Homeಕರ್ನಾಟಕಈ ಅಸಹಾಯಕತೆ ಸಿಎಂ ಬೊಮ್ಮಾಯಿಯವರದ್ದಾ? ಕರ್ನಾಟಕದ ಜನರದ್ದಾ?

ಈ ಅಸಹಾಯಕತೆ ಸಿಎಂ ಬೊಮ್ಮಾಯಿಯವರದ್ದಾ? ಕರ್ನಾಟಕದ ಜನರದ್ದಾ?

- Advertisement -
- Advertisement -

(ಈ ಲೇಖನ ನ್ಯಾಯಪಥ ಪತ್ರಿಕೆಯಲ್ಲಿ ಮುದ್ರಣಕ್ಕೆ ಹೋಗುವ ಸಮಯಕ್ಕೆ ಸಚಿವಸಂಪುಟದ ಹೆಸರುಗಳು ಘೋಷಣೆಯಾಗಿರಲಿಲ್ಲ. ಈಗ ಹೆಸರುಗಳು ಘೋಷಣೆಯಾಗಿ, ಪ್ರಮಾಣ ವಚನ ಸ್ವೀಕರಿಸಿ ಎರಡು ದಿನ ಕಳೆದಿದ್ದರೂ ಖಾತೆಗಳು ಹಂಚಿಕೆಯಾಗಿಲ್ಲ. ಒಟ್ಟಿನಲ್ಲಿ ಅನಿಶ್ಚಿತತೆ ಮಾತ್ರ ನಿರಂತರವಾಗಿ ಮುಂದುವರೆದಿದೆ.)

’ನಾನು ಯಾರ ರಬ್ಬರ್ ಸ್ಟಾಂಪೂ ಅಲ್ಲ’ ಎಂದು ಘೋಷಿಸಿದ ಮೂರನೆಯ ದಿನ ಕರ್ನಾಟಕದ ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ’ಒಬ್ಬನೇ ಕೆಲಸ ಮಾಡೋದು ಕಷ್ಟ ಆಗುತ್ತಿದೆ. ಆದಷ್ಟು ಬೇಗ ಸಚಿವ ಸಂಪುಟ ಆಗಬೇಕು’ ಎಂಬಂತಹ ಹೇಳಿಕೆಯನ್ನೂ ಕೊಟ್ಟರು. ಸಚಿವ ಸಂಪುಟ ರಚನೆ ಮಾಡಿಕೊಳ್ಳುವುದು ಮುಖ್ಯಮಂತ್ರಿಯ ಪರಮಾಧಿಕಾರ ಎಂದು ಹೇಳಲಾಗುತ್ತದೆ. ಆದರೆ ಬಿಜೆಪಿಯೇ ಇರಲಿ, ಕಾಂಗ್ರೆಸ್ಸೇ ಇರಲಿ ಮುಖ್ಯಮಂತ್ರಿಗಳು ಅಂತಹ ಪರಮಾಧಿಕಾರವನ್ನು ಹೊಂದಿಲ್ಲವೆಂಬುದು ಸ್ಪಷ್ಟ. ಎರಡೂ ಕಡೆ ಹೈಕಮಾಂಡ್ ಎಂಬ ದೆಹಲಿ ವರಿಷ್ಠರು ಬೆಂಗಳೂರಿನಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಬೇಕಾದವರು ಯಾರ್‍ಯಾರು ಎಂಬುದನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಬಿಜೆಪಿಯ ಮಟ್ಟಿಗೆ ಅಂತಹವರ ಪಟ್ಟಿಯನ್ನು ನಿರ್ಧರಿಸುವ ವಿಚಾರದಲ್ಲಿ ಜಾತಿಶ್ರೀಗಳ (ಜಾತಿ ಉಪಜಾತಿಗಳ ಮಠಗಳ ಮುಖ್ಯಸ್ಥರು) ಬ್ಲ್ಯಾಕ್‌ಮೇಲ್ ಸಹಾ ಮುಖ್ಯವಾಗುತ್ತದೆ.

