Homeಕ್ರೀಡೆಒಲಂಪಿಕ್ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ...

ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ.... ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು.

- Advertisement -
- Advertisement -

ರಾಣಿ ರಾಂಪಾಲ್‌ ನಾಯಕತ್ವದಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು 2020ರ ಟೋಕಿಯೋ ಒಲಂಪಿಕ್ಸ್‌ನಲ್ಲಿ ಅತ್ಯುತ್ತಮ ಆಟವಾಡುತ್ತಿದ್ದು, ಸೆಮಿ ಫೈನಲ್ ಪ್ರವೇಶಿಸಿದೆ. ಹರಿಯಾಣದ ಪುಟ್ಟ ಹಳ್ಳಿಯಿಂದ ಬಂದ ರಾಣಿ ರಾಂಪಾಲ್ ಹಾಕಿ ಕ್ರೀಡೆಯತ್ತ ಗಮನ ಸೆಳೆದಿದ್ದು ಹೇಗೆ? ಕುಟುಂಬದ ಬೆಂಬಲ ಹೇಗಿತ್ತು ಎಂಬುದರ ಬಗ್ಗೆ ಅವರೇ ಹೇಳಿರುವ ಮಾತುಗಳು ಇಲ್ಲಿವೆ.

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ…. ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು. ಅಪ್ಪ ತಳ್ಳುಗಾಡಿಯಲ್ಲಿ ಸಾಮಾನು ಸಾಗಿಸುವ ಕೂಲಿ ಕೆಲಸ ಮಾಡುತ್ತಿದ್ದರು. ಅಮ್ಮ ಮನೆಕೆಲಸ ಮಾಡುತ್ತಿದ್ದರು. ನನ್ನ ಹೆತ್ತವರು ತಮ್ಮ ಕೈಲಾದಷ್ಟು ಪ್ರಯತ್ನ ಮಾಡಿ ಜೀವನ ನಡೆಸುತ್ತಿದ್ದರು. ಇವೆಲ್ಲದರಿಂದ ತಪ್ಪಿಸಿಕೊಳ್ಳಲು ನಾನು ಬಯಸುತ್ತಿದ್ದೆ.

ನನ್ನ ಮನೆಯ ಹತ್ತಿರ ಹಾಕಿ ಅಕಾಡೆಮಿ ಇತ್ತು. ಅಲ್ಲಿ ನಡೆಯುತ್ತಿದ್ದ ಹಾಕಿ ಆಟಗಾರರ ಅಭ್ಯಾಸವನ್ನು ಪ್ರತಿನಿತ್ಯ ಗಂಟೆಗಟ್ಟಲೆ ನೋಡುತ್ತಿದ್ದೆ. ಅಷ್ಟೆ ಅಲ್ಲ. ನಾನು ಕೂಡ ಆಡಬೇಕೆಂದು ಬಯಸುತ್ತಿದ್ದೆ. ಹಾಕಿ ಅಭ್ಯಾಸ ಮಾಡಲು ಹಾಕಿ ಸ್ಟಿಕ್‌ ಅಗತ್ಯವಿತ್ತು. ನನ್ನ ಅಪ್ಪನಿಗೆ ದಿನಕ್ಕೆ ದೊರೆಯುತ್ತಿದ್ದ 80 ರೂ ಕೂಲಿಯಲ್ಲಿ ಇಡೀ ಸಂಸಾರವನ್ನು ನಡೆಸುತ್ತಿದ್ದರು. ಆದ್ದರಿಂದ ನಾನು ಹಾಕಿ ಸ್ಟಿಕ್‌ ಖರೀದಿಸುವುದು ಕನಸಾಗಿತ್ತು.

ಆದರೆ ನಾನು ಮಾತ್ರ ಪ್ರತಿದಿನ ಆ ಅಕಾಡೆಮಿಯಲ್ಲಿ ಆಟ ಅಭ್ಯಾಸ ಮಾಡಿಸುತ್ತಿದ್ದ ತರಬೇತುದಾರರ (ಕೋಚ್‌) ಹತ್ತಿರ ಹೋಗಿ ನನಗೂ ಆಟ ಹೇಳಿಕೊಡಿ ಎಂದು ದುಂಬಾಲು ಬೀಳುತ್ತಿದ್ದೆ. ಆದರೆ ಕೋಚ್‌, ’ಪ್ರಾಕ್ಟೀಸ್‌ ಸಮಯದಲ್ಲಿ ಓಡಲು, ಆಡುವಷ್ಟು ಶಕ್ತಿ ನಿನ್ನಲ್ಲಿಲ್ಲ’ ಎನ್ನುತ್ತಿದ್ದ ಅವರು ನಾನು ಅಪೌಷ್ಟಿಕತೆಯಿಂದ ಬಳಲುತ್ತಿದ್ದದ್ದರಿಂದ ನನಗೆ ತರಬೇತಿ ನೀಡಲು ತಿರಸ್ಕರಿಸುತ್ತಿದ್ದರು.

