Homeಮುಖಪುಟಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ಇಡೀ ದೇಶಕ್ಕೆ ವ್ಯಾಕ್ಸಿನ್ ಮತ್ತು ಪಡಿತರ ನೀಡಲು ಬೇಕಿರುವ ಹಣದ ಮೂರು ಪಟ್ಟನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ... ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

- Advertisement -
- Advertisement -

2020-21ರ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಮತ್ತು ಸೆಸ್‌ನಿಂದಾಗಿ 3.4 ಲಕ್ಷ ಕೋಟಿ ರೂಗಳನ್ನು ಗಳಿಸಿದ್ದು, ಅದರ ಬಹುಪಾಲು ಹಣವನ್ನು ಉಚಿತ ಲಸಿಕೆ ಮತ್ತು ಬಡವರಿಗೆ ಉಚಿತ ಪಡಿತರ ನೀಡಲು ಬಳಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದರು. ಇದು ಸುಳ್ಳು ಲೆಕ್ಕ ಎಂದು ಕನ್ನಡ ಖ್ಯಾತ ಚಿಂತಕ ಶಿವಸುಂದರ್ ತಮ್ಮ ಜಸ್ಟ್ ಆಸ್ಕಿಂಗ್ ಲೇಖನದಲ್ಲಿ ನಿರೂಪಿಸಿದ್ದಾರೆ. ಅದನ್ನು ನಾನುಗೌರಿ ಓದುಗರಿಗಾಗಿ ಇಲ್ಲಿ ಪ್ರಕಟಿಸುತ್ತಿದ್ದೇವೆ.

“ಪೆಟ್ರೋಲ್ ಬೆಲೆ ಏರಿಸಿ ಸಂಗ್ರಹಿಸಿದ 3.4 ಲಕ್ಷ ಕೋಟಿಗೆ ಸುಳ್ಳು ಲೆಕ್ಕ ಕೊಡುತ್ತಿರುವ ಮೋದಿ ಸರ್ಕಾರ..”

ಮೋದಿ ಸರ್ಕಾರದ ಹೊಸ ಪೆಟ್ರೋಲಿಯಂ ಮಂತ್ರಿ ಹರದೀಪ್ ಪುರಿ ಯವರು 2020-21 ನೇ ಸಾಲಿನಲೀ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಜನರಿಂದ ಹೆಚ್ಚುವರಿಯಾಗಿ 3.4 ಲಕ್ಷ ಕೋಟಿ ರೂ. ಗಳನ್ನೂ ಸಂಗ್ರಹಿಸಲಾಗಿದೆ ಎಂದು ಮೊನ್ನೆ ಒಪ್ಪಿಕೊಂಡಿದ್ದಾರೆ.

ಆದರೆ ಅದರ ದೊಡ್ಡ ಭಾಗವನ್ನು ಜನರಿಗೆ ಉಚಿತ ವ್ಯಾಕ್ಸಿನ್ ಕೊಡಲು ಹಾಗು 2020 ರ ಏಪ್ರಿಲ್- ನವಂಬರ್ ಹಾಗು 2021 ರ ಮೇ-ಜೂನ್, ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ವ್ಯಯ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ…

ಇದನ್ನೂ ಓದಿ : ಪೆಟ್ರೋಲಿಯಂ ಸೆಸ್‌ನ 3.4 ಲಕ್ಷ ಕೋಟಿ ರೂಗಳನ್ನು ಉಚಿತ ಲಸಿಕೆ, ಪಡಿತರಕ್ಕಾಗಿ ಬಳಸಲಾಗಿದೆ: ಸಚಿವ ಹರ್ದೀಪ್ ಪುರಿ

ಈ ಹೇಳಿಕೆಯ ಮೂಲಕ ಮೋದಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ… :

ಮೊದಲಿಗೆ- ವ್ಯಾಕ್ಸಿನ್ ಉಚಿತವಾಗೇನೂ ಕೊಡುತ್ತಿಲ್ಲ..

