Homeಕ್ರೀಡೆಒಲಂಪಿಕ್ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ.

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂದು ಬಹಳಷ್ಟು ಮಂದಿ ಹಂಬಲಿಸುತ್ತಿದ್ದಾರೆ. ಆದರೆ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಟೋಕಿಯೋ ಒಲಂಪಿಕ್ಸ್‌ ಒಂದರಲ್ಲೇ ಬರೋಬ್ಬರಿ 4 ಚಿನ್ನ ಮತ್ತು 3 ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾಳೆ.

ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್ “ಮಹಿಳೆಯರ 50 ಮೀಟರ್ ಮತ್ತು 100 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹಾಗೂ ಮಹಿಳೆಯರ 4×100 ಫ್ರೀಸ್ಟೈಲ್ ರಿಲೇ ಮತ್ತು ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅದೇ ರೀತಿಯಲ್ಲಿ ಮಹಿಳೆಯರ 100 ಮೀಟರ್ ಬಟರ್‌ಫ್ಲೈ, ಮಹಿಳೆಯರ 4×100 ಮೀಟರ್ ಮೆಡ್ಲೆ ರಿಲೇ, ಮಹಿಳೆಯರ 4×200 ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಈಸ್ಟ್ ಜರ್ಮನ್‌ನ ಕ್ರಿಸ್ಟಿನ್ ಒಟ್ಟೊ ಅವರು 1952 ರ ಒಲಂಪಿಕ್ಸ್‌ನಲ್ಲಿ ಆರು ಪದಕಗಳನ್ನು ಗೆದ್ದಿದ್ದರು. ಇದನ್ನು 2008 ರಲ್ಲಿ ಅಮೇರಿಕನ್ ನಟಾಲಿ ಕಗ್ಲಿನ್ ಸರಿಗಟ್ಟಿದ್ದರು. ಆದರೆ ಈ ಭಾರಿ ಆಸ್ಟ್ರೇಲಿಯಾದ ಈಜುಗಾರ್ಜಿ ಎಮ್ಮ ಮಕೀನ್ ಅವರಿಬ್ಬರ ದಾಖಲೆಯನ್ನು ಮುರಿದಿದ್ದಾರೆ.

ಪುರುಷರ ವಿಭಾಗದಲ್ಲಿ ಅಮೆರಿಕದ ಈಜುಗಾರ ಮೆಕಲ್ ಫೆಲ್ಪ್ಸ್ ಒಂದೇ ಒಲಂಪಿಕ್ಸ್‌ನಲ್ಲಿ 8 ಪದಕ ಗೆಲ್ಲುವ ಮೂಲಕ ಎರಡು ಭಾರಿ ದಾಖಲೆ ನಿರ್ಮಿಸಿದ್ದಾರೆ. 2004ರ ಒಲಂಪಿಕ್ಸ್‌ನಲ್ಲಿ ಅವರು ಆರು ಚಿನ್ನ ಮತ್ತು ಎರಡು ಕಂಚಿನ ಪದಕ ಗೆದ್ದಿದ್ದರೆ, 2008 ರಲ್ಲಿ ಬರೋಬ್ಬರಿ 8 ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ವಿಭಾಗದಲ್ಲಿ ಅಮೆರಿಕದವರೆ ಆದ ಮಾರ್ಕ್ ಸ್ಪಿಟ್ಜ್, ವಿಲ್ಲೀಸ್ ಎ. ಲೀ ಮತ್ತು ಮ್ಯಾಥ್ಯು ಬಿಯಾಂಡಿ ಒಂದೆ ಒಲಂಪಿಕ್ಸ್‌ನಲ್ಲಿ ತಲಾ 7 ಪದಕಗಳನ್ನು ಗೆದ್ದು ನಂತರದ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಒಲಂಪಿಕ್ಸ್‌ ಆಟಗಳಲ್ಲಿ ಅತಿ ಹೆಚ್ಚು ಪದಕ ಗೆದ್ದ ದಾಖಲೆ ಕೂಡ ಮೆಕಲ್ ಫೆಲ್ಪ್ಸ್ ಹೆಸರಿನಲ್ಲಿದೆ. ಅವರು ಒಟ್ಟು ನಾಲ್ಕು ಒಲಂಪಿಕ್ಸ್‌ನಲ್ಲಿ ಭಾಗವಹಿಸಿ 28 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 23 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳು ಅದರಲ್ಲಿ ಸೇರಿವೆ.


ಇದನ್ನೂ ಓದಿ: ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...