ಒಂದು ದಿನ ಆಟದ ಮೈದಾನದಲ್ಲಿ ನನಗೊಂದು ಮುರಿದ ಹಾಕಿ ಸ್ಟಿಕ್‌ ಸಿಕ್ಕಿತು. ಅದನ್ನೇ ಹಿಡಿದುಕೊಂಡು ಆಟವಾಡಲು ಆರಂಭಿಸಿದೆ. ನನ್ನ ಹತ್ತಿರ ಟ್ರೈನಿಂಗ್‌ಗೆ ಅಗತ್ಯವಿರುವ ಬಟ್ಟೆ ಇರಲ್ಲಿಲ್ಲ. ನಾನು ಹಾಕಿಕೊಳ್ಳುತ್ತಿದ್ದ ಸೆಲ್ವಾರ್‌ ಕಮೀಜ್‌ನಲ್ಲಿಯೇ ನಾನು ಓಡುತ್ತಿದ್ದೆ. ನಾನು ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ನಿರ್ಧರಿಸಿದ್ದೆ. ಅವಕಾಶಕ್ಕಾಗಿ ಕೋಚ್‌ ಬಳಿ ವಿನಂತಿಸಿಕೊಂಡೆ. ಕೊನೆಗೂ ಕಷ್ಟಪಟ್ಟು ಅವರನ್ನು ಒಪ್ಪಿಸಿದೆ.

ರಾಣಿ ರಾಂಪಾಲ್‌

ಈ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ‘ಹೆಣ್ಣುಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಾರೆ. ನಾವು ನಿನ್ನನ್ನು ಸ್ಕರ್ಟ್‌‌ನಲ್ಲಿ ಆಡಲು ಬಿಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದರು. ನಾನು ಅವರ ಬಳಿ ವಿನಂತಿಸಿಕೊಂಡೆ. ‘ದಯವಿಟ್ಟು ನನಗೆ ಹೋಗಲು ಬಿಡಿ, ನಾನು ಸೋತಿದ್ದೇ ಆದರೆ ನೀವೇಳಿದಂತೆ ಕೇಳುವೆ’ ಎಂದು ಕೇಳಿಕೊಂಡೆ. ಕೊನೆಗೆ ನನ್ನ ಕುಟುಂಬ ಒಲ್ಲದ ಮನಸ್ಸಿನಿಂದಲೇ ನನಗೆ ಆಟವಾಡಲು ಸಮ್ಮತಿ ನೀಡಿತ್ತು.

ಹಾಕಿ ಕೋಚಿಂಗ್‌ ಸೂರ್ಯ ಉದಯಿಸುವ ಮುನ್ನವೇ ಆರಂಭವಾಗುತ್ತಿತ್ತು. ನಾನು ಕೂಡ ಬೆಳಗ್ಗೆ ಬೇಗ ಎದ್ದು ಮೈದಾನಕ್ಕೆ ಹೋಗಬೇಕಾಗುತ್ತಿತ್ತು. ನಮ್ಮ ಮನೆಯಲ್ಲಿ ಗಡಿಯಾರ ಇರಲಿಲ್ಲ. ಹಾಗಾಗಿ ಅಮ್ಮ ಎದ್ದು ಆಕಾಶವನ್ನು ನೋಡಿ ನನ್ನನ್ನು ಎಚ್ಚರಿಸುತ್ತಿದ್ದರು.

ಅಕಾಡೆಮಿಯಲ್ಲಿ ‌ಪ್ರತಿಯೊಬ್ಬ ಆಟಗಾರನು ಅರ್ಧ ಲೀಟರ್‌ ಹಾಲು ತರಬೇಕು ಎಂಬುದು ಕಡ್ಡಾಯವಾಗಿತ್ತು. ನಮ್ಮ ಕುಟುಂಬದಲ್ಲಿ ಕಾಲು ಲೀಟರ್‌ ಹಾಲು ಸಿಗುವುದು ಕಷ್ಟವಾಗಿತ್ತು. ಹಾಗಾಗಿ ನಾನು ಯಾರಿಗೂ ತಿಳಿಯದ ಹಾಗೆ ಸ್ವಲ್ಪ ಹಾಲಿಗೆ ಹೆಚ್ಚು ನೀರನ್ನು ಮಿಶ್ರಣ ಮಾಡಿ ಕುಡಿಯುತ್ತಿದ್ದೆ. ಏಕೆಂದರೆ ನಾನು ಹೇಗಾದರೂ ಮಾಡಿ ಆಟವಾಡಲು ಬಯಸುತ್ತಿದ್ದೆ.

