರಜನದ ನೊರೆ ಹಾಲಿನಿಂದ ಕೂಡಿದೆ. ನೆಲಕ್ಕೂ ಸಾರಜನಕ ಸ್ಥೀರಿಕರಿಸುತ್ತದೆ.

ನನಗೆ ಈ ಗ್ಲಿರಿಸೀಡಿಯಾದ ಹುಚ್ಚು ಹತ್ತಿದ ಆ ವರ್ಷ ನಾನು ಮಾಡಿದ್ದು ಹೀಗೆ. ಕೇವಲ ಒಂದು ಅಡಿ ಆಳದ ಟ್ರೆಂಚ್‌ ತೆಗೆದು ಅದರೊಳಗೆ ಕಸಕಡ್ಡಿ ತುಂಬಿ ನೀರು ಬಿಟ್ಟು ಮುಚ್ಚಿ ಒಂದು ತಿಂಗಳು ಬಿಟ್ಟು ಆ ಟ್ರೆಂಚ್‌ಗೆ ಅಡಿಗೊಂದರಂತೆ ಎರಡು ಅಡಿ ಉದ್ದದ ಈ ಗ್ಲಿರಿಸಿಡಿಯಾ ಕಡ್ಡಿಗಳನ್ನು ಊರಿದೆ. ಒಂದೂ ಹುಸಿಹೋಗದಂತೆ ಹಸಿರು ದೀಪದಂತೆ ಹೊತ್ತಿಕೊಂಡವು. ಹದಿನೈದು ವರ್ಷವಾಯಿತು ಇನ್ನೂ ಉರಿಯುತ್ತಲೇ ಇವೆ. ಘನವಾದ ಸೊಪ್ಪು ಕೊಡುತ್ತಲೇ ಇವೆ.

ನೀವೇನಾದರೂ ಒಂದೆರಡು ವರ್ಷಗಳ ನಂತರ ಇವುಗಳನ್ನು ಕತ್ತರಿಸಿ ಒಪ್ಪವಾಗಿ ಇಟ್ಟುಕೊಳ್ಳದಿದ್ದರೆ, ನೀವು ನಿಯಂತ್ರಿಸಲಾಗದಂತೆ ಕೊಬ್ಬಿ ಬೆಳೆಯುತ್ತವೆ. ಇವಕ್ಕೆ ಗೊಬ್ಬರ ಗೋಡು ಏನೂ ಬೇಡ, ಕಾರಣ ಇವೇ ಗೊಬ್ಬರದ ಗಿಡಗಳು. ಬಿಸಿಲುಂಡು ವಾತಾವರಣದ ಗಾಳಿಯಲ್ಲಿನ ಅಪಾರ ಸಾರಜನಕವನ್ನು ಹಸಿರು ಎಲೆಗಳಾಗಿಸುವ ಶಕ್ತಿ ಇವಕ್ಕಿದೆ. ಗ್ಲಿರಿಸೀಡಿಯಾವನ್ನು ಕತ್ತರಿಸುವುದು ಅಷ್ಟು ಕಷ್ಟವಲ್ಲ, ಮುಳ್ಳಿಲ್ಲ , ತೀರಾ ಒರಟಲ್ಲ, ಅಲರ್ಜಿಯಿಲ್ಲ. ವರ್ಷಕ್ಕೆ ಎರಡು ಬಾರಿ ಕತ್ತಿರಿಸುತ್ತಿದ್ದರೆ ಒಳ್ಳೆಯ ಸೊಪ್ಪು ಸಿಗುತ್ತದೆ, ನಿಯಂತ್ರಣದಲ್ಲೂ ಇರುತ್ತದೆ. ಸೊಪ್ಪು ಹಸಿಯಾಗಿದ್ದಾಗಲೇ ಮಣ್ಣಿಗೆ ಸೇರಿಸುವುದು, ಗದ್ದೆಗೆ ತುಳಿಯುವುದು ಸಾಧ್ಯವಾದರೆ ತುಂಬಾ ಉಪಯುಕ್ತ. ಒಣಗಿದರೆ ಹೆಚ್ಚು ನಷ್ಟ.

