Homeಕರ್ನಾಟಕಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮೇಕೆದಾಟು ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ, ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಆನಂದ್‌ ಸರ್ಕಲ್‌ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಉಪವಾಸ ಸತ್ಯಾಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, “13 ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 100 ವಾರ್ಡ್‌ಗಳಿದ್ದವು. 2007ರಲ್ಲಿ 110 ಹಳ್ಳಿಗಳು ಸೇರಿ ವಾರ್ಡ್‌ಗಳ ಸಂಖ್ಯೆ 198 ತಲುಪಿತು. ಈಗ 45 ವಾರ್ಡ್‌ಗಳನ್ನು ಸೇರಿಸಿ 243 ವಾರ್ಡ್‌ ಮಾಡಲು ಸಿದ್ಧತೆ ನಡೆಯುತ್ತಿದೆ. 2007ರಲ್ಲಿ ಸೇರಿದ 110 ವಾರ್ಡ್‌ಗಳಿಗೇ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಅಲ್ಲಿನ ಪೈಪುಗಳಲ್ಲಿ ನೀರಿನ ಬದಲು ಕೇವಲ ಗಾಳಿ ಬರುತ್ತಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣವಾಗದೇ 243 ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಕೆ ಅಸಾಧ್ಯ” ಎಂದು ಹೇಳಿದ್ದಾರೆ.

’ಕುಡಿಯುವ ನೀರು ಕೂಡ ಇಲ್ಲದ ಬೆಂಹಳೂರು ನಗರವು ಎಂತಹ ಸ್ಮಾರ್ಟ್‌ ಸಿಟಿ ಆಗಬಹುದು? ಮೇಕೆದಾಟು ಯೋಜನೆಯು ಕರ್ನಾಟಕದ ಹಕ್ಕು. ಇದರ ಜಾರಿಗೆ ಯಾವುದೇ ರೀತಿಯ ಕಾನೂನು ಅಡ್ಡಿಯಿಲ್ಲ. ನ್ಯಾಯಮಂಡಳಿಯಿಂದ ತೊಂದರೆಯಿದೆ ಎಂದು ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕೆಂಬ ಕಾಲಮಿತಿ ಇಟ್ಟುಕೊಂಡು ಮೇಕೆದಾಟು ಯೋಜನೆಯ ಕಾಮಗಾರಿಗೆ ಕೂಡಲೇ ಗುದ್ದಲಿ ಪೂಜೆ ನೆರವೇರಿಸಬೇಕು’ ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.

ಎಎಪಿ ಮುಖಂಡ ಮೋಹನ್‌ ದಾಸರಿ, “ಈ ಡಬಲ್‌ ಎಂಜಿನ್‌ ಸರ್ಕಾರಕ್ಕೆ ರಾಜ್ಯದ ಪರವಾಗಿ ದನಿ ಎತ್ತುವ ತಾಕತ್ತಿಲ್ಲ. ಮೇಕೆದಾಟು ವಿಚಾರದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿನ ಪರವಾಗಿದೆ ಎಂದು ತಮಿಳುನಾಡಿನ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂರವರು ಮಾತನಾಡಿ, “ಕಳೆದ ಎಪ್ಪತ್ತು ವರ್ಷಗಳಿಂದಲೂ ಕೇಂದ್ರ ಸರ್ಕಾರವು ನೀರಾವರಿ ಯೋಜನೆಗಳಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಇದನ್ನು ವಿರೋಧಿಸಿ ರಾಜ್ಯಕ್ಕೆ ನ್ಯಾಯ ದೊರೆಕಿಸಿಕೊಡಲು ರಾಜ್ಯವನ್ನಾಳಿದ ಎಲ್ಲಾ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...