Homeಮುಖಪುಟದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ, ಅಪ್ರಾಪ್ತ ದಲಿತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಗು ಎಂದು ಪ್ರತಿಭಟನೆ ಆರಂಭಿಸಿದ್ದಾರೆ.

- Advertisement -
- Advertisement -

ದೆಹಲಿಯ ಪೂಜಾರಿಯೊಬ್ಬ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ನಂತರ ಬಲವಂತವಾಗಿ ಶವಸಂಸ್ಕಾರ ಮಾಡಿದ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ, ಅಪ್ರಾಪ್ತ ದಲಿತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಗು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಮಾನುಷ ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿದ್ದು ನಾಳೆ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ನ್ಯಾಯಕ್ಕಾಗಿನ ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ಎಡ ಮಣಿಕಟ್ಟು ಮತ್ತು ಮೊಣಕೈ ನಡುವೆ ಸುಟ್ಟ ಗುರುತುಗಳಿದ್ದು, ಆಕೆಯ ತುಟಿಗಳು ಸಹ ನೀಲಿ ಬಣ್ಣದಲ್ಲಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಈ ವಿಷಯ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ನೆರೆಹೊರೆಯ ಜನರು ಪೂಜಾರಿಯನ್ನು ಥಳಿಸಿದಾಗ ಆತ ಅತ್ಯಾಚಾಸವೆಸಗಿ ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೋಷಕರು ಮೂಕನಾಯಕ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...