Homeಕ್ರೀಡೆಒಲಂಪಿಕ್‘ಪದಕದ ರುಚಿ ಉಪ್ಪುಪ್ಪಿದೆ’ - ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

‘ಪದಕದ ರುಚಿ ಉಪ್ಪುಪ್ಪಿದೆ’ – ಹಾಕಿ ಗೋಲ್‌‌ ಕೀಪರ್‌‌‌ ಶ್ರೀಜೇಶ್‌‌ ಹೀಗೇಕೆ ಹೇಳಿದರು?

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತ್ತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿದೆ. 1980 ರ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಮಹಿಳೆಯರ ಹಾಕಿಯಲ್ಲೂ ಭಾರತೀಯ ತಂಡ ಉತ್ತಮ ಪ್ರದರ್ಶನ ನೀಡಿದೆ. ಒಲಿಂಪಿಕ್ ಇತಿಹಾಸದಲ್ಲೇ ಭಾರತದ ಮಹಿಳಾ ತಂಡ ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿದೆ. ಆದರೆ ಪದಕ ಗೆಲ್ಲಲು ವಿಫಲವಾಗಿ ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಕೊಂಡಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಭಾರತದ ಮಹಿಳೆ ಮತ್ತು ಪುರುಷರ ಹಾಕಿ ತಂಡಗಳು ಈ ಬಾರಿ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕೆ, ಹಾಕಿಯಲ್ಲಿ ಭಾರತವು ಮತ್ತೆ ಪುಟಿದೆದ್ದು ಬಂದಿದ್ದಕ್ಕೆ ಭಾರಿ ಹರ್ಷ ವ್ಯಕ್ತವಾಗುತ್ತಿದೆ. ಅದರಲ್ಲೂ ವನಿತಾ ತಂಡಕ್ಕೆ ಭಾರತದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಸುರಿಮಳೆ ಸುರಿದಿದೆ.

ಈ ಮಧ್ಯೆ ಭಾರತದ ಪುರುಷರ ತಂಡದ ಗೋಲ್‌ ಕೀಪರ್‌ ಶ್ರೀಜೇಶ್‌ ಪಿಆ‌ರ್‌ ಅವರು ಟ್ವಿಟರ್‌ನಲ್ಲಿ ಒಂದು ಚಿತ್ರವನ್ನು ಫೋಸ್ಟ್‌ ಮಾಡಿದ್ದು, ಈ ಪದಕ ಉಪ್ಪುಪ್ಪಾಗಿದೆ, ಯಾಕೆಂದರೆ ಇದು ನನ್ನ 21 ವರ್ಷಗಳ ಬೆವರಿನ ಫಲ ಎಂದು ಅವರು ಹೇಳಿದ್ದಾರೆ, ಈ ಮೂಲಕ ಅವರು ನೆಟ್ಟಿಗರ ಮನಗೆದ್ದಿದ್ದಾರೆ.

ಅವರು ತನ್ನ ಟ್ವೀಟ್‌‌ನಲ್ಲಿ ಒಲಿಂಪಿಕ್‌ ಪದಕವನ್ನು ಕಚ್ಚುತ್ತಿರುವ ಚಿತ್ರವನ್ನು ಪೋಸ್ಟ್‌ ಮಾಡಿದ್ದು, “ಹೌದು, ಇದು ಉಪ್ಪಿನ ರುಚಿಯಿದೆ. ಹೌದು… ನನಗೆ ನೆನಪಿದೆ, ಇದು ಕಳೆದ 21 ವರ್ಷಗಳ ನನ್ನ ಬೆವರು” ಎಂದು ಬರೆದಿದ್ದಾರೆ.

ಕಂಚಿನ ಪದಕಕ್ಕಾಗಿ ಆಡಿದ ಪಂದ್ಯದಲ್ಲಿ, ಪಂದ್ಯವು ಮುಗಿಯಲು ಆರು ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿ ತಂಡವು ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದ್ದರು.

ಕೇರಳ ಮೂಲದವರಾದ ಶ್ರೀಜೇಶ್‌‌ ಈ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಭಾರತದ ಗೆಲುವಿಗೆ ನೆರವಾಗಿದ್ದಾರೆ.

ಇದನ್ನೂ ಓದಿ: 41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

ಗೋಲ್‌ ಪೋಸ್ಟೇ ನನ್ನ ದೇಗುಲ ಎಂದಿದ್ದ ಶ್ರೀಜೇಶ್‌, ಪದಕವನ್ನು ತನ್ನ ತಂದೆಗೆ ಅರ್ಪಿಸಿದ್ದಾರೆ. ಟ್ವಿಟರ್‌ನಲ್ಲಿ ಅವರ ತಂದೆ ತಂಡದ ಗೆಲುವನ್ನು ಸಂಭ್ರಮಿಸುತ್ತಿರುವ ವಿಡಿಯೊವನ್ನು ಅಪ್‌ಲೋಡ್ ಮಾಡಿರುವ ಶ್ರೀಜೇಶ್‌‌, “ಈ ಪದಕ ನನ್ನ ತಂದೆಗೆ. ನಾನೀಗ ಇಲ್ಲಿ ಇರಲು ಅವರೇ ಕಾರಣ, ಅವರು ನನ್ನ ಹೀರೋ” ಎಂದು ಬರೆದಿದ್ದಾರೆ

ಇದನ್ನೂ ಓದಿ: ಹಾಕಿ ಮಹಿಳಾ ತಂಡದ 9 ಆಟಗಾರರಿಗೆ ತಲಾ 50 ಲಕ್ಷ ನೀಡುವುದಾಗಿ ಹರಿಯಾಣ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...