Homeಕ್ರೀಡೆಒಲಂಪಿಕ್41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತವು ಬೆಲ್ಜಿಯಂ ವಿರುದ್ದ 2-5 ಅಂತರದಲ್ಲಿ ಸೋಲುಂಡು ಚಿನ್ನದ ಕನಸನ್ನು ಕೈಬಿಟ್ಟಿತ್ತು. 1980 ರಲ್ಲಿ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಇದನ್ನೂ ಓದಿ: ಜಾವಲಿನ್ ಥ್ರೋ: 86.65 ಮೀ ದೂರ ಎಸೆದು ಮೊದಲಿಗರಾಗಿ ಫೈನಲ್ ತಲುಪಿದ ಭಾರತದ ನೀರಜ್!

ಸಿಮ್ರಂಜಿತ್ ಸಿಂಗ್ ಎರಡು ಗೋಲ್‌ ಮತ್ತು ಹಾರ್ದಿಕ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ ಒಂದೊಂದು ಗೋಲ್‌ ದಾಖಲಿಸಿದರು. ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಜರ್ಮನಿಯ ತೈಮೂರ್ ಒರುಜ್ ಗೋಲು ಗಳಿಸುವುದರೊಂದಿಗೆ ಜರ್ಮನಿ ತಂಡವು ಆರಂಭಿಕ ಮುನ್ನಡೆ ಸಾಧಿಸಿತ್ತು.

ಸಿಮ್ರಂಜಿತ್ ಸಿಂಗ್ ಆಟದ 17 ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತದ ಅಂಕವನ್ನು 1-1 ಕ್ಕೆ ಏರಿಸಿದರು. ಆದಾಗ್ಯೂ ಎರಡನೆ ಕ್ವಾರ್ಟರ್‌ನಲ್ಲಿ ಜರ್ಮನಿ ಮತ್ತೆ ಎರಡು ಗೋಲುಗಳನ್ನು ಗಳಿಸಿ 3-1 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್‌‌ನಲ್ಲಿ ಹಾರ್ದಿಕ್ ಸಿಂಗ್‌ ಮತ್ತು ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಭಾರತಕ್ಕೆ ತಲಾ ಒಂದೊಂದು ಗೋಲ್‌ ನೀಡುವುದರೊಂದಿಗೆ ತಂಡವನ್ನು 3-3 ಕ್ಕೆ ತಂದು ಸಮಬಲ ಗೊಳಿಸಿದರು.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ

ಮೂರನೆಯ ಕ್ವಾರ್ಟರ್‌‌ನಲ್ಲಿ ರುಪಿಂದರ್ ಪಾಲ್ ಸಿಂಗ್ ತನ್ನ ಪೆನಾಲ್ಟಿ ಸ್ಟ್ರೋಕ್ ನಲ್ಲಿ ಭಾರತಕ್ಕೆ 4-3 ಮುನ್ನಡೆಯ ಗೋಲ್ ದಾಖಲಿಸಿದರು ನೀಡಿದರು. ನಂತರ ಸಿಮ್ರಂಜಿತ್ ಸಿಂಗ್ ಪಂದ್ಯದ ಎರಡನೇ ಗೋಲು ಗಳಿಸಿ ಭಾರತಕ್ಕೆ 5-3 ಮುನ್ನಡೆ ತಂದುಕೊಟ್ಟರು.

ಜರ್ಮನಿ ಅಂತಿಮ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಒಂದು ಗೋಲ್ ಪಡೆಯಲು ಯಶಸ್ವಿಯಾಯಿತು. ಆದಾಗ್ಯೂ, ಭಾರತೀಯ ಆಟಗಾರರು ಸಮರ್ಥವಾಗಿ ಜರ್ಮನಿಯನ್ನು ಎದುರಿಸಿ ಒಂದು ಅಂಕಗಳ ಮುನ್ನಡೆಯನ್ನು ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾದರು.

ಆಟ ಮುಗಿಯಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿಗೆ ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾದರೂ, ಗೋಲಿ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಶ್ರೀಜೇಶ್‌‌ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಗೆಲುವಿಗೆ ನೆರವಾಗಿ ಭಾರತದ 41 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದರು.

ಮತ್ತೊಂದು ಕಡೆ ಭಾರತದ ಮಹಿಳಾ ಹಾಕಿ ತಂಡವು ಬುಧವಾರ ನಡೆದಿದ್ದ ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಅಂತರದಲ್ಲಿ ಸೋಲುಂಡಿತ್ತು. ಮಹಿಳಾ ತಂಡವು ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ.

ಇದನ್ನೂ ಓದಿ: ಒಲಂಪಿಕ್ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆ: ಮೂರು ಪದಕ ಜಮೈಕಾ ಪಾಲಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...