Homeಮುಖಪುಟಬಿಎಸ್‌ವೈ ಸಂಪುಟದಲ್ಲಿದ್ದ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ತಪ್ಪಿದ್ದವರು ಯಾರು ಯಾರು ಗೊತ್ತೆ?

ಬಿಎಸ್‌ವೈ ಸಂಪುಟದಲ್ಲಿದ್ದ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ತಪ್ಪಿದ್ದವರು ಯಾರು ಯಾರು ಗೊತ್ತೆ?

- Advertisement -
- Advertisement -

ಅಂತೂ ಇಂತೂ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರು 29 ನೂತನ ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. ಬಿಎಸ್‌ವೈ ಸಂಪುಟದಲ್ಲಿದ್ದ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ತಪ್ಪಿದ ಮಾಜಿ ಸಚಿವರ ಪಟ್ಟಿ ಇಲ್ಲಿದೆ.

ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್‌ರವರು ಬಿ.ಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವರಾಗಿದ್ದರು. ಅವರು ಬೊಮ್ಮಾಯಿಯವರ ಸಂಪುಟದಲ್ಲಿಲ್ಲ. ಅವರನ್ನು ಸ್ವೀಕರ್ ಅಥವಾ ಬೇರೆ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡುವ ಚಿಂತನೆ ನಡೆದಿದೆ ಅಂತೆ

ಎಸ್ ಸುರೇಶ್ ಕುಮಾರ್

ಬಿಎಸ್‌ವೈ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ಅವರನ್ನು ಈಗ ಕೈಬಿಡಲಾಗಿದೆ.

ಸಿ.ಪಿ ಯೋಗಿಶ್ವರ್

ಪ್ರವಾಸೋದ್ಯಮ, ಪರಿಸರ ಮತ್ತು ಭೂವಿಜ್ಞಾನ ಸಚಿವರಾಗಿ ಇದೇ ವರ್ಷ ಜನವರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿ.ಪಿ ಯೋಗಿಶ್ವರ್‌ರವರಿಗೆ ಗೇಟ್ ಪಾಸ್ ನೀಡಲಾಗಿದೆ.

ಲಕ್ಷ್ಮಣ ಸವದಿ

ಬಿಎಸ್‌ವೈ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿಯವರನ್ನು ಬಸವರಾಜ ಬೊಮ್ಮಾಯಿ ಸಂಪುಟದಿಂದ ಹೊರಗಿಡಲಾಗಿದೆ.

ಶ್ರೀಮಂತ ಪಾಟೀಲ್

ಜವಳಿ ಸಚಿವರಾಗಿದ್ದ ಶ್ರೀಮಂತ ಪಾಟೀಲ್ ಹೊಸ ಸಂಪುಟದಿಂದ ಹೊರಗುಳಿದಿದ್ದಾರೆ.

ಆರ್ ಶಂಕರ್

ರೇಷ್ಮೆ, ತೋಟಗಾರಿಕೆ ಸಚಿವರಾಗಿದ್ದ ಆರ್ ಶಂಕರ್‌ರವರು ನೂತನ ಸಚಿವರ ಪಟ್ಟಿಯಿಂದ ಹೊರಗಿದ್ದಾರೆ.

ಅರವಿಂದ ಲಿಂಬಾವಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅರಣ್ಯ ಇಲಾಖೆಯ ಸಚಿವರಾಗಿದ್ದರು. ಅವರನ್ನು ಕೈಬಿಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿಯವರು ನೇರವಾಗಿ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ ಇಂತಿದೆ.

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿ.ಸಿ. ಪಾಟೀಲ್ – ಹಿರೇಕೆರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಉಮೇಶ್ ಕತ್ತಿ- ಹುಕ್ಕೇರಿ

6.ಎಸ್.ಟಿ.ಸೋಮಶೇಖರ್- ಯಶವಂತಪುರ

7.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

8.ಬೈರತಿ‌ ಬಸವರಾಜ – ಕೆ ಆರ್ ಪುರಂ

9.ಮುರುಗೇಶ್ ನಿರಾಣಿ – ಬಿಳಿಗಿ

10.ಶಿವರಾಂ ಹೆಬ್ಬಾರ್- ಯಲ್ಲಾಪುರ

11.ಶಶಿಕಲಾ ಜೊಲ್ಲೆ- ನಿಪ್ಪಾಣಿ

12.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

13.ಸುನೀಲ್ ಕುಮಾರ್ – ಕಾರ್ಕಳ

14.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

15.ಗೋವಿಂದ ಕಾರಜೋಳ-ಮುಧೋಳ

16.ಮುನಿರತ್ನ- ಆರ್ ಆರ್ ನಗರ

17.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

20.ಹಾಲಪ್ಪ ಆಚಾರ್ – ಯಲ್ಬುರ್ಗ

21.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

22.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

23.ಪ್ರಭು ಚೌವ್ಹಾಣ್ – ಔರಾದ್

24.ವಿ ಸೋಮಣ್ಣ – ಗೋವಿಂದ್ ರಾಜನಗರ

25.ಎಸ್ ಅಂಗಾರ-ಸುಳ್ಯ

26.ಆನಂದ್ ಸಿಂಗ್ – ಹೊಸಪೇಟೆ

27.ಸಿ ಸಿ‌ ಪಾಟೀಲ್ – ನರಗುಂದ

28.ಬಿಸಿ ನಾಗೇಶ್ – ತಿಪಟೂರು

29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

ಜೆ.ಪಿ ನಡ್ಡಾರವರು ಮತ್ತು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರವರು ಯಡಿಯೂರಪ್ಪನವರ ಮಗ ಬಿ.ವೈ ವಿಜೇಯೇಂದ್ರರವರ ಜೊತೆ ಮಾತನಾಡಿದ್ದಾರೆ. ಸಚಿವ ಸಂಪುಟದ ಪಟ್ಟಿಯಲ್ಲಿ ಬಿ.ವೈ ವಿಜೇಯೇಂದ್ರ ಹೆಸರು ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನೂತನ ಸಚಿವರ ಪಟ್ಟಿ ಇಲ್ಲಿದೆ: ಬಿ.ವೈ ವಿಜಯೇಂದ್ರಗೆ ಇಲ್ಲ ಸಚಿವ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...