Homeಕರ್ನಾಟಕಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

- Advertisement -
- Advertisement -

ಕೇಂದ್ರ ಸರಕಾರ ದೇಶದ ಬಂದರುಗಳನ್ನು ಆಧುನೀಕರಿಸುವುದು, ಬಂದರುಗಳ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮತ್ತು ಬಂದರುಗಳ ಸಂಪರ್ಕಿಸುವ ಕೈಗಾರಿಕಾ ಪ್ರದೇಶಗಳ ಗುಚ್ಛವನ್ನು ರಚಿಸಲು ಸಾಗರ ಮಾಲಾ ಎಂಬ ಯೋಜನೆ ಕೈಗೆತ್ತಿಕೊಂಡಿದೆ. ಈ ಯೋಜನೆಯಲ್ಲಿ 189 ಬಂದರುಗಳ ಆಧುನೀಕರಣ, 170 ಬಂದರುಗಳ ಸಂಪರ್ಕ ಹೆಚ್ಛಿಸುವುದು ಮತ್ತು ಹೊಸ ಬಂದರುಗಳ ಸ್ಥಾಪನೆಯಂಥ 415 ಪ್ರಾಜೆಕ್ಟ್‌ಗಳು ಸೇರಿವೆ. ಒಟ್ಟು 7.985 ಲಕ್ಷ ಕೋಟಿ ಮೊತ್ತದ ಸದ್ರಿ ಯೋಜನೆಯಿಂದ ಕರ್ನಾಟಕ ಕರಾವಳಿಯ ಬೆಸ್ತರು ನಲೆ ತಪ್ಪುವ ಭೀತಿಯಿಂದ ಕಂಗಾಲಾಗಿ ಹೋಗಿದ್ದಾರೆ!

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತಡಿಯ ಮೀನುಗಾರರು ಸಾಗರ ಮಾಲಾ ಯೋಜನೆಗಳು ತಮ್ಮ ತುತ್ತಿಗಾಧಾರವಾದ ದುಡಿಮೆಗೆ ಸಂಚಕಾರ ತರುತ್ತದೆಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. 274 ಕೋಟಿ ರೂ.ವೆಚ್ಚದಲ್ಲಿ ಬೈತಖೋಲ್ ಬಂದರಿನ 250 ಮೀಟರ್ ಜಟ್ಟಿ ಮತ್ತು 880 ಮೀಟರ್ ಅಲೆ ತಡೆ ಗೋಡೆ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಮೀನುಗಾರರು ಬೃಹತ್ ರ್‍ಯಾಲಿ, ಪ್ರತಿಭಟನೆ ನಡೆಸಿದ್ದರು. ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮೀನುಗಾರರ ಸಂಘಟನೆ ಸಲ್ಲಿಸಿತ್ತು. 2020ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಈಚೆಗೆ ಹೈಕೋರ್ಟ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೈತಖೋಲ್ ವಾಣಿಜ್ಯ ಬಂದರಿನ ಎರಡನೆ ಹಂತದ ಕಾಮಗಾರಿಗೆ ನೀಡಿರುವ ಅನುಮತಿ ಕಾನೂನುಬಾಹಿರವೆಂದು ಪರಿಗಣಿಸಿದೆ! ಕಾಯಿದೆಗಳನ್ನು ಕಡೆಗಣಿಸಿ ಪರವಾನಿಗೆ ಕೊಡಲಾಗಿದೆ; ಯೋಜನೆಯಿಂದ ಆಗಬಹುದಾದ ವಾಯು ಮತ್ತು ಜಲ ಮಾಲಿನ್ಯದ ವ್ಯಾಪ್ತಿ ಮತ್ತು ಯಾವ ರೀತಿ ಎದುರಾಗಬಹುದೆಂಬುದನ್ನು ಪರಿಸರ ಅಧಿಕಾರಿ ವಿಚಾರಣೆ ನಡೆಸಿಲ್ಲವೆಂದು ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ಹೊನ್ನಾವರದ ಕಾಸರಕೋಡು ಟೊಂಕದಲ್ಲಿ ನಿರ್ಮಾಣವಾಗುವ ಖಾಸಗಿ ಬಂದರು ಕಾಮಗಾರಿಗೂ ಮೀನುಗಾರ ಸಂಘಟನೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ. ಆದರೂ ಪೊಲೀಸ್ ಬಲದಲ್ಲಿ ಕಾಮಗಾರಿಗೆ ಪ್ರಯತ್ನ ನಡೆದಾಗ ಮೀನುಗಾರರು ಸಾಮೂಹಿಕವಾಗಿ ಸಮುದ್ರಕ್ಕ ಹಾರಿ ಆತ್ಮಹತ್ಯೆಗೆ ಹೋದಾಗ ಕಾಮಗಾರಿ ನಿಲ್ಲಿಸಲಾಗಿದೆ. ಈಗ ಮಂಗಳೂರು ನಗರ ಕಸ್ಬಾ ಬೆಂಗರೆಯ ಫಲ್ಗುಣಿ ನದಿ ದಂಡೆ ಆಕ್ರಮಿಸಿ ಕೋಸ್ಟಲ್ ಬರ್ತ್ ಯೋಜನೆ ಕಾರ್ಯಗತಗೊಳಿಸುವ ತರಾತುರಿ ನಡೆಯುತ್ತಿದ್ದು, ಇದರಿಂದ ತಮ್ಮ ಕಸಬು ಮತ್ತು ಬದುಕಿಗೆ ತೊಂದರೆಯಾಗುತ್ತದೆಂದು ಸಾಂಪ್ರದಾಯಿಕ ಮೀನುಗಾರರು ಪ್ರತಿಭಟನೆಗಿಳಿದಿದ್ದಾರೆ. ಸಾಗರ ಮಾಲಾ, ಕೋಸ್ಟಲ್ ಬರ್ತ್ ಯೋಜನೆ ಬಗ್ಗೆ ಸ್ಥಳೀಯರಿಗೆ ಯಾವುದೇ ಮಾಹಿತಿ ಕೊಡದೆ ಬಲವಂತದಿಂದ ಹೇರಲಾಗುತ್ತಿದೆಯೆಂದು ಫಲ್ಗಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳುತ್ತಾರೆ.

ಮೀನುಗಾರರೆ ಹೆಚ್ಚಿರುವ ಜನದಟ್ಟಣೆಯ ಕಸ್ಬಾ ಬೆಂಗರೆ ಗ್ರಾಮಸ್ಥರು ತಮ್ಮ ಬದುಕನ್ನು ಧ್ವಂಸ ಮಾಡುವ ಸದ್ರಿ ಯೋಜನೆ ಬೇಡವೆಂದು ಒಕ್ಕೊರಲಿಂದ ವಿರೋಧಿಸುತ್ತಿದ್ದಾರೆ. ಗ್ರಾಮಸ್ಥರ ಭಾವನೆ ಕಡೆಗಣಿಸಿ ಪೊಲೀಸ್ ಬಲದಿಂದ ಜಿಲ್ಲಾಡಳಿತ ಬಿರುಸಿನಿಂದ ಕೋಸ್ಟಲ್ ಬರ್ತ್ ಕಾಮಗಾರಿ ನಡೆಸುತ್ತಿದೆ. ಇದೀಗ ಸಾಂಪ್ರದಾಯಿಕ ಮೀನುಗಾರರು ನಾಡದೋಣಿ ಕಟ್ಟಿ ಇಡುವ ಪ್ರದೇಶಕ್ಕೆ ಕಾಮಗಾರಿ ವಿಸ್