Homeಮುಖಪುಟದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ದೆಹಲಿಯ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಸಂತ್ರಸ್ತ ಕುಟುಂಬ ನ್ಯಾಯವನ್ನಲ್ಲದೆ ಬೇರೆನೂ ಕೇಳುತ್ತಿಲ್ಲ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಅವರ ಜೊತೆಯಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.

ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಪೂಜಾರಿಯೊಬ್ಬ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಬಲವಂತವಾಗಿ ಅಪ್ರಾಪ್ತೆಯ ಶವಸಂಸ್ಕಾರ ಮಾಡಲಾಗಿತ್ತು.

“ನಾನು ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಅವರಿಗೆ ನ್ಯಾಯ ಬಿಟ್ಟು ಬೇರೇನೂ ಬೇಕಿಲ್ಲ. ಅವರಿಗೆ ನ್ಯಾಯ ಬೇಕಾಗಿದೆ. ಅದಕ್ಕೆ ನಾನು ಸಹಾಯ ಮಾಡಬೇಕು ಎಂದು ಕೇಳಿದ್ದಾರೆ. ನಾನು ಅವರಿಗೆ ನ್ಯಾಯ ಸಿಗುವವರೆಗೂ ಅವರ ಜೊತೆಯಲ್ಲಿಯೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನು ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ಮೃತ ಬಾಲಕಿಯ ಸಂತ್ರಸ್ತ ಕುಟುಂಬದ ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, “ಆಕೆಯ ಹೆತ್ತವರ ಕಣ್ಣೀರು ಒಂದೇ ಒಂದು ಮಾತನ್ನು ಹೇಳುತ್ತಿದೆ. ಅವರ ಮಗಳು, ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.

ಮಂಗಳವಾರ ಕೂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇತ್ತ, ಮರಣೋತ್ತರ ಪರೀಕ್ಷೆ ಅನಿಶ್ಚಿತವಾಗಿದೆ. ಆರೋಪಿಯನ್ನು ಸುಳ್ಳು ಪತ್ತೆಕಾರಕ (lie detector) ಮತ್ತು ಔಷಧ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ ದೆಹಲಿ) ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ವಿಧಿವಿಜ್ಞಾನ ಪರೀಕ್ಷೆಯಲ್ಲಿ ಯಂತ್ರದ ಮೂಲಕ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿದೆ. ಬಾಲಕಿಗೆ ಕರೆಂಟ್ ಷಾಕ್ ತಗಲಿರುವುದನ್ನು ಪ್ರಾಥಮಿಕ ವರದಿಗಳು ದೃಢಪಡಿಸಿವೆ. ನಾವು ಶೀಘ್ರದಲ್ಲೇ ಚಾರ್ಜ್ ಶೀಟ್ ಹಾಕಲಿದ್ದೇವೆ. ಅದಕ್ಕೆ 60 ದಿನಗಳ ಕಾಲಾವಕಾಶವಿದೆ ಎಂದು ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...