Homeಮುಖಪುಟಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

ಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

- Advertisement -
- Advertisement -

2020 ರ ಜೆಎನ್‌ಯು ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಲವಾರು ವಿದ್ಯಾರ್ಥಿಗಳ ಮೇಳೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

2020 ರ ಜನವರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ ಎಂದು  ಕೇಂದ್ರ ಗೃಹ ಖಾತೆಗಳ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಘಟನೆ ನಡೆದು ಒಂದೂವರೆ ವರ್ಷಗಳ ನಂತರವೂ ಯಾರನ್ನೂ ಬಂಧಿಸಲಾಗಿಲ್ಲ.

ಹಿಂಸಾಚಾರ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡ ರಚಿಸಲಾಗಿತ್ತು, ಇದರ ಭಾಗವಾಗಿ ಸಾಕ್ಷಿಗಳನ್ನು ಪರಿಶೀಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದ ಫೂಟೇಜ್‌ಗಳ ಸಂಗ್ರಹ ಮತ್ತು ವಿಶ್ಲೇಷಣೆ ನಡೆಸಲಾಗಿತ್ತು. ಶಂಕಿತರನ್ನು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಲಾಗಿತ್ತು. ಆದರೆ, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಕೇಂದ್ರ ಸಚಿವಾಲಯವು ಸಂಸತ್ತಿನಲ್ಲಿ ಡಿಎಂಕೆಯ ದಯಾನಿಧಿ ಮಾರನ್ ಅವರ ಪ್ರಶ್ನೆಗೆ ಮಾಹಿತಿ ನೀಡಿದೆ.

ಜನವರಿ 5, 2020 ರಂದು, ಸುಮಾರು 50 ಮಂದಿ ಮುಖವಾಡ ಧರಿಸಿದ ಯುವಕರು ಮತ್ತು ಮಹಿಳೆಯರು, ಕಬ್ಬಿಣದ ರಾಡ್‌ಗಳು ಮತ್ತು ಸುತ್ತಿಗೆಗಗಳನ್ನು ಹಿಡಿದು ಶಸ್ತ್ರಸಜ್ಜಿತರಾಗಿ, ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಿದ್ದರು. ವಿದ್ಯಾರ್ಥಿಗಳು ಎಚ್ಚರಗೊಳ್ಳುವ ಮೊದಲೇ ಹಾಸ್ಟೆಲ್‌ಗಳು ಮತ್ತು ಇತರ ಕಟ್ಟಡಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಇದನ್ನೂ ಓದಿ: “ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

 

ಜೆಎನ್‌ಯು  ಅಧ್ಯಕ್ಷೆ ಐಶೆ ಘೋಷ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಮಾರಣಾಂತಿಕ ದಾಲೀಗೆ ಒಳಗಾಗಿ ತಲೆಯಿಂದ ರಕ್ತ ಹರಿಯುತ್ತಿದ್ದ ಆಕೆಯ ಫೋಟೋಗಳು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ABVP ಸದಸ್ಯರೇ ದಾಳಿ ನಡೆಸಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದೆ, ಹಾಗಾಗಿಯೇ ಪೊಲೀಸರು ದಾಳಿಗೆ ಸಹಕರಿಸಿದ್ದಾರೆ ಎಂದು ಹಿಂಸಾಚಾರದ ವಿರುದ್ಧ ಮುಂಬೈ, ಚೆನ್ನೈ, ಪುಣೆ, ಹೈದರಾಬಾದ್, ಒಡಿಶಾ, ಕೋಲ್ಕತಾ, ಬೆಂಗಳೂರು ಮತ್ತು ಅಹಮದಾಬಾದ್‌ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ವಿಪಕ್ಷ ನಾಯಕರು ಘಟನೆಯನ್ನು ಖಂಡಿಸಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದರು. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಕರೆದಿದ್ದರು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಸಚಿವ ಪಿ ಚಿದಂಬರಂ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ಮಂದಿ ತನಿಖೆಗೆ ಆಗ್ರಹಿಸಿದ್ದರು.


ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿಗಳ ಪರವಾಗಿ ನಾವಿದ್ದೇವೆ: JNU ಹಿಂಸೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...