Homeಕ್ರೀಡೆಒಲಂಪಿಕ್ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ.

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂದು ಬಹಳಷ್ಟು ಮಂದಿ ಹಂಬಲಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಟೋಕಿಯೋ ಒಲಂಪಿಕ್ಸ್‌ ಒಂದರಲ್ಲೇ ಬರೋಬ್ಬರಿ 4 ಚಿನ್ನ ಮತ್ತು 3 ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾಳೆ.

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್ “ಮಹಿಳೆಯರ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹಾಗೂ ಮಹಿಳೆಯರ 4×100 ಫ್ರೀಸ್ಟೈಲ್ ರಿಲೇ ಮತ್ತು ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರ 100 ಮೀಟರ್ ಬಟರ್‌ಫ್ಲೈ, ಮಹಿಳೆಯರ 4×100 ಮೀಟರ್ ಮೆಡ್ಲೆ ರಿಲೇ, ಮಹಿಳೆಯರ 4×200 ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈಸ್ಟ್ ಜರ್ಮನ್‌ನ ಕ್ರಿಸ್ಟಿನ್ ಒಟ್ಟೊ ಅವರು 1952 ರ ಒಲಂಪಿಕ್ಸ್‌ನಲ್ಲಿ ಆರು ಪದಕಗಳನ್ನು ಗೆದ್ದಿದ್ದರು. ಇದನ್ನು 2008 ರಲ್ಲಿ ಅಮೇರಿಕನ್ ನಟಾಲಿ ಕಗ್ಲಿನ್ ಸರಿಗಟ್ಟಿದ್ದರು. ಆದರೆ ಈ ಭಾರಿ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಅವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ.

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ. 2004ರ ಒಲಂಪಿಕ್ಸ್‌ನಲ್ಲಿ ಅವರು ಆರು ಚಿನ್ನ ಮತ್ತು ಎರಡು ಕಂಚಿನ ಪದಕ ಗೆದ್ದಿದ್ದರೆ, 2008 ರಲ್ಲಿ ಬರೋಬ್ಬರಿ 8 ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ವಿಭಾಗದಲ್ಲಿ ಅಮೆರಿಕದವರೆ ಆದ ಮಾರ್ಕ್ ಸ್ಪಿಟ್ಜ್, ವಿಲ್ಲೀಸ್ ಎ. ಲೀ ಮತ್ತು ಮ್ಯಾಥ್ಯು ಬಿಯಾಂಡಿ ಒಂದೆ ಒಲಂಪಿಕ್ಸ್‌ನಲ್ಲಿ ತಲಾ 7 ಪದಕಗಳನ್ನು ಗೆದ್ದು ನಂತರದ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಒಲಂಪಿಕ್ಸ್‌ ಆಟಗಳಲ್ಲಿ ಅತಿ ಹೆಚ್ಚು ಪದಕ ಗೆದ್ದ ದಾಖಲೆ ಕೂಡ ಮೆಕಲ್ ಫೆಲ್ಪ್ಸ್ ಹೆಸರಿನಲ್ಲಿದೆ. ಅವರು ಒಟ್ಟು ನಾಲ್ಕು ಒಲಂಪಿಕ್ಸ್‌ನಲ್ಲಿ ಭಾಗವಹಿಸಿ 28 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 23 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳು ಅದರಲ್ಲಿ ಸೇರಿವೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....