Homeಮುಖಪುಟದೆಹಲಿ ಶಾಸಕರ ವೇತನ 90 ಸಾವಿರಕ್ಕೆ ಏರಿಕೆ, ಆದರೂ ದೇಶದಲ್ಲಿ ಕಡಿಮೆ ಸಂಬಳ ಪಡೆಯುವ ಶಾಸಕರಿವರು!

ದೆಹಲಿ ಶಾಸಕರ ವೇತನ 90 ಸಾವಿರಕ್ಕೆ ಏರಿಕೆ, ಆದರೂ ದೇಶದಲ್ಲಿ ಕಡಿಮೆ ಸಂಬಳ ಪಡೆಯುವ ಶಾಸಕರಿವರು!

- Advertisement -
- Advertisement -

ಕೇಂದ್ರ ಸರ್ಕಾರವು ಅನುಮೋದಿಸಿದ ದೆಹಲಿ ನಗರದ ಶಾಸಕರ ಪರಿಷ್ಕೃತ ವೇತನವನ್ನು ದೆಹಲಿ ಸರ್ಕಾರವು ಸ್ವೀಕರಿಸಿದ್ದು, ಇದರ ಅಡಿಯಲ್ಲಿ ವೇತನ ಮತ್ತು ಭತ್ಯೆ ಸೇರಿ ತಿಂಗಳಿಗೆ 90,000 ರೂಪಾಯಿಗಳನ್ನು ಶಾಸಕರು ಪಡೆಯಲಿದ್ದಾರೆ.

ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಅನುಸಾರವಾಗಿ ಶಾಸಕರ ವೇತನ ಹೆಚ್ಚಳಕ್ಕೆ ದೆಹಲಿ ಸಂಪುಟ ಸಭೆ ಮಂಗಳವಾರ ಅನುಮೋದನೆ ನೀಡಿದೆ ಎಂದು ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

“ಕೇಂದ್ರದ ಪ್ರಸ್ತಾವನೆಯಂತೆ ಶಾಸಕರ ವೇತನ ಹೆಚ್ಚಳಕ್ಕೆ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಕ್ಯಾಬಿನೆಟ್ ಅನುಮೋದನೆ ನೀಡಿದೆ. ದೆಹಲಿ ಶಾಸಕರು ಕೇವಲ 30,000 ಸಾವಿರ ಸಂಬಳ ಪಡೆಯುತ್ತಾರೆ.  ದೆಹಲಿಯ ಶಾಸಕರು ಭಾರತದಾದ್ಯಂತ ಕಡಿಮೆ ಸಂಬಳ ಪಡೆಯುವ ಶಾಸಕರಾಗಿ ಮುಂದುವರಿಯಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ 10 ವರ್ಷಗಳಿಂದ ದೆಹಲಿ ಶಾಸಕರ ಸಂಬಳ ಮತ್ತು ಭತ್ಯೆಯನ್ನು ಹೆಚ್ಚಿಸಿರಲಿಲ್ಲ. ಶಾಸಕರ ಮೂಲ ಮಾಸಿಕ ವೇತನ 12,000 ರೂಪಾಯಿ, ಭತ್ಯೆಗಳು ಸೇರಿ 54,000 ಸಾವಿರ ರೂಪಾಯಿ ಪಡೆಯುತ್ತಿದ್ದರು. ಈಗ ಭತ್ಯೆ ಮತ್ತು ಸಂಬಳ ಸೇರಿ 90,000 ಸಾವಿರ ಪಡೆಯಲಿದ್ದಾರೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

 

“ದೆಹಲಿಯಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ, ಕೇಂದ್ರವು ವಿಧಿಸಿರುವ ನಿರ್ಬಂಧವು ದೆಹಲಿಯ ಶಾಸಕರನ್ನು ದೇಶದ ಅತ್ಯಂತ ಕಡಿಮೆ ಆದಾಯದ ಶಾಸಕರಲ್ಲಿ ಒಬ್ಬರನ್ನಾಗಿಸಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಶಾಸಕರು ಸುಮಾರು 1.5 ಲಕ್ಷ ವೇತನ ಪಡೆಯುತ್ತಾರೆ. ಇದು  ದೆಹಲಿಯ ಶಾಸಕರು ಗಳಿಸುವ ಮೊತ್ತಕ್ಕಿಂತ 2 ಪಟ್ಟು ಹೆಚ್ಚು. 2011 ರಿಂದ ದೆಹಲಿಯ ಶಾಸಕರ ಸಂಬಳ ಏರಿಕೆಯಾಗಿಲ್ಲ. ದೆಹಲಿಯ ಶಾಸಕರು ಇತರ ರಾಜ್ಯಗಳ ಶಾಸಕರ ವೇತನ ಸರಿಸಮಾನವಾಗಿರಬೇಕು ಎಂದು ದೆಹಲಿ ಸರ್ಕಾರ MHA ಗೆ ಮನವಿ ಮಾಡಿತ್ತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಟ್ಟು 90,000 ರೂಪಾಯಿಗಳಲ್ಲಿ 30,000 ಮೂಲ ವೇತನ, 25,000 ಕ್ಷೇತ್ರ ಭತ್ಯೆ, 15,000 ಸೆಕ್ರೆಟರಿಯಟ್ ಭತ್ಯೆ, ದೂರವಾಣಿ ಮತ್ತು ಸಾರಿಗೆಗಾಗಿ ತಲಾ 10,000 ರೂಪಾಯಿಗಳನ್ನು ಒಳಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

ಈ ಪ್ರಸ್ತಾವನೆಯು ಕಳೆದ ಐದು ವರ್ಷಗಳಿಂದ ಕೇಂದ್ರದ ಬಳಿಯಿತ್ತು. ಮೂಲ ವೇತನವನ್ನು 54,000 ರೂ.ಗೆ ಏರಿಸಲು ದೆಹಲಿ ಸರ್ಕಾರ ಕೋರಿತ್ತು. ಆದರೆ, ಒಕ್ಕೂಟ ಸರ್ಕಾರ ಮೂಲ ವೇತನವನ್ನು 30,000 ರೂ.ಗೆ ನಿರ್ಬಂಧಿಸಿದೆ ಎಂದು ದೆಹಲಿ ಸರ್ಕಾರವು ಸಂಪುಟ ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಡೇಟಾಖೋಲಿ; ಉತ್ತರದ ದೆಹಲಿಯ ಪ್ರಶ್ನಾರ್ಥಕ ರಾಜಪ್ರತಿನಿಧಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...