ನನ್ನ ಕೋಚ್‌ ನನಗೆ ಬೆನ್ನೆಲುಬಾಗಿ ನಿಂತಿದ್ದರು. ನನಗಾಗಿ ಅವರು ಹಾಕಿ ಕಿಟ್‌ ಮತ್ತು ಶೂಗಳನ್ನು ಕೊಡಿಸಿದರು. ಅವರ ಕುಟುಂಬದೊಂದಿಗೆ ಬೆರೆಯಲು ಅವಕಾಶ ನೀಡಿದರು. ನನ್ನ ಊಟದ ಅಗತ್ಯಗಳನ್ನು ಅವರೇ ನೋಡಿಕೊಂಡರು. ಕಷ್ಟಪಟ್ಟು ನಾನು ತರಬೇತಿ ಪಡೆಯುತ್ತಿದ್ದೆ. ಒಂದು ದಿನವೂ ತರಬೇತಿಯನ್ನು ತಪ್ಪಿಸುತ್ತಿರಲಿಲ್ಲ.

ನನ್ನ ಮೊದಲ ಸಂಬಳ ಈಗಲೂ ನೆನಪಿದೆ. ಟೂರ್ನಮೆಂಟ್‌ ಒಂದರಲ್ಲಿ ನಾನು 500ರೂ ಗೆದ್ದಿದ್ದೆ. ಆ ಹಣವನ್ನು ಅಪ್ಪನಿಗೆ ಕೊಟ್ಟಿದ್ದೆ. ಅಲ್ಲಿಯವರೆಗೂ ಎಂದೂ ಅಪ್ಪ ಅಷ್ಟೊಂದು ಹಣವನ್ನು ತನ್ನ ಕೈನಲ್ಲಿ ಹಿಡಿದಿರಲಿಲ್ಲ. ‘ಒಂದಲ್ಲಾ ಒಂದು ದಿನ ನಾವು ನಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತೇನೆ’ ಎಂದು ಅಂದು ನಾನು ನನ್ನ ಕುಟುಂಬದವರಿಗೆ ಪ್ರಮಾಣ ಮಾಡಿದೆ. ಆ ನಿಟ್ಟಿನಲ್ಲಿ ನನ್ನೆಲ್ಲಾ ಶಕ್ತಿಯನ್ನು ಬಳಸಿ ಎಲ್ಲವನ್ನು ಮಾಡಿದ್ದೇನೆ.

ರಾಣಿ ರಾಂಪಾಲ್‌
PC: Reuters / Bernadett Szabo

ನನ್ನ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಚಾಂಪಿಯನ್‌ಶಿಪ್‌ಗಳಲ್ಲಿ ಆಡಿದ್ದ ನನಗೆ, ನನ್ನ 15ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡಕ್ಕೆ ಸೇರುವಂತೆ ಕರೆ ಬಂದಿತು. ಇಷ್ಟೆಲ್ಲಾ ಅವಕಾಶಗಳು ನನಗೆ ದೊರೆತಿದ್ದರೂ ನನ್ನ ಸಂಬಂಧಿಕರು ಮಾತ್ರ ಯಾವಾಗ ಮದುವೆಯಾಗುತ್ತೀಯಾ? ಎಂದು ಕೇಳುತ್ತಿದ್ದರು. ಆದರೆ ಅಪ್ಪ, ‘ನಿನ್ನ ಮನಸ್ಸಿಗೆ ಇಷ್ಟವಾಗುವವರೆಗೂ ಆಟವಾಡು’ ಎಂದರು. ನನ್ನ ಕುಟುಂಬದ ಬೆಂಬಲದೊಂದಿಗೆ ನಾನು ಆಟದ ಕಡೆ ಗಮನ ಹರಿಸಿದೆ. ಅಂತಿಮವಾಗಿ ನಾನು ಭಾರತದ ಮಹಿಳಾ ಹಾಕಿ ತಂಡದ ನಾಯಕಿಯಾಗಿದ್ದೇನೆ.

