Homeಕರ್ನಾಟಕ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ - ಹಿರಿಯೂರು ಬಿಜೆಪಿ ಶಾಸಕಿ

‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಜ್ಯದ ಮಂತ್ರಿ ಮಂಡಲ ಕೊನೆಗೂ ರಚನೆಯಾಗಿದೆ. ಇದರ ಮಧ್ಯೆ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಅವರು ಬಹಿರಂಗವಾಗಿ ಪಕ್ಷದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿಯು ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿದೆ. ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು. ಪಕ್ಷ ಚಿತ್ರದುರ್ಗ ಜಿಲ್ಲೆಗೂ ಅವಮಾನ ಮಾಡಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯ 80% ದಷ್ಟು ಭಾಗ ಬಿಜೆಪಿಗೆ ಮತ ನೀಡಿದ್ದು ಪಕ್ಷ ಮರೆಯಬಾರದು ಇತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟು 29 ಶಾಸಕರು ರಾಜಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸಂಪುಟದಲ್ಲಿ ರಾಜ್ಯದ ಒಟ್ಟು 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ನಡುವೆ ಹಲವು ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪಟ್ಟಿಯಲ್ಲಿ ಹೆಸರಿಲ್ಲದ ಕೆಲ ಶಾಸಕರು ಬಂಡಾಯವೆದ್ದಿದ್ದಾರೆ. ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಕಣ್ಣೀರು ಹರಿಸಿದ್ದಾರೆ.

ಇದನ್ನೂ ಓದಿ: 12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

ಕೆ. ಪೂರ್ಣಿಮಾ ಅವರು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರಿಗೆ ಸಚಿವ ಸ್ಥಾನ ನೀಡಿರುವುದಕ್ಕೂ ಕಿಡಿ ಕಾರಿದ್ದಾರೆ. ಜೊಲ್ಲೆ ಅವರು ಪ್ರಸ್ತುತ ಸಂಪುಟದಲ್ಲಿರುವ ಏಕೈಕ ಮಹಿಳಾ ಮಂತ್ರಿಯಾಗಿದ್ದಾರೆ, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.

ತನ್ನ ಫೇಸ್‌ಬುಕ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪೂರ್ಣಿಮಾ, “ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಗಲೂ ನಾನು ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೆ. ಎಂಎಲ್ಸಿ ಚುನಾವಣೆಯಲ್ಲಿ ಕೂಡಾ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ” ಎಂದು ಹೇಳಿದ್ದಾರೆ.

“ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ ತಂದಿದ್ದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯವಾಗಿದ್ದವು, ಪಕ್ಷವು ಅದನ್ನೆಲ್ಲ ಮರೆತಿದೆ” ಎಂದು ತಿಳಿಸಿದ್ದಾರೆ.

“ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

“ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ. ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ. ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ, ಒಂದೇ ಮನೆಯಲ್ಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ” ಎಂದು ಶಶಿಕಲಾ ಜೊಲ್ಲೆ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್‌‌, ಚಂದ್ರಪ್ಪರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯದ 80 ರಷ್ಟು ಭಾಗವು ಬಿಜೆಪಿಗೆ ಮತ ನೀಡಿದೆ, ಇದನ್ನು ಪಕ್ಷ ಮರೆಯಬಾರದು ಇತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...