ಮೋದಿ ಸರ್ಕಾರವು ಬಡ-ಮಧ್ಯಮ ವರ್ಗದ ಜನರಿಂದ ಸುಲಿದ ತೆರಿಗೆಯಿಂದ ಜನರಿಗೆ ವ್ಯಾಕ್ಸಿನ್-ಪಡಿತರ ಕೊಡುತ್ತಿದೆಯೇ ವಿನಾ, ಶ್ರೀಮಂತರಿಗೆ ತೆರಿಗೆ ಹಾಕುವ ಮೂಲಕವೋ, ಅಥವಾ ಸರ್ಕಾರದ ದುಂದು ವೆಚ್ಚಗಳನ್ನೋ ಕಡಿಮೆ ಮಾಡುವುದರಿಂದಲ್ಲ.

ಅರ್ಥಾತ್ ಸರ್ಕಾರ ಬಡವರಿಗೆ ಅವರಿಂದ ಸಂಗ್ರಹಿಸಿದ ಹಣದಿಂದಲೇ ವ್ಯಾಕ್ಸಿನ್- ಪಡಿತರ ಕೊಡುತ್ತಿದೆಯೇ ವಿನಾ ಉಚಿತವಾಗಿಯಲ್ಲ… ಆದ್ದರಿಂದ ಮೊದಲು ಉಚಿತ ವ್ಯಾಕ್ಸಿನ್, ಉಚಿತ ಪಡಿತರ ಎನ್ನುವ ಜನವಂಚಕ ಪ್ರಚಾರವನ್ನು ನಿಲ್ಲಿಸಬೇಕು…

ಎರಡನೆಯದಾಗಿ- ಉಳಿದ ಮೂರು ಕೋಟಿಗೆ ಲೆಕ್ಕವೆಲ್ಲಿ?
ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಜುಲೈ 29 ರವರೆಗೆ ಕೇವಲ 45 ಕೋಟಿ ವ್ಯಾಕ್ಸಿನ್ ಗಳನ್ನೂ ಜನರಿಗೆ ನೀಡಿದೆ.

ಅದರ ಒಟ್ಟಾರೆ ಸರಾಸರಿ ಬೆಲೆ ವ್ಯಾಕ್ಸಿನ್ ಒಂದಕ್ಕೆ 500 ರೂ. ಎಂದಿಟ್ಟುಕೊಂಡರೂ ಈವರೆಗೆ ಸರ್ಕಾರ ಈ ಬಾಬತ್ತಿನಲ್ಲಿ ವೆಚ್ಚ ಮಾಡಿರುವುದು ಕೇವಲ 23,000 ಕೋಟಿ ರೂ. ಮಾತ್ರ ಎಂದಾಯಿತು!

ಅಂದರೆ ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿಯ ಶೇ. 6.7 ಭಾಗ ಮಾತ್ರ… ಉಳಿದದ್ದೇನಾಯ್ತು?

ವ್ಯಾಕ್ಸಿನ್ ಗಾಗಿ ಎಂದೇ 2021ರ ಬಜೆಟ್ಟಿನಲ್ಲಿ ಪೆಟ್ರೋಲ್ ತೆರಿಗೆಯನ್ನು ಹೊರತುಪಡಿಸಿ 66,000 ಕೋಟಿಗಳನ್ನು ಎತ್ತಿಡಲಾಗಿತ್ತು…

ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಗ್ರಹಿಸಿದ ಹಣದಲ್ಲಿ ವ್ಯಾಕ್ಸಿನ್ ಕೊಡುತ್ತಿರುವುದಾದರೆ, ಅದಕ್ಕೆ ಮುಂಚೆಯೇ ಬಜೆಟ್ನಲ್ಲಿ ಎತ್ತಿಟ್ಟಿದ್ದ ವ್ಯಾಕ್ಸಿನ್ ಹಣದ ಲೆಕ್ಕವೇನು?

– 2020 ಮತ್ತು 2021 ರಲ್ಲಿ ಒಟ್ಟು ಹತ್ತು ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲು ಆದ ಖರ್ಚೆಷ್ಟು? 1.2 ಲಕ್ಷ ಕೋಟಿ ರೂಪಾಯಿಗಳು.

ಆದರೆ ಇದೆಲ್ಲವೂ ವಿಶೇಷ ಅಥವಾ ಹೆಚ್ಚುವರಿ ವೆಚ್ಚವಲ್ಲ.

2013 ರಲ್ಲಿ ಆಹಾರ ಭದ್ರತಾ ಕಾಯಿದೆ ಜಾರಿಯಾದ ಮೇಲೆ ಈ ದೇಶದ 83 ಕೋಟಿ ಜನರಿಗೆ ಪ್ರತಿವರ್ಷ ರಿಯಾಯತಿ ದರದಲ್ಲಿ ಆಹಾರ ಪಡಿತರವನ್ನು ಒದಗಿಸಲು ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಪ್ರತಿವರ್ಷ ಕೇಂದ್ರ ಬಜೆಟ್ಟಿನಿಂದ ಹಣವನ್ನು ಒದಗಿಸಲಾಗುತ್ತದೆ. ಅದರ ಭಾಗವಾಗಿಯೇ 2020ರಲ್ಲೇ ಈ ಬಾಬತ್ತಿಗೆ ಕೇಂದ್ರ ಬಜೆಟ್ಟಿನಲ್ಲಿ 1.15 ಲಕ್ಷ ಕೋಟಿ ಎತ್ತಿಡಲಾಗಿತ್ತು.!

ಹೀಗಾಗಿ ಈ ಬಾರಿ ಕೋವಿಡ್ ನಿಂದಾಗಿ ಬಜೆಟ್ಟಿನಲ್ಲಿ ಎತ್ತಿಟ್ಟ ಹಣದ ಜೊತೆಗೆ ಸರ್ಕಾರಕ್ಕೆ ಹೆಚ್ಚೆಂದರೆ 15,000 ಕೋಟಿ ಖರ್ಚಾಗಿರಬಹುದು ..

ಅಂದರೆ … ವ್ಯಾಕ್ಸಿನ್ ಗಾಗಿ 25,000 ಕೋಟಿ

ಪಡಿತರಕ್ಕಾಗಿ 15,000 ಕೋಟಿ

ಒಟ್ಟು 40,000 ಕೋಟಿ …

ಪೆಟ್ರೋಲ್ ತೆರಿಗೆಯಿಂದ ಸಂಗ್ರಹಿಸಿದ 3.4 ಲಕ್ಷ ಕೋಟಿ ಯಲ್ಲಿ 40,000 ಕೋಟಿ ಕಳೆದರೆ ಉಳಿದ 3 ಲಕ್ಷ ಕೋಟಿ ಗಳ ಲೆಕ್ಕ???

– ಇನ್ನು ಭಾರತದ ಎಲ್ಲಾ ಜನರಿಗೆ ಬೇಕಿರುವ, ಮುಂದಿನ ವರ್ಷದ ಕೊನೆಯ ವೇಳೆಗೆ ಹಾಕಬಹುದಾದ, 200 ಕೋಟಿ ವ್ಯಾಕ್ಸಿನ್ ಗಳಿಗೆ ವೆಚ್ಚವಾಗುವುದು 1 ಲಕ್ಷ ಕೋಟಿ …

ಅದನ್ನೂ ಈಗಲೇ ಸೇರಿಸಿಬಿಟ್ಟರೂ ಸರ್ಕಾರಕ್ಕೆ ಒಟ್ಟಾರೆ ಯಾಗಿ ಮುಂದಿನ ಎರಡು ವರ್ಷಗಳಿಗೆ ಕೋವಿಡ್ ಹೆಚ್ಚುವರಿಯಾಗಿ ವೆಚ್ಚವಾಗುವುದು 1.15 ಲಕ್ಷ ಕೋಟಿ ಮಾತ್ರ..

ಕಳೆದ ಒಂದು ವರ್ಷದಲ್ಲಿ ಜನರಿಂದ ಸುಲಿದಿರುವ 3.4 ಲಕ್ಷ ಕೋಟಿಯಲ್ಲಿ 1.15 ಲಕ್ಷ ಕೋಟಿ ತೆಗೆದರೂ ಸರ್ಕಾರ ಕೋವಿಡ್ ಹೆಸರಲ್ಲಿ 2.25 ಲಕ್ಷ ಕೋಟಿ ರೂ. ಗಳು ಲೆಕ್ಕ ಕೊಡದ ಸುಲಿಗೆ ಎಂದಾಯಿತು..ಅಲ್ಲವೇ?

ಮೂರನೆಯದಾಗಿ: ಈಗಲಾದರೂ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾಗಬೇಕಲ್ಲವೇ?

ಏನಿಲ್ಲವೆಂದರೂ ಇಡೀ ದೇಶಕ್ಕೆ ವ್ಯಾಕ್ಸಿನ್ ಹಾಕಲು ಬೇಕಿರುವ ಹಣದ ಮೂರು ಪಟ್ಟು… ಹಾಗು ಪಡಿತರಕ್ಕೆ ಬೇಕಿರುವ ಮೂರು ಪಟ್ಟು ಹಣವನ್ನು ಒಂದೇ ವರ್ಷದಲ್ಲಿ ಪೆಟ್ರೋಲ್ ತೆರಿಗೆಯ ಮೂಲಕ ಸಂಗ್ರಹಿಸಲಾಗಿದೆ ಎಂದ ಮೇಲೆ… ಈಗಲಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡಬಹುದಲ್ಲವೇ?

ಆದ್ದರಿಂದ… ಜನರ ಬಲಗೈಯನಲ್ಲಿರುವುದನ್ನು ಕಸಿದೂ ಎಡಗೈಗೆ ಕೊಟ್ಟು ಉಚಿತವಾಗಿ ಕೊಡಲಾಗುತ್ತಿದೆ ಎಂದು ಪ್ರಚಾರ ಮಾಡಿಕೊಳ್ಳುವುದು ಐಪಿಸ್ ಸೆಕ್ಷನ್ 415-420 ರ ಕಲಮುಗಳಡಿ ಮೋಸ, ವಂಚನೆ ಎಂಬ ಅಪರಾಧವಲ್ಲವೇ?

ವ್ಯಾಕ್ಸಿನ್ ಹೆಸರಿನಲ್ಲಿ ಅಗತ್ಯಕ್ಕಿಂತ ಮೂರು ಪಟ್ಟು ಹಣವನ್ನು ಸಂಗ್ರಹಿಸಿ ತಪ್ಪು ಲೆಕ್ಕವನ್ನು ನೀಡುವುದು ದೇಶದ್ರೋಹವಲ್ಲವೇ? ಸರ್ಕಾರಿ ಅಧಿಕಾರದ ದುರುಪಯೋಗವಲ್ಲವೇ?

ಕೋವಿಡ್ ಸಂಕಷ್ಟದಲ್ಲಿಯೂ ಬಡ-ಮಧ್ಯಮ ವರ್ಗದವರಿಂದ ಸುಲಿದ 3.4+0.60= 4ಲಕ್ಷ ಕೋಟಿ ಗುಳುಂ ಮಾಡಿರುವುದು ಭ್ರಷ್ಟಾಚಾರವಲ್ಲವೇ?

– ಶಿವಸುಂದರ್


ಇದನ್ನೂ ಓದಿ; ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...