ಮೇಲಿನ ಹೇಳಿಕೆಯ ಎರಡು ದಿನಗಳ ನಂತರ ಬಸವರಾಜ ಬೊಮ್ಮಾಯಿಯವರು ದೆಹಲಿಗೇ ಓಡಿದರು. ಅಲ್ಲಿ ಬಿಜೆಪಿಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಡನೆ ಮಾತುಕತೆಯ ನಂತರ, ಹೊರಗಡೆ ಕಾದುಕೊಂಡಿದ್ದ ಕರ್ನಾಟಕದ ಮಾಧ್ಯಮಗಳ ದೆಹಲಿ ಪತ್ರಕರ್ತರು ಅವರಿಗೆ ಅಕ್ಷರಶಃ ಮುತ್ತಿಗೆ ಹಾಕಿದರು. ಅವರಿಗೆಲ್ಲಾ ಹೊಸ ಮುಖ್ಯಮಂತ್ರಿಯಿಂದ ಒಂದೇ ಒಂದು ಬೈಟ್ ಪಡೆಯುವ ಕಾತುರ. ಆದರೆ, ಆ ಹೊಸ ಮುಖ್ಯಮಂತ್ರಿ ಅರ್ಧ ಪೋಸ್ಟ್‌ಮನ್ ಮತ್ತರ್ಧ ಬೇಡಿಕೊಳ್ಳಲು ಬಂದಿರುವ ಸಾಮಂತರಷ್ಟೇ ಆಗಿದ್ದರು. ಅಲ್ಲಿನ ಸಂಭಾಷಣೆಯು ವಿಡಿಯೋ ರೂಪದಲ್ಲಿ ಲಭ್ಯವಿದ್ದು, ಅದರ ಆಯ್ದ ಪಾಠ ಈ ರೀತಿ ಇದೆ.

’ಹೈಕಮಾಂಡ್ ಜೊತೆ ಚರ್ಚೆ ನಡೆದಿದ್ದು, ಅಂತಿಮವಾದ ಪಟ್ಟಿಯನ್ನು ಅವರೇ ಪ್ರಕಟ ಮಾಡ್ತಾರೆ’. ’ನಾವು ಎರಡು ಪಟ್ಟಿಗಳನ್ನು ಕೊಟ್ಟಿದ್ದೇವೆ, ಆದರೆ ಎಷ್ಟನ್ನು ಮಾಡಬೇಕು, ಎಷ್ಟನ್ನ ಬಿಡಬೇಕು ಅಂತ ಅವರು ತೀರ್ಮಾನ ಮಾಡ್ತಾರೆ’. ’ಡಿಸಿಎಂ ಸ್ಥಾನಗಳ ಕುರಿತು ತೀರ್ಮಾನ ಆಗಿದೆಯಾ?’, ’ಅದನ್ನೂ ಅವರೇ ಫೈನಲ್ ಮಾಡ್ತಾರೆ’. ’ಮೊದಲ ಬಾರಿಗೆ 25 ಜನ ಸಚಿವರು ಆಗಬಹುದಾ?’ ’ಅವರು (ಹೈಕಮಾಂಡ್) ಏನು (ತೀರ್ಮಾನ) ಮಾಡ್ತಾರೆ ಅಂತ ನನಗೂ ಗೊತ್ತಿಲ್ಲ. ಬಹುತೇಕ ಅವರು ಇನ್ನೊಂದು ಬಾರಿ ಚರ್ಚೆ ಮಾಡಿ ಫೈನಲ್ ಮಾಡ್ತಾರೆ; ಆಗ ನಂಬರ್ ಕೂಡಾ ಗೊತ್ತಾಗುತ್ತದೆ.’

ಮರುದಿನ ರಾತ್ರಿ ಮತ್ತೆ ಸಿಎಂ ಪತ್ರಕರ್ತರಿಗೆ ಸಿಕ್ಕರು. ಆದರೆ ಹಿಂದಿನ ದಿನದಷ್ಟು ಆತುರ ಪತ್ರಕರ್ತರಿಗೂ ಇರಲಿಲ್ಲ, ಬೊಮ್ಮಾಯಿಯವರಿಗೂ ಇರಲಿಲ್ಲ. ’ಹಿರಿಯರನ್ನು ತೆಗೆಯಬೇಕು ಅಂತ ವಾದ ಕೇಳಿಬಂದಿದೆಯಂತಲ್ಲಾ?’ ಪತ್ರಕರ್ತರ ಪ್ರಶ್ನೆಗೆ, ಏನೋ ಅರ್ಧಂಬರ್ಧ ಹೇಳಿದರು. ಅಷ್ಟರಲ್ಲಿ ಅವರಿಗೆ ಇನ್ನೊಂದು ಪ್ರಶ್ನೆ ತೂರಿ ಬಂದಿತು. ’ಎಷ್ಟು ಜನ ಇರುತ್ತಾರೆ?’, ’ನಾನು ಹೇಳೋಕಾಗಲ್ಲ’. ’ಒಂದೇ ಹಂತದ ವಿಸ್ತರಣೆಯಾ?’, ’2 ಹಂತ ಅಂತ ನಿರೀಕ್ಷೆ ಮಾಡ್ತೀನಿ’.

