Homeಕರ್ನಾಟಕಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

- Advertisement -
- Advertisement -

ರಾಜ್ಯದ ಹೊಸ ಸಚಿವ ಸಂಪುಟದ ಪಟ್ಟಿ ಬುಧವಾರ ಹೊರ ಬಿದ್ದಿದೆ. ಹಲವು ಪ್ರಭಾವಿ ಸಚಿವರಿಗೆ ಈ ಬಾರಿಯ ಸಂಪುಟದಲ್ಲಿ ಸ್ಥಾನ ಗಿಟ್ಟಿಲ್ಲ. ಅದಾಗಿಯು ಯಡಿಯೂರಪ್ಪ ಅವರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ, ಮೊಟ್ಟೆ ಟೆಂಡರ್‌ ಹಗರಣದ ಆರೋಪ ಹೊತ್ತಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಕಳೆದ ತಿಂಗಳು ಆರೋಪಿಸಿತ್ತು.

ಸಚಿವ ಸಂಪುಟದ ಸಂಭಾವ್ಯ ಪಟ್ಟಿಯಲ್ಲಿ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಅವರ ಹೆಸರು ಇತ್ತಾದರೂ, ಅಂತಿಮ ಹಂತದಲ್ಲಿ ಅವರ ಹೆಸರು ಕೈಬಿಡಲಾಗಿದೆ. ಇದೀಗ ಹೊಸ ಸಂಪುಟದಲ್ಲಿ ಒಬ್ಬ ಮಹಿಳೆಗೆ ಮಾತ್ರ ಅವಕಾಶ ನೀಡಲಾಗಿದೆ. ಅದೂ ಕೂಡಾ ಅವರ ಮೇಲೆ ಭ್ರಷ್ಟಾಚಾರ ಆರೋಪ ಇದ್ದರೂ, ರಾಜ್ಯ ಸರ್ಕಾರ ಅವರಿಗೆ ಸಚಿವ ಸ್ಥಾನ ನೀಡುವ ಧೈರ್ಯ ಮಾಡಿದೆ.

ಇದನ್ನೂ ಓದಿ: ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ಮಾಡಿದ್ದ ಕುಟುಕು ಕಾರ್ಯಾಚರಣೆಯ ವಿಡಿಯೊದಲ್ಲಿ, “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ದಾಖಲಾಗಿತ್ತು.

ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿತ್ತು. ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿತ್ತು.

ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಸಾರ್ವಜನಿಕರು ಅಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಭ್ರಷ್ಟಾಚಾರವನ್ನ ಖಂಡಿಸಿ, ಬೆಂಗಳೂರಿನ ಜೆ.ಸಿ ನಗರ ರಸ್ತೆಯಲ್ಲಿರುವ ಶಶಿಕಲಾ ಜೊಲ್ಲೆಯವರ ನಿವಾಸದ ಮುಂದೆ ಜಮಾಯಿಸಿದ್ದ ಕಾಂಗ್ರೆಸ್‌‌ ಕಾರ್ಯಕರ್ತರು, ನಿವಾಸಕ್ಕೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...