Homeಮುಖಪುಟಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

- Advertisement -
- Advertisement -

ತನ್ನ ಗೂಡಾಚಾರ ತಂತ್ರಾಂಶವನ್ನು ಬಳಕೆದಾರರು ದುರುಪಯೋಗ ಮಾಡಿರುವುದು ಬಹಿರಂಗವಾದ ಹಿನ್ನಲೆಯಲ್ಲಿ, ಇಸ್ರೇಲಿ ಕಣ್ಗಾವಲು ತಂತ್ರಾಂಶ ಪೆಗಾಸಸ್‌‌‌‌ನ ಮಾತೃ ಕಂಪನಿಯಾದ ‘ಎನ್‌ಎಸ್‌ಒ ಗ್ರೂಪ್’ ತನ್ನ ಹಲವಾರು ಸರ್ಕಾರಿ ಗ್ರಾಹಕರಿಗೆ ತಂತ್ರಾಂಶವನ್ನು ಬಳಸದಂತೆ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಬಗ್ಗೆ ವಾಶಿಂಗ್ಟನ್‌ ಮೂಲದ ಲಾಭ ರಹಿತ ಮಾಧ್ಯಮ ಸಂಸ್ಥೆ ಗುರುವಾರ ವರದಿ ಮಾಡಿದೆ.

ಪೆಗಾಸಸ್‌‌ ತಯಾರಕರಾದ ಎನ್‌ಎಸ್‌ಒನ ಉದ್ಯೋಗಿಯೊಬ್ಬರು, ತಮ್ಮ ಕಂಪೆನಿಯು ತಂತ್ರಾಂಶದ ದುರ್ಬಳಕೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾಗಿ ಮಾಧ್ಯಮ ವರದಿ ಮಾಡಿದೆ.

“ನಮ್ಮ ಕೆಲವು ಬಳಕೆದಾರರ ಬಗ್ಗೆ ತನಿಖೆ ನಡೆಯುತ್ತಿದೆ. ಆ ಬಳಕೆದಾರರಲ್ಲಿ ಕೆಲವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ಎನ್‌ಎಸ್‌ಒ ಉದ್ಯೋಗಿ ಹೇಳಿದ್ದಾರೆ. ಆದರೆ ಪೆಗಾಸಸ್ ಅಮಾನತುಗೊಳಿಸಿದ ಸರ್ಕಾರಿ ಏಜೆನ್ಸಿಗಳು ಅಥವಾ ದೇಶಗಳ ಹೆಸರನ್ನು ಅವರು ಬಹಿರಂಗ ಪಡಿಸಲಿಲ್ಲ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ತನಿಖೆ ನಡೆಯಲಿ: ಪ್ರಧಾನಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿಕೆ

ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ರಾಜಕಾರಣಿಗಳು ಮತ್ತು ಇತರರ ಜನರ ಮೇಲೆ ಕಣ್ಣಿಡಲು ಪೆಗಾಸಸ್ ತಂತ್ರಾಂಶವನ್ನು ಬಳಸಲಾಗಿದೆ ಎಂದು ಇತ್ತೀಚೆಗೆ ಬಹಿರಂಗವಾಗಿತ್ತು. ಈ ಆರೋಪವು ಖಾಸಗಿತನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಎನ್‌ಎಸ್‌ಒ ಕಂಪನಿಯು ಇಸ್ರೇಲಿ ಅಧಿಕಾರಿಗಳೊಂದಿಗೆ ಸಂಪೂರ್ಣ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ ಎಂದು ಕಂಪೆನಿಯನ್ನು ಪ್ರತಿನಿಧಿಸುತ್ತಿರುವ ಸಂಸ್ಥೆಯೊಂದು ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಎನ್‌ಎಸ್‌ಒ ತಾನು ಪೆಗಾಸಸ್‌‌ ತಂತ್ರಾಂಶವನ್ನು 40 ದೇಶಗಳ 60 ಗ್ರಾಹಕರನ್ನು ಹೊಂದಿದ್ದೇನೆ ಎಂದು ಹೇಳುತ್ತಿದ್ದು, ಅವರೆಲ್ಲರೂ ಗುಪ್ತಚರ ಸಂಸ್ಥೆಗಳು, ಕಾನೂನು ಜಾರಿ ಸಂಸ್ಥೆಗಳು ಮತ್ತು ಮಿಲಿಟರಿಗಳು ಎಂದು ಹೇಳಿದ್ದಾಗಿ ವರದಿಯಾಗಿದೆ.

ಮಾಧ್ಯಮಗಳು ತಂತ್ರಾಶದ ದುರುಪಯೋಗವಾಗುತ್ತಿದೆ ಎಂದು ವರದಿ ಮಾಡುವ ಮೊದಲೇ, ತನ್ನ ಸಾಫ್ಟ್‌ವೇರ್ ಅನ್ನು ದುರುಪಯೋಗ ಮಾಡುತ್ತಿದೆ ಎಂದು ಸಾಕ್ಷಿ ಸಮೇತವಾಗಿ ಕಂಡುಕೊಂಡ ಕಾರಣ ಕಳೆದ ವರ್ಷದಲ್ಲಿ ಎರಡು ಸರ್ಕಾರಿ ಸಂಸ್ಥೆಗಳನ್ನು ಕಂಪೆನಿಯು ನಿರ್ಬಂಧಿಸಿತ್ತು.

ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...