’ಹಳಬರನ್ನು ಎಷ್ಟು ಜನರನ್ನು ತೆಗೀತೀರಿ?’, ’ತೆಗೆಯೋದಾಗಲಿ, ಸೇರಿಸೋದಾಗಲಿ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾಳೆ ತಿಳಿಸ್ತೀನಿ’. ಬೊಮ್ಮಾಯಿಯವರ ಪರಿಸ್ಥಿತಿ ನೋಡಿ, ಒಬ್ಬ ಪತ್ರಕರ್ತರು ಹೀಗೂ ಹೇಳಿದರು. ’ಯೂ ಆರ್ ಲುಕಿಂಗ್ ಟೈರ್‍ಡ್’. ’ಹೇ ಹಾಗೇನಿಲ್ಲ ಚೆನ್ನಾಗಿಯೇ ಇದ್ದೀನಿ’ ಎಂದ ಸಿಎಂರ ದನಿಯಲ್ಲಿ ಸುಸ್ತಿತ್ತು. ಆದರೆ, ’ನಾಳೆ ಬೆಳಿಗ್ಗೆಯ ಹೊತ್ತಿಗೆ ಶುಭ ಸೂಚನೆ ಸಿಗಬಹುದು’ ಎಂದರು. ದೇವರ ಮುಂದೆ ಹೂವಿಗಾಗಿ ಕಾದು ಕೂತವರ ರೀತಿ ಧ್ವನಿಸುತ್ತಿದ್ದ ಆ ಮಾತುಗಳನ್ನು ಮುಂದುವರೆಸಿ, ’ನಡ್ಡಾಜಿಯವರು ನಿನ್ನೆಯೂ ಮಾಹಿತಿ ಪಡೆದುಕೊಂಡರು, ಕೆಲವು ಕ್ಲಾರಿಫಿಕೇಷನ್ ಕೇಳಿದರು. ಅವನ್ನು ಒದಗಿಸಿದ್ದೇವೆ…… ಅವರು ಅಂತಿಮವಾಗಿ ಹೇಳಿದ ನಂತರ ಪಟ್ಟಿಯನ್ನು ರಾಜಭವನಕ್ಕೆ ಕಳಿಸಿಕೊಡುತ್ತೇವೆ.’ ಎಂದರು. ಕೊನೆಗೆ ’ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡ್ತಾರೆ ಅನ್ನೋ ವಿಶ್ವಾಸವಿದೆ’ ಎಂದು ಮುಗಿಸಿದರು.

ಇಡೀ ಎಪಿಸೋಡು ಕರ್ನಾಟಕದ ಹೊಸ ಮುಖ್ಯಮಂತ್ರಿಯ ಪರಿಸ್ಥಿತಿಯನ್ನು ತೋರಿಸುತ್ತದೆ. ಅವರು ಏನೊಂದನ್ನೂ ತೀರ್ಮಾನಿಸುವ ಸ್ಥಿತಿಯಲ್ಲಿಲ್ಲ ಅಥವಾ ಒಂದು ಪ್ರಸ್ತಾಪವನ್ನು ಅವರ ಪಕ್ಷದ ವರಿಷ್ಠರ ಮುಂದಿಟ್ಟರೂ ಅದಕ್ಕೆ ತಾನು ಹೊಣೆ ಹೊರುವ ಶಕ್ತಿ ಹೊಂದಿಲ್ಲ. ಏಕೆಂದರೆ ನಂತರ ಯಡಿಯೂರಪ್ಪನವರಾಗಲೀ, ಪಕ್ಷದ ಇತರರಾಗಲೀ, ವಿವಿಧ ಬ್ಲ್ಯಾಕ್‌ಮೇಲ್ ಜಾತಿಮಠಶ್ರೀಗಳಾಗಲೀ ಕೇಳಿದರೆ ಅದ್ಯಾವುದನ್ನೂ ತೀರ್ಮಾನಿಸಿದ, ತೀರ್ಮಾನಿಸುವ ವ್ಯಕ್ತಿ ನಾನಲ್ಲ ಎಂದು ಬಿಂಬಿಸಿಕೊಳ್ಳುವುದೇ ಅವರಿಗೆ ಸುರಕ್ಷಿತವಾದುದು. ಇಂತಹ ಒಂದು ಕೆಟ್ಟ ಪರಿಸ್ಥಿತಿಗೆ ಕರ್ನಾಟಕ ರಾಜ್ಯ ಹಾಗೂ ಕರ್ನಾಟಕ ಸರ್ಕಾರ ಬಂತೇ ಎಂದು ಆತಂಕ ಪಡಬೇಕಿದೆ.

