Homeಮುಖಪುಟಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

ಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

- Advertisement -
- Advertisement -

2020 ರ ಜೆಎನ್‌ಯು ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಲವಾರು ವಿದ್ಯಾರ್ಥಿಗಳ ಮೇಳೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

2020 ರ ಜನವರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ ಎಂದು  ಕೇಂದ್ರ ಗೃಹ ಖಾತೆಗಳ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಘಟನೆ ನಡೆದು ಒಂದೂವರೆ ವರ್ಷಗಳ ನಂತರವೂ ಯಾರನ್ನೂ ಬಂಧಿಸಲಾಗಿಲ್ಲ.

ಹಿಂಸಾಚಾರ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡ ರಚಿಸಲಾಗಿತ್ತು, ಇದರ ಭಾಗವಾಗಿ ಸಾಕ್ಷಿಗಳನ್ನು ಪರಿಶೀಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದ ಫೂಟೇಜ್‌ಗಳ ಸಂಗ್ರಹ ಮತ್ತು ವಿಶ್ಲೇಷಣೆ ನಡೆಸಲಾಗಿತ್ತು. ಶಂಕಿತರನ್ನು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಲಾಗಿತ್ತು. ಆದರೆ, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಕೇಂದ್ರ ಸಚಿವಾಲಯವು ಸಂಸತ್ತಿನಲ್ಲಿ ಡಿಎಂಕೆಯ ದಯಾನಿಧಿ ಮಾರನ್ ಅವರ ಪ್ರಶ್ನೆಗೆ ಮಾಹಿತಿ ನೀಡಿದೆ.

ಜನವರಿ 5, 2020 ರಂದು, ಸುಮಾರು 50 ಮಂದಿ ಮುಖವಾಡ ಧರಿಸಿದ ಯುವಕರು ಮತ್ತು ಮಹಿಳೆಯರು, ಕಬ್ಬಿಣದ ರಾಡ್‌ಗಳು ಮತ್ತು ಸುತ್ತಿಗೆಗಗಳನ್ನು ಹಿಡಿದು ಶಸ್ತ್ರಸಜ್ಜಿತರಾಗಿ, ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಿದ್ದರು. ವಿದ್ಯಾರ್ಥಿಗಳು ಎಚ್ಚರಗೊಳ್ಳುವ ಮೊದಲೇ ಹಾಸ್ಟೆಲ್‌ಗಳು ಮತ್ತು ಇತರ ಕಟ್ಟಡಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಇದನ್ನೂ ಓದಿ: “ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

 

ಜೆಎನ್‌ಯು  ಅಧ್ಯಕ್ಷೆ ಐಶೆ ಘೋಷ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಮಾರಣಾಂತಿಕ ದಾಲೀಗೆ ಒಳಗಾಗಿ ತಲೆಯಿಂದ ರಕ್ತ ಹರಿಯುತ್ತಿದ್ದ ಆಕೆಯ ಫೋಟೋಗಳು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ABVP ಸದಸ್ಯರೇ ದಾಳಿ ನಡೆಸಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದೆ, ಹಾಗಾಗಿಯೇ ಪೊಲೀಸರು ದಾಳಿಗೆ ಸಹಕರಿಸಿದ್ದಾರೆ ಎಂದು ಹಿಂಸಾಚಾರದ ವಿರುದ್ಧ ಮುಂಬೈ, ಚೆನ್ನೈ, ಪುಣೆ, ಹೈದರಾಬಾದ್, ಒಡಿಶಾ, ಕೋಲ್ಕತಾ, ಬೆಂಗಳೂರು ಮತ್ತು ಅಹಮದಾಬಾದ್‌ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ವಿಪಕ್ಷ ನಾಯಕರು ಘಟನೆಯನ್ನು ಖಂಡಿಸಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದರು. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಕರೆದಿದ್ದರು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಸಚಿವ ಪಿ ಚಿದಂಬರಂ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ಮಂದಿ ತನಿಖೆಗೆ ಆಗ್ರಹಿಸಿದ್ದರು.


ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿಗಳ ಪರವಾಗಿ ನಾವಿದ್ದೇವೆ: JNU ಹಿಂಸೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...