Homeಕ್ರೀಡೆಒಲಂಪಿಕ್ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ.

- Advertisement -
- Advertisement -

ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ ಭಾರತದ ಲವ್ಲಿನಾ ಬೊರ್ಗೊಹೈನ್ 5-0 ಅಂತರದಿಂದ ಸೋಲನಪ್ಪಿದರೂ ಸಹ ಕಂಚಿನ ಪದಕ ಗೆದ್ದು ಭಾರತಕ್ಕೆ ಗೌರವ ತಂದುಕೊಟ್ಟಿದ್ದಾಳೆ.

ಭಾರತದ ಬಹುತೇಕ ಪೋಷಕರಿಗೆ ಹೆಣ್ಣು ಮಕ್ಕಳೆಂದರೆ ತಾತ್ಸಾರ. ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳು, ಮಹಿಳಾ ಲಿಂಗಾನುಪಾತ ಕಡಿಮೆ ಇರುವುದು ಈ ವಿದ್ಯಾಮಾನಕ್ಕೆ ಸಾಕ್ಷಿ. ಇಂತಹ ಮನಸ್ಥಿತಿಯ ಪೋಷಕರಿಗೆ ತಿಳಿಹೇಳುವಂತೆ, ಮತ್ತೊಮ್ಮೆ ಯೋಚಿಸಿ ಎಂದು ಆಗ್ರಹಿಸುವಂತೆ ಭಾರತದ ಮಹಿಳಾ ಕ್ರೀಡಾಪಟುಗಳು ಟೋಕಿಯೋ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿದ್ದಾರೆ.

ಈ ಬಾರಿಯ ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಭಾರತವನ್ನು ಪ್ರತಿನಿಧಿಸಿ ಒಟ್ಟು 127 ಕ್ರೀಡಾಪಟುಗಳು ಟೋಕಿಯೋಗೆ ತೆರಳಿದ್ದರು. ವೆಯ್ಟ್ ಲಿಫ್ಟಿಂಗ್‌ನಲ್ಲಿ ಮಣಿಪುರದ ತಾರೆ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಮನೆಮಾತಾದ ಕೆಲವೇ ದಿನಗಳಲ್ಲಿ ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾಳೆ. ಅಸ್ಸಾಂನ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕೂಡ ಕ್ವಾಟರ್‌ಫೈನಲ್‌ನಲ್ಲಿ ಜಯಭೇರಿ ಭಾರಿಸುವ ಮೂಲಕ ಒಲಂಪಿಕ್‌ನಲ್ಲಿ ಪದಕ ತಂದುಕೊಟ್ಟ ಮೂರನೇ ಬಾಕ್ಸರ್ ಎಂಬ ಕೀರ್ತಿಗೆ ಪಾತ್ರವಾದರು.

ಪುಟ್ಟ ತೈವಾನ್ ದೇಶದ ಬಾಕ್ಸರ್ ನೀನ್-ಚಿನ್ ಚೆನ್ ಮಾಜಿ ವಿಶ್ವ ಚಾಂಪಿಯನ್. ಈ ಬಾರಿ ಒಲಂಪಿಕ್ಸ್ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುಗಳಲ್ಲೊಬ್ಬರು. ಆಕೆಯೆದುರು ನಾಲ್ಕು ಬಾರಿ ಸೋಲುಂಡಿದ್ದ ಲವ್ಲಿನಾ ಬೊರ್ಗೊಹೈನ್ ವೆಲ್ಟರ್‌ವೈಟ್ (69 ಕೆಜಿ) ವಿಭಾಗದಲ್ಲಿ ಜುಲೈ 30 ರಂದು ನಡೆದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 4-1 ಅಂತರದಿಂದ ಭರ್ಜರಿ ಗೆಲವು ಸಾಧಿಸಿ ಸೆಮಿಫೈನಲ್ ತಲುಪಿದ್ದಳು.

ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬಾರಾಮುಖಿಯಾ ಎಂಬ ಹಳ್ಳಿಯಲ್ಲಿ ಬಡಮಧ್ಯಮ ವರ್ಗದ ಕುಟುಂಬದಲ್ಲಿ ಮೂರನೇ ಹೆಣ್ಣು ಮಗಳಾಗಿ 1997ರ ಅಕ್ಟೋಬರ್ 02 ರಂದು ಲವ್ಲಿನಾ ಜನಿಸಿದಳು. ಭಾರತದ ಬಹುತೇಕ ಪೋಷಕರ ಮನಸ್ಥಿತಿಗೆ ವಿರುದ್ಧವಾಗಿ ಲವ್ಲಿನಾ ಪೋಷಕರಾದ ಟಿಕೆನ್ ಮತ್ತು ಮಮೋನಿ ಹೆಣ್ಣು ಮಕ್ಕಳೆಂದು ಮೂಗು ಮುರಿಯದೆ ಪ್ರೀತಿಯಿಂದ ಬೆಳೆಸಿದರು. ತಮ್ಮ ಮೂರು ಹೆಣ್ಣು ಮಕ್ಕಳು ತಮಗಿಷ್ಟವಾದ ಕ್ರೀಡೆಯಲ್ಲಿ ಸಾಧನೆಗೈಯಲು ಆಸರೆಯಾದರು.

ಲವ್ಲಿನಾಳ ಅವಳಿ ಸಹೋದರಿಯರಾದ ಲಿಮಾ ಮತ್ತು ಲಿಚಾ ಮಾರ್ಷಲ್ ಆರ್ಟ್ಸ್ ಕಲಿತು ಕಿಕ್ ಬಾಕ್ಸಿಂಗ್‌ನಲ್ಲಿ ಪರಿಣಿತರಾದರು. ಅವರೀಗ CISF ಮತ್ತು BSF ನಲ್ಲಿ ಉದ್ಯೋಗಿಗಲಾಗಿದ್ದಾರೆ. ಅದೇ ಹಾದಿಯಲ್ಲಿ ಮುನ್ನಡೆದ ಲವ್ಲಿನಾ 2012 ರಿಂದ ಬಾಕ್ಸಿಂಗ್ ತರಬೇತು ಪಡೆದು ಮೊವಾಯಿ ಥಾಯ್ ಎಂಬ ಮಾರ್ಷಲ್ ಆರ್ಟ್ಸ್ ಪರಿಣಿತಳಾದಳು.

ಭಾರತೀಯ ಕ್ರೀಡಾ ಪ್ರಾಧೀಕಾರದ ತರಬೇತುದಾರರಾದ ಪದಮ್ ಬೊರೊ ಮಾರ್ಗದರ್ಶನದಲ್ಲಿ ಗೌಹಾತಿಯಲ್ಲಿ ಬಾಕ್ಸಿಂಗ್ ತರಬೇತಿ ಪಡೆದ ಲವ್ಲಿನಾ ಪ್ರಮುಖವಾಗಿ ವೆಲ್ಟರ್‌ವೈಟ್ ವಿಭಾಗದಲ್ಲಿ ನಾಲ್ಕು ಕಂಚಿನ ಪದಕ ಗೆದ್ದಿದ್ದಾರೆ. 2018ರ ದೆಹಲಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ ಮತ್ತು 2019 ರ ಉಲಾನ್-ಉಡೆ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಈಕೆ 2017ರ ದುಬೈ ಮತ್ತು 2021ರ 2021 ದುಬೈ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿಯೂ ಕಂಚು ಗೆದ್ದಿದ್ದಾಳೆ. ಸೆರ್ಬಿಯಾದಲ್ಲಿ ನಡೆದ ನೇಷನ್ಸ್ ಕಪ್‌ನಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವಾರು ಗೆಲುವಿನ ನಗೆ ಬೀರಿದ್ದಾಳೆ. ಅವಳ ಒಟ್ಟಾರೆ ಸಾಧನೆ ಗುರುತಿಸಿ 2020ರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಏಷ್ಯನ್ ಕ್ವಾಲಿಫೈಯರ್ಸ್‌ ಜೋರ್ಡಾನ್‌ನಲ್ಲಿ ಅವರು ಟೋಕಿಯೋ ಒಲಂಪಿಕ್ಸ್‌ಗೆ ಅರ್ಹತೆ ಪಡೆದರು. ಆದರೆ ಲಾಕ್‌ಡೌನ್ ಕಾರಣಕ್ಕಾಗಿ ಹಲವು ತಿಂಗಳು ಮನೆಯಲ್ಲಿಯೇ ಕಳೆದರು. ಲವ್ಲಿನಾ ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದ ಸಮಯದಲ್ಲಿ ಅವರ ತಾಯಿ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಆಪರೇಷನ್ ಮಾಡುವ ಸಂದರ್ಭದಲ್ಲಿ ಲವ್ಲಿನಾ ಅಲ್ಲಿದ್ದಳು. ಪಟಿಯಾಲದಲ್ಲಿ ಅವರು ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರ ತಾಯಿ ಕೋವಿಡ್‌ ಸೋಂಕಿಗೆ ತುತ್ತಾಗಿದ್ದರು. ಆಗಲೂ ಲವ್ಲಿನಾ ತನ್ನ ಸ್ವಗ್ರಾಮಕ್ಕೆ ತೆರಳಿ 11 ದಿನ ತಾಯಿಯೊಂದಿಗಿದ್ದು ಅವರನ್ನು ಉಪಚರಿಸಿ ನಂತರ ತರಬೇತಿಗೆ ಮರಳಿದ್ದಳು.