ವಿವಿಧ ಜಾತಿ ಸಮುದಾಯಗಳ ಲಾಬಿಗಳ ಒತ್ತಡ, ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡ ಹಾಗೂ ನಿರ್ಣಾಯಕ ಸ್ಥಾನದಲ್ಲಿರುವ ಹೈಕಮಾಂಡ್‌ನ ಒತ್ತಡ ಇವುಗಳ ನಡುವೆ ಒಬ್ಬ ಅಸಹಾಯಕ ಮುಖ್ಯಮಂತ್ರಿಯಾಗಷ್ಟೇ ಬಸವರಾಜ ಬೊಮ್ಮಾಯಿಯವರು ಪ್ರತಿಷ್ಠಾಪನೆಗೊಂಡಿದ್ದಾರೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಯಡಿಯೂರಪ್ಪನವರಿಗೂ ಸಂಪುಟ ರಚನೆ ಮಾಡಲು ಹೈಕಮಾಂಡ್ ಬಹಳ ಕಾಲ ಬಿಟ್ಟಿರಲಿಲ್ಲ. ಆದರೆ ಆ ವಿಚಾರದಲ್ಲಿ ಒಂದಷ್ಟು ತನ್ನ ಅಭಿಪ್ರಾಯಗಳನ್ನೂ ಮುಂದಿಟ್ಟು ಒಪ್ಪಿಸಿಕೊಳ್ಳುವ ಶಕ್ತಿ ಅವರಿಗಿತ್ತು. ಈಗ ಆ ಶಕ್ತಿಯೂ ಇಲ್ಲದ, ಬದಲಿಗೆ ಯಡಿಯೂರಪ್ಪನವರ ವಿರುದ್ಧವೂ ದಾಳವಾಗಿ ಪ್ರಯೋಗಿಸಲ್ಪಡಲೆಂದೇ ಪ್ರತಿಷ್ಠಾಪನೆಗೊಂಡಿರುವ ಹೊಸ ಸಿಎಂ ಇನ್ನು ಯಾವ ಬಗೆಯ ಆಡಳಿತವನ್ನು ಕರ್ನಾಟಕಕ್ಕೆ ನೀಡಿಯಾರು ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆದರೆ ಇದು ಸಿಎಂ ಒಬ್ಬರ ವ್ಯಕ್ತಿಗತ ಅಶಕ್ತತೆ ಮತ್ತು ಅಸಹಾಯಕತೆಯ ವಿಚಾರವಷ್ಟೇ ಆಗಿಲ್ಲ. ಕೋಟ್ಯಾಂತರ ಜನರ ಪ್ರತಿನಿಧಿಯಾಗಿ ಅವರಿರುವುದರಿಂದ, ಈ ರಾಜ್ಯದ ಅಸಹಾಯಕತೆ ವಿಚಾರವಾಗಿಯೂ ಇದನ್ನು ನೋಡಬೇಕಿದೆ. ಇಂತಹ ಸಂಗತಿಗಳಲ್ಲೇ ಬಳಲಿ ಬೆಂಡಾಗಿಬಿಡುವ ಇವರು ಇನ್ನು ಜಿಎಸ್‌ಟಿ ಪರಿಹಾರ, ನೆರೆ ಬರ ಪರಿಹಾರ, ವಿಶೇಷ ಪ್ಯಾಕೇಜ್, ಹಣಕಾಸು ಅನುದಾನ ಇತ್ಯಾದಿಗಳನ್ನು ತರುವ ಪ್ರಶ್ನೆ ದೂರವೇ ಉಳಿದೀತು.

ಬಹುತೇಕ ನಾಳೆ ಅಥವಾ ನಾಳಿದ್ದು ರೂಪುಗೊಳ್ಳಲಿರುವ (?) ಮೊದಲ ಹಂತದ ಸಚಿವ ಸಂಪುಟ ಹಾಗೂ ಖಾತೆ ಹಂಚಿಕೆಯು ಕರ್ನಾಟಕದ ಬಿಜೆಪಿಯಲ್ಲಿ ಈ ಸದ್ಯ ಇರುವ ಬಣಗಳು ಹಾಗೂ ಅವುಗಳ ಪ್ರಾಬಲ್ಯದ ಕುರಿತು ಒಂದು ಅಂದಾಜನ್ನು ನೀಡಲಿವೆ. ಆದರೆ, ಕರ್ನಾಟಕದ ಪ್ರಾಬಲ್ಯವಂತೂ ಕುಸಿದುಹೋಗಿದೆ ಎಂಬುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...