ಈ ಸೊಪ್ಪನ್ನು ಸ್ವಲ್ಪ ಬಾಡಿಸಿ ದನಕರುಗಳಿಗೆ ಮೇವಾಗಿಯೂ ಬಳಸಬಹುದು. ಪೂರ್ಣ ಹಸಿಯ ಸೊಪ್ಪನ್ನು ಅದರ ಕಟು ವಾಸನೆಯ ಕಾರಣ ಕೆಲವು ದನಕರುಗಳು ತಿನ್ನಲು ನಿರಾಕರಿಸುವ ಸಾಧ್ಯತೆ ಇರುತ್ತದೆ. ಆಡುಕುರಿಗಳು ಮಾತ್ರ ಯಾವ ಭಿನ್ನಭೇದವೂ ಇಲ್ಲದೆ ಈ ಸೊಪ್ಪನ್ನು ಮೆಲ್ಲುತ್ತವೆ. ಚೆನ್ನಾಗಿ ಕೊಬ್ಬುತ್ತವೆ. ಬುದ್ದಿವಂತ ರೈತರು ಈ ಹಸಿ ಸೊಪ್ಪನ್ನು ಇತರ ಮೇವಿನೊಂದಿಗೆ ಬೆರೆಸಿ ಹಾಲು ಕೊಡುವ ರಾಸುಗಳು ತಿನ್ನುವಂತೆ ಮಾಡಿ ಹೆಚ್ಚು ಹಾಲು ಹಿಂಡಿ ಲಾಭ ಮಾಡಿಕೊಂಡವರಿದ್ದಾರೆ.

ಸಾವಯವ ಕೃಷಿ ಚಳುವಳಿಯ ಆರಂಭಿಕ ಸಂದರ್ಭದಲ್ಲಿ ಇದರ ಜನಪ್ರಿಯತೆ ಹೆಚ್ಚಾದಾಗ ಕೆಲವರು “ಇದು ನೆಲದ ಒರವು ತಿನ್ನುತ್ತದೆ” ಎಂಬ ತಕರಾರು ತೆಗೆದದ್ದು ಉಂಟು. ಆದರೆ ಇದರ ಬಗೆಗೆ ತಿಳಿಯುತ್ತಾ ಹೋದಂತೆ, ಇದು ನೆಲದ ಒರವು ತಿನ್ನುವುದಕ್ಕೆ ಬದಲಾಗಿ ನೆಲಕ್ಕೆ ಹೆಚ್ಚು ಒರವನ್ನು ಒದಗಿಸುತ್ತದೆ ಎಂಬುದು ರೈತರ ಅರಿವಿಗೆ ಬಂತು. ಆಗ ಬಹುತೇಕ ಸಾವಯವ ತೋಟಗಳಲ್ಲಿ ಇದು ಬೇಲಿಯಲ್ಲಷ್ಟೇ ಅಲ್ಲ ತೋಟದ ಬದುಗಳಲ್ಲೂ ಸ್ಥಾನ ಪಡೆಯಿತು.

ಈಗಲೂ ಕೆಲವು ರೈತರು ಇದರ ಸಹವಾಸ ಕಷ್ಟ ಎನ್ನುತ್ತಾರೆ. ಇದಕ್ಕೆ ಕಾರಣವಿದೆ. ಈ ಗ್ಲಿರಿಸೀಡಿಯಾವನ್ನು ಹೆಮ್ಮರವಾಗಲು ಬಿಡಬಾರದು. ಬಿಟ್ಟರೆ ಕೆಟ್ಟೆವು ಎಂದೇ ಅರ್ಥ. ಏಕೆಂದರೆ ಅದು ಸೂರ್ಯ ಸ್ನೇಹಿ ಗಿಡ, ಸೂರ್ಯನತ್ತಲೇ ಅದರ ಚಿತ್ತ. ಅದನ್ನು ಬುಡಕ್ಕೆ ಕತ್ತರಿಸುತ್ತಲೇ ಇರಬೇಕಾಗುತ್ತದೆ. ಕತ್ತರಿಸಿದಷ್ಟೂ ನಮಗೆ ಲಾಭವಾಗುತ್ತಲೇ ಇರುತ್ತದೆ. ಕುರಿಗೊಬ್ಬರ, ಕೋಳಿಗೊಬ್ಬರಕ್ಕೆ ಸಿಕ್ಕಾಪಟ್ಟೆ ದುಡ್ಡು ಸುರಿಯುವವರು ಏನು ಬೇಕಾದರೂ ಹೇಳುತ್ತಾರೆ. ನಿಜವಾದ ಕೃಷಿಕರು ತಮ್ಮ ಪರವಾಗಿ ಹಗಲು ರಾತ್ರಿ ದುಡಿಯುವ ಗಿಡಮರಗಳನ್ನು, ಹುಲ್ಲು ಸೊಪ್ಪು ತಿಂದು ಹಾಲು ಮತ್ತು ಗೊಬ್ಬರ ಕೊಡುವ ದನಕರು, ಕುರಿ ಆಡುಗಳನ್ನು  ನೆಚ್ಚಲೇಬೇಕಾಗುತ್ತದೆ.

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...