ಇದಾದ ಸ್ವಲ್ಪ ಸಮಯದ ನಂತರ ಅಪ್ಪನೊಂದಿಗೆ ಅವರ ಸ್ನೇಹಿತರೊಬ್ಬರ ಮನೆಗೆ ಹೋಗಿದ್ದೇವು. ಅವರು ತಮ್ಮ ಮೊಮ್ಮಗಳನ್ನು ಕರೆದು ನನಗೆ ‘ಅವಳು ನಿನ್ನಿಂದ ಸ್ಫೂರ್ತಿ ಪಡೆದಿದ್ದಾಳೆ. ಅವಳೂ ಹಾಕಿ ಆಟಗಾರಳಾಗಲು ಬಯಸುತ್ತಾಳೆ’ ಎಂದರು. ನನಗೆ ತುಂಬಾ ಸಂತೋಷವಾಯಿತು. ದುಖಃ ಒತ್ತರಿಸಿ ಬಂತು. ಕಣ್ಣೀರು ತಡೆಯಲಾಗಲಿಲ್ಲ.

2017ರಲ್ಲಿ, ಅಂತಿಮವಾಗಿ ನಾನು ನನ್ನ ಕುಟುಂಬಕ್ಕೆ ನೀಡಿದ್ದ ಭರವಸೆ ಈಡೇರಿಸಿದೆ. ಅವರಿಗಾಗಿ ಸ್ವಂತ ಮನೆಯನ್ನು ಖರೀದಿಸಿದೆ. ಆ ದಿನ ನಾವು ಒಬ್ಬರನ್ನೊಬ್ಬರು ಬಿಗಿದಪ್ಪಿಕೊಂಡು ಒಟ್ಟಿಗೆ ಅಳುತ್ತಿದ್ದೆವು.

ಇದು ಇಲ್ಲಿಗೆ ಮುಗಿದಿಲ್ಲ. ನನ್ನ ಕೋಚ್‌ ಟೊಕಿಯೋ ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಂಡಿದ್ದರು. ಈ ವರ್ಷ ನಾನು ಆ ಕನಸನ್ನು ನನಸು ಮಾಡಲು ತೀರ್ಮಾನಿಸಿದ್ದೇನೆ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ರಾಣಿ ರಾಂಪಾಲ್‌ ಪರಿಚಯ:

2010ರ ವಿಶ್ವಕಪ್‌ನಲ್ಲಿ ಭಾಗವಹಿಸಿದ ರಾಷ್ಟ್ರೀಯ ತಂಡದ ಅತ್ಯಂತ ಕಿರಿಯ ಆಟಗಾರ್ತಿ, ಪ್ರಸ್ತುತ ಭಾರತದ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌ ಜನಿಸಿದ್ದು 1994 ಡಿಸೆಂಬರ್‌ 4ರಂದು. ಹರಿಯಾಣ ರಾಜ್ಯದ ಕುರುಕ್ಷೇತ್ರ ಜಿಲ್ಲೆ, ಶಹಾಬಾದ್‌ ಮಾರ್ಕಂಡ ಇವರ ಹುಟ್ಟೂರು. ತನ್ನ 15ನೇ ವಯಸ್ಸಿಗೆ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪಾರ್ದಾಪಣೆ ಮಾಡಿದ ರಾಣಿ ಈವರೆಗೂ ಸುಮಾರು 212 ಪಂದ್ಯಗಳಲ್ಲಿ ಆಡಿದ್ದಾರೆ. ಸುಮಾರು 134ಗೋಲುಗಳನ್ನು ಗಳಿಸಿದ್ದಾರೆ. ಸ್ಟ್ರೈಕರ್‌ ಆಗಿಯೂ ಪ್ರಸಿದ್ಧರಾಗಿರುವ ಇವರಿಗೆ 2020ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ.

2013ರಲ್ಲಿ ನಡೆದ ಜೂನಿಯರ್‌ ವರ್ಲ್ಡ್‌ ಕಪ್‌ನಲ್ಲಿ ಇವರಿದ್ದ ಮಹಿಳಾ ತಂಡವು ಕಂಚು, 2018ರಲ್ಲಿ ಜಕರ್ತಾದಲ್ಲಿ ನಡೆದ ಏಷ್ಯನ್‌ ಕಪ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವು ಪದಕಗಳನ್ನು ಗೆದ್ದಿದ್ದಾರೆ. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ರಾಣಿ ನಾಯಕತ್ವದ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದೆ.


ಇದನ್ನೂ ಓದಿ; ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...