Homeಕರ್ನಾಟಕ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ - ಹಿರಿಯೂರು ಬಿಜೆಪಿ ಶಾಸಕಿ

‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಜ್ಯದ ಮಂತ್ರಿ ಮಂಡಲ ಕೊನೆಗೂ ರಚನೆಯಾಗಿದೆ. ಇದರ ಮಧ್ಯೆ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಅವರು ಬಹಿರಂಗವಾಗಿ ಪಕ್ಷದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿಯು ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿದೆ. ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು. ಪಕ್ಷ ಚಿತ್ರದುರ್ಗ ಜಿಲ್ಲೆಗೂ ಅವಮಾನ ಮಾಡಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯ 80% ದಷ್ಟು ಭಾಗ ಬಿಜೆಪಿಗೆ ಮತ ನೀಡಿದ್ದು ಪಕ್ಷ ಮರೆಯಬಾರದು ಇತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟು 29 ಶಾಸಕರು ರಾಜಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸಂಪುಟದಲ್ಲಿ ರಾಜ್ಯದ ಒಟ್ಟು 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ನಡುವೆ ಹಲವು ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪಟ್ಟಿಯಲ್ಲಿ ಹೆಸರಿಲ್ಲದ ಕೆಲ ಶಾಸಕರು ಬಂಡಾಯವೆದ್ದಿದ್ದಾರೆ. ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಕಣ್ಣೀರು ಹರಿಸಿದ್ದಾರೆ.

ಇದನ್ನೂ ಓದಿ: 12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

ಕೆ. ಪೂರ್ಣಿಮಾ ಅವರು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರಿಗೆ ಸಚಿವ ಸ್ಥಾನ ನೀಡಿರುವುದಕ್ಕೂ ಕಿಡಿ ಕಾರಿದ್ದಾರೆ. ಜೊಲ್ಲೆ ಅವರು ಪ್ರಸ್ತುತ ಸಂಪುಟದಲ್ಲಿರುವ ಏಕೈಕ ಮಹಿಳಾ ಮಂತ್ರಿಯಾಗಿದ್ದಾರೆ, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.

ತನ್ನ ಫೇಸ್‌ಬುಕ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪೂರ್ಣಿಮಾ, “ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಗಲೂ ನಾನು ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೆ. ಎಂಎಲ್ಸಿ ಚುನಾವಣೆಯಲ್ಲಿ ಕೂಡಾ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ” ಎಂದು ಹೇಳಿದ್ದಾರೆ.

“ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ ತಂದಿದ್ದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯವಾಗಿದ್ದವು, ಪಕ್ಷವು ಅದನ್ನೆಲ್ಲ ಮರೆತಿದೆ” ಎಂದು ತಿಳಿಸಿದ್ದಾರೆ.

“ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

“ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ. ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ. ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ, ಒಂದೇ ಮನೆಯಲ್ಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ” ಎಂದು ಶಶಿಕಲಾ ಜೊಲ್ಲೆ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್‌‌, ಚಂದ್ರಪ್ಪರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯದ 80 ರಷ್ಟು ಭಾಗವು ಬಿಜೆಪಿಗೆ ಮತ ನೀಡಿದೆ, ಇದನ್ನು ಪಕ್ಷ ಮರೆಯಬಾರದು ಇತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...