Homeಸಿನಿಮಾಕ್ರೀಡೆಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

- Advertisement -
- Advertisement -

ಮಣಿಪುರಿ ಭಾಷೆಯಲ್ಲಿ ಒಲಿಂಪಿಕ್ ಪದಕ ವಿಜೇತೆ ಸೈಖೋಮ್ ಮೀರಾಬಾಯಿ ಚಾನು ಅವರ ಜೀವನ ಆಧಾರಿತ ಚಿತ್ರ ನಿರ್ಮಾಣವಾಗಲಿದೆ. ಚಿತ್ರವನ್ನು ಇಂಗ್ಲಿಷ್ ಮತ್ತು ವಿವಿಧ ಭಾರತೀಯ ಭಾಷೆಗಳಿಗೆ ಡಬ್ ಮಾಡಲಾಗುವುದು ಎಂದು ಹೇಳಲಾಗಿದೆ.

ಚಿತ್ರ ನಿರ್ಮಾಣ ಕುರಿತ ಒಪ್ಪಂದಕ್ಕೆ ಮೀರಾಬಾಯಿ ಚಾನು ಕಡೆಯವರು ಮತ್ತು ಇಂಫಾಲ್ ಮೂಲದ ಸ್ಯೂಟಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥೆಯವರು ಶನಿವಾರ ಸಹಿ ಮಾಡಿದ್ದಾರೆ.

ಇಂಫಾಲ್ ಪೂರ್ವ ಜಿಲ್ಲೆಯ ನೋಂಗ್‌ಪೋಕ್ ಕಾಕ್ಚಿಂಗ್ ಹಳ್ಳಿಯಲ್ಲಿರುವ ಮೀರಾಬಾಯಿ ಚಾನು ನಿವಾಸದಲ್ಲಿ ಚಿತ್ರದ ಮಾತುಕತೆ ನಡೆದು ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಪ್ರಖ್ಯಾತ ನಾಟಕಕಾರ ಮತ್ತು ನಿರ್ಮಾಣ ಕಂಪನಿಯ ಅಧ್ಯಕ್ಷ ಮನೊಬಿ ಎಂ.ಎಂ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ಪಿಟಿಐ ಜೊತೆ ಮಾತನಾಡಿಡಿರುವ ಮನೊಬಿ, “ನಾವು ಮೀರಾಬಾಯಿ ಚಾನು ಪಾತ್ರವನ್ನು ನಿರ್ವಹಿಸಬಲ್ಲ ನಟಿಯ ಹುಡುಕಾಟ ಆರಂಭಿಸಿದ್ದೇವೆ. ಪಾತ್ರಕ್ಕೆ ಹೊಂದಲಿರುವ ನಟಿ, ಚಾನು ಅವರಷ್ಟು ವಯಸ್ಸು, ಎತ್ತರ, ಮೈಕಟ್ಟು ಹೊಂದಬೇಕು. ಜೊತೆಗೆ ನೋಡಲು ಸ್ವಲ್ಪ ಚಾನು ಅವರ ಹೋಲಿಕೆಯನ್ನು ಹೊಂದಿರಬೇಕು’ ಎಂದಿದ್ದಾರೆ.

’ನಟಿಯ ಆಯ್ಕೆ ಬಳಿಕ ಆಕೆಗೆ ಮೀರಾಬಾಯಿ ಚಾನು ಅವರ ಜೀವನ ಶೈಲಿಯ ತರಬೇತಿ ನೀಡಬೇಕು. ಈ ಚಿತ್ರದ ಚಿತ್ರೀಕರಣ ಆರಂಭಿಸಲು ಕನಿಷ್ಠ ಆರು ತಿಂಗಳು ಬೇಕಾಗುತ್ತದೆ” ಎಂದು ಮನೊಬಿ ಹೇಳಿದ್ದಾರೆ.

r/pics - India's Mirabai Chanu at her home in Manipur after winning Silver Medal in the Tokyo Olympics.

ಮಣಿಪುರದ ರಾಜಧಾನಿ ಇಂಫಾಲ್‌ನಿಂದ 22 ಕಿ.ಮೀ ದೂರದಲ್ಲಿರುವ ನಾಂಗ್‌ಪೋಕ್ ಕಾಚಿಂಗ್ ಗ್ರಾಮದಲ್ಲಿ ಜನಿಸಿದ ಮೀರಾಬಾಯಿ ಚಿಕ್ಕಂದಿನಲ್ಲಿಯೇ ತಾನು ಆರ್ಚರ್ ಕ್ರೀಡಾಪಟುವಾಗಲು ನಿರ್ಧರಿಸಿದ್ದರು. 2008ರಲ್ಲಿ ಇಂಫಾಲ್‌ನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಚೇರಿಗೆ ತೆರಳಿದ ಆಕೆಗೆ ಆರ್ಚರ್ ಕ್ರೀಡೆಗೆ ತರಬೇತು ನೀಡುವವರು ಸಿಗಲೇ ಇಲ್ಲ. ಅದೇ ಸಮಯಕ್ಕೆ ಮಣಿಪುರದ ವೇಟ್ ಲಿಫ್ಟರ್ ಕುಂಜುರಾಣಿ ದೇವಿಯವರ ವಿಡಿಯೋ ನೋಡಿದ ಆಕೆ ಅದರಿಂದ ಸ್ಫೂರ್ತಿಗೊಂಡು ತಾನೂ ವೇಟ್ ಲಿಫ್ಟರ್‌ ಆಗಲು ನಿರ್ಧರಿಸಿದ್ದರು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಜಯಿಸುವ ಮೂಲಕ ಎಲ್ಲರ ಮನೆಮಾತಾಗಿದ್ದಾರೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...