ಒಬ್ಬ ಮಗಳಾಗಿ ಹೆತ್ತವರ ಕಷ್ಟಕಾಲದಲ್ಲಿ ಜೊತೆಗಿದ್ದು ಬಹಳ ಪ್ರಬುದ್ಧವಾಗಿ ಲವ್ಲಿನಾ ತನ್ನ ಜವಾಬ್ದಾರಿ ನಿಭಾಯಿಸಿದ್ದಾಳೆ. ಒಬ್ಬ ಕ್ರೀಡಾಪಟುವಾಗಿ ಪದಕ ಗಳಿಸಿ ದೇಶಕ್ಕೆ ಹೆಮ್ಮೆ ಎನಿಸಿದ್ದಾಳೆ. ಏನೇ ಆಗಲಿ ಆಕೆ ಭಾರತದ ಮತ್ತೊಬ್ಬ ಮೇರಿ ಕೋಮ್ ಆಗಿ ಮಿಂಚುವುದಂತೂ ಗ್ಯಾರಂಟಿ..

ಈ ಟೋಕಿಯೋ ಒಲಂಪಿಕ್ಸ್ ಭಾರತದ ಬಹುತೇಕರ ಪುರುಷರ ಮನಸ್ಥಿತಿಯನ್ನು ಬದಲಿಸಿಕೊಳ್ಳಲು ಮತ್ತೊಂದು ಸುವರ್ಣ ಅವಕಾಶವಾಗಿದೆ. ಸ್ತ್ರೀ ಸಮಾನತೆ, ಸ್ತ್ರೀ ಬಲವರ್ಧನೆ ಎಂಬುದು ಕೇವಲ ಘೋಷಣೆಯಾಗದೇ ನಿಜವಾಗಿ ಆಚರಣೆ ತರಲು ಮೊದಲು ತಲೆಯಲ್ಲಿನ ಲಿಂಗತಾರತಮ್ಯ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಿದೆ. ಲವ್ಲಿನಾ, ಮೀರಾಬಾಯಿ, ಸಿಂಧು ಈ ನಿಟ್ಟಿನಲ್ಲಿ ನಮಗೆ ಬಹುದೊಡ್ಡ ಪಾಠವಾಗಲಿ.. ಒಲಂಪಿಕ್ಸ್‌ನಲ್ಲಿ ಪದಕ ಜಯಿಸಿ ಭಾರತದ ಗೌರವ ಕಾಪಾಡುತ್ತಿರುವ ಈ ಹೆಣ್ಮಕ್ಕಳಿಗೆ ಅಭಿನಂದನೆಗಳು.

–       ಮುತ್ತುರಾಜು


ಇದನ್ನೂ ಓದಿ; ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...