Homeಮುಖಪುಟ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

‘ವಿದ್ಯುತ್‌ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್‌ ಅಳವಡಿಸುವತ್ತ ಸರ್ಕಾರ

- Advertisement -
- Advertisement -

ರೈತರ ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿದಂತೆ ಹಲವು ವಿವಾದಿತ ನಿಯಮವನ್ನು ಒಳಗೊಂಡ ‘ವಿದ್ಯುತ್‌ ತಿದ್ದುಪಡಿ ಮಸೂದೆ-2021’ ಯನ್ನು ಮಂಡಿಸಲು ಒಕ್ಕೂಟ ಸರ್ಕಾರ ತಯಾರಾಗಿದೆ. ಆದರೆ ಇದರ ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ.

ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್‌ ಮಸೂದೆ-2021 ಪ್ರಕಾರ, ಕೃಷಿ ಪಂಪ್‌ಸೆಟ್‌ಗಳಿಗೂ ವಿದ್ಯುತ್‌ ಮೀಟರ್‌ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್‌ಪಿ ಪಂಪ್‌ಸೆಟ್‌ವರೆಗೆ ಉಚಿತ ವಿದ್ಯುತ್‌ ಪಡೆಯುತ್ತಿದ್ದ ರೈತರೂ ಸೇರಿದಂತೆ ಎಲ್ಲರೂ ವಿದ್ಯುತ್‌ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಯ ನಂತರ ಸರ್ಕಾರದಿಂದ ಸಬ್ಸಿಡಿ ಪಡೆಯಬಹುದು.

ಇದನ್ನೂ ಓದಿ: ರೈತ ಹೋರಾಟ: ಯುವಕರನ್ನು ಸೆಳೆಯುತ್ತಿರುವ ಮಿನಿ ಕಿಸಾನ್ ಸಂಸತ್‌ಗಳು

ಮಸೂದೆಯ ಕರಡು ನಿಯಮಗಳಲ್ಲಿರುವ ಈ ಪ್ರಸ್ತಾಪವು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಸೂದೆ ಜಾರಿಯಾದರೆ ವಿದ್ಯುತ್‌ ಸರಬರಾಜು ನಿಗಮಗಳು ಖಾಸಗಿ ಕಂಪನಿಗಳ ಕೈ ಸೇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಖಾಸಗಿ ಕಂಪನಿಗಳು ರೈತರ ಶೋಷಣೆ ಮಾಡಲಿವೆ. ಇದರಿಂದ ಕೃಷಿ ಚಟುವಟಿಕೆಗಳನ್ನೇ ಮಾಡಲಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿದ್ಯುತ್‌ ಪೂರೈಕೆ ಖಾಸಗೀಕರಣಕ್ಕೆ ಅಂಕಿತ ದೊರೆತರೆ ಬಡ ರೈತರು, ಕೂಲಿ ಕಾರ್ಮಿಕರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್‌ಸೆಟ್‌, ಬೀದಿ ದೀಪ, ನೀರು ಸರಬರಾಜಿಗೆ ನೇರವಾಗಿ ನೀಡುತ್ತಿರುವ ಉಚಿತ ವಿದ್ಯುತ್‌ ಬಂದ್‌ ಆಗಲಿದೆ. ಗ್ರಾಹಕರು ಮೊದಲು ವಿದ್ಯುತ್‌ ಶುಲ್ಕ ಪಾವತಿಸಿ ಬಳಿಕ ಸರ್ಕಾರ ಸಬ್ಸಿಡಿ ಕಾರ್ಯಕ್ರಮದಡಿ ಪರಿಹಾರ ನೀಡಿದರೆ ಪಡೆಯಬೇಕಾಗುತ್ತದೆ. ಪ್ರಿಪೇಯ್ಡ್‌ ಮೀಟರ್‌ ಅಳವಡಿಕೆ ಮಾಡಿದರಂತೂ ಕೃಷಿಕರೂ ಸಹ ಮೊದಲು ಹಣ ಪಾವತಿಸಿ ಬಳಿಕ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವಂತಹ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

ಹೋರಾಟಕ್ಕೆ ರೈತ ಸಂಘಗಳ ನಿರ್ಧಾರ

ಹೊಸ ಮಸೂದೆಯ ನಿಯಮಗಳಿಂದಾಗಿ ಮಸೂದೆಯು ಕೃಷಿಕರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿವೆ. ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಆಗಸ್ಟ್‌ 10 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಜತೆ ಈಗಾಗಲೇ ಮಾತುಕತೆ ನಡೆಸಿದೆ. ಖಾಸಗೀಕರಣ ಪ್ರಸ್ತಾವನೆಯಿಂದ ಕೇಂದ್ರವು ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, “ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಮೀಟರ್‌ ಅಳವಡಿಕೆ ಮಾಡಿ ಖಾಸಗಿಯವರಿಗೆ ಹಸ್ತಾಂತರಿಸಲು ಯತ್ನಿಸಿದ್ದರು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರ ಸರ್ಕಾರವು 2019 ರಿಂದಲೂ ವಿದ್ಯುತ್‌ ಪೂರೈಕೆಯನ್ನು ಖಾಸಗಿಯವರಿಗೆ ವಹಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಒಂದೂವರೆ ವರ್ಷಗಳ ಕಾಲ ರೈತರಿಗೆ ಸಂಬಂಧಿಸಿದ ಯಾವುದೇ ಕಾಯಿದೆ ತಿದ್ದುಪಡಿ ತರದಂತೆ ತಡೆಯಾಜ್ಞೆ ನೀಡಿದೆ.

ಇದೀಗ ಕೇಂದ್ರವು ನ್ಯಾಯಾಲಯದ ಗಡುವು ಮುಗಿದ ತಕ್ಷಣವೇ ರೈತರ ಮೇಲೆ ಗದಾಪ್ರಹಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು 2020ರ ವಿದ್ಯುತ್‌ ಕಾಯಿದೆಯನ್ನು ಅನುಷ್ಠಾನಗೊಳಿಸಲು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ. ಈ ಕುರಿತು ವಿದ್ಯುತ್‌ ಪ್ರಸರಣ ನಿಗಮಗಳ ಸಂಘಗಳೂ ನಮ್ಮನ್ನು ಸಂಪರ್ಕಿಸಿವೆ. ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಅಧಿಕಾರಿಗಳ ಅಸೋಸಿಯೇಷನ್‌ಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್‌. ರಾಮಕೃಷ್ಣಯ್ಯ ಪ್ರತಿಕ್ರಿಯಿಸಿ, ತಿದ್ದುಪಡಿಯಲ್ಲಿ ವಿದ್ಯುತ್‌ ಪೂರೈಕೆ, ಉಪ ಗುತ್ತಿಗೆ ಹಾಗೂ ಫ್ರಾಂಚೈಸಿಗೆ ಅವಕಾಶವಿದೆ. ಈ ಮೂಲಕ ವಿದ್ಯುತ್‌ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವುದೇ ತಿದ್ದುಪಡಿ ಉದ್ದೇಶ. ಇನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೊದಲು ಕೃಷಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುವ ವ್ಯವಸ್ಥೆಗೆ ಬದಲಾಗಿ ರೈತರಿಗೆ ನೇರವಾಗಿ ಸಹಾಯಧನ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಇದರ ಬಳಿಕ 50 ಕೆ.ಜಿ. ಯೂರಿಯಾ ಬೆಲೆ 75 ರಿಂದ 600 ರು., ಡಿಎಪಿ 175 ರಿಂದ 2 ಸಾವಿರ ರು.ಗಳಿಗೆ ಏರಿಕೆಯಾಗಿದೆ. ಇದೀಗ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಯಾದರೆ ಕೃಷಿ ಕ್ಷೇತ್ರವೇ ಅಪಾಯಕ್ಕೆ ಸಿಲುಕಲಿದೆ ಎಂದು ಹೇಳಿದರು.

ಎಸ್‌.ಎಂ. ಕೃಷ್ಣ ಅವಧಿಯಲ್ಲೂ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆಗೆ ಸರ್ಕಾರ ಮುಂದಾಗಿತ್ತು. ಆಗ ರಾಜ್ಯಾದ್ಯಂತ ಹೋರಾಟ ಸಂಘಟಿಸಿ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದೆವು. ಇದೀಗ ಕೇಂದ್ರವು 2021ರ ವಿದ್ಯುತ್‌ ತಿದ್ದುಪಡಿ ಕಾಯಿದೆ ಮಂಡಿಸಲು ಸಿದ್ಧವಾಗಿದೆ. ಈ ಬಗ್ಗೆ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದರು.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...