Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...