Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...