Homeಮುಖಪುಟರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

- Advertisement -
- Advertisement -

ಮೇಘಾಲಯ ಸರ್ಕಾರದಲ್ಲಿ ಸಚಿವರಾಗಿರುವ ಬಿಜೆಪಿಯ ಸಂಬೋರ್ ಶುಲ್ಲೈ ಅವರು, ರಾಜ್ಯದ ಜನರಿಗೆ ಕೋಳಿ, ಕುರಿ ಮತ್ತು ಮೀನುಗಳಿಗಿಂತ ಹೆಚ್ಚು ಬೀಫ್‌‌ ತಿನ್ನುವಂತೆ ಪ್ರೋತ್ಸಾಹಿಸಿದ್ದಾರೆ. ಕಳೆದ ವಾರವಷ್ಟೇ ಮೇಘಾಲಯದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ಹಿರಿಯ ನಾಯಕರಾಗಿರುವ ಸಂಬೋರ್‌‌ ಶುಲ್ಲೈ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ತಿನ್ನಲು ಸ್ವತಂತ್ರರು ಎಂದು ಹೇಳಿದ್ದಾರೆ.

“ನಾನು ಜನರನ್ನು ಚಿಕನ್, ಮಟನ್ ಅಥವಾ ಮೀನಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಲು ಪ್ರೋತ್ಸಾಹಿಸುತ್ತೇನೆ. ಜನರನ್ನು ಹೆಚ್ಚು ಗೋಮಾಂಸ ತಿನ್ನಲು ಪ್ರೋತ್ಸಾಹಿಸುವ ಮೂಲಕ, ಬಿಜೆಪಿ ಗೋಹತ್ಯೆಯ ಮೇಲೆ ನಿಷೇಧ ಹೇರುತ್ತದೆ ಎಂಬ ಗ್ರಹಿಕೆಯನ್ನು ಹೋಗಲಾಡಿಸಬೇಕು” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ನಿರ್ಗಮನ; ಜಾತಿ ಓಲೈಕೆ ಮತ್ತು ದೆಹಲಿ ದರ್ಬಾರ್‌ನ ಮುಂದಿನ ನಡೆಗಳೇನಾಗಿರಬಹುದು?

ಪಶು ಸಂಗೋಪನೆ ಮತ್ತು ಪಶುವೈದ್ಯ ಸಚಿವರಾಗಿರುವ ಸಂಬೋರ್‌, ನೆರೆಯ ರಾಜ್ಯದ ಹೊಸ ‘ಗೋಹತ್ಯೆ ಶಾಸನ’ದಿಂದ ಮೇಘಾಲಯಕ್ಕೆ ಜಾನುವಾರು ಸಾಗಾಣಿಕೆಯ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಂಬೋರ್‌‌, ಮೇಘಾಲಯ ಮತ್ತು ಅಸ್ಸಾಂ ನಡುವಿನ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿ, ಜನರನ್ನು ರಕ್ಷಿಸಲು ರಾಜ್ಯವು ತನ್ನ ಪೊಲೀಸ್ ಪಡೆಯನ್ನು ಬಳಸಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

“ಅಸ್ಸಾಂನ ಜನರು ಗಡಿ ಪ್ರದೇಶದಲ್ಲಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದರೆ, ಮಾತನಾಡಲು ಮತ್ತು ಚಹಾ ಕುಡಿಯುವ ಸಮಯ ಇದಲ್ಲ. ನಾವು ಪ್ರತಿಕ್ರಿಯಿಸಬೇಕು, ಸ್ಥಳದಲ್ಲೇ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದ್ದು, ಆದರೆ, ತಾನು ಹಿಂಸೆಯ ಪರವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

“ನಾವು ನಮ್ಮ ಜನರನ್ನು ರಕ್ಷಿಸುವ ಮನೋಭಾವವನ್ನು ಹೊಂದಿರಬೇಕು, ನಾವು ನಮ್ಮ ಬಲವನ್ನು ಬಳಸಿಕೊಳ್ಳಬೇಕು, ಅಸ್ಸಾಂ ಪೊಲೀಸರೊಂದಿಗೆ ಮಾತನಾಡಲು ಪೊಲೀಸರು ಮುಂಚೂಣಿಗೆ ಹೋಗಬೇಕು” ಎಂದು ಅವರು ಹೇಳಿದ್ದಾರೆ.

ಮಿಜೋರಾಂ ಪೋಲಿಸರು ತನ್ನ ಭೂಮಿ ಮತ್ತು ಜನರನ್ನು ರಕ್ಷಿಸಲು ನಿಂತಿದ್ದಾರೆ ಎಂದು ಶ್ಲಾಘಿಸಿದ ಸಂಬೋರ್‌, ಗಡಿ ನಿವಾಸಿಗಳನ್ನು ರಕ್ಷಿಸುವ ವಿಚಾರದಲ್ಲಿ ಮೇಘಾಲಯ ಪೊಲೀಸರು ಯಾವಾಗಲೂ ಹಿಂದಡಿಯಿಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಜನರನ್ನು ರಕ್ಷಿಸಲು ಪೊಲೀಸರು ಮುಂಚೂಣಿಯಲ್ಲಿರುವಂತೆ ಉನ್ನತ ಅಧಿಕಾರಿಗಳು ಆದೇಶ ನೀಡಬೇಕು. ನಿಮ್ಮ ಮನೆಗೆ ಶತ್ರುಗಳು ಬಂದರೆ, ನಿಮ್ಮ ಮತ್ತು ನಿಮ್ಮ ಹೆಂಡತಿ ಮತ್ತು ಮಕ್ಕಳ ಮೇಲೆ ದಾಳಿ ಮಾಡಿದರೆ, ನೀವು ಕೂಡ ಆತ್ಮರಕ್ಷಣೆಗಾಗಿ ದಾಳಿ ಮಾಡಬೇಕಾಗುತ್ತದೆ. ಅದೇ ಕೆಲಸವನ್ನು ನಮ್ಮ ಗಡಿಗಳಲ್ಲಿ ಮಾಡಬೇಕು. ನಿಮ್ಮ ಮನೆಯನ್ನು ಕದಿಯಲು ಅಥವಾ ದೋಚಲು ಶತ್ರುಗಳು ಬಂದರೆ, ನೀವು ನಿಮ್ಮನ್ನು ರಕ್ಷಿಸಿಕೊಳ್ಳಬೇಕು, ಅದು ಕಾನೂನುಬದ್ಧವಾಗಲಿ ಅಥವಾ ಕಾನೂನುಬಾಹಿರವಾಗಲಿ, ನೀವು ರಕ್ಷಿಸಿಕೊಳ್ಳಲೇಬೇಕು” ಎಂದು ಸಂಬೋರ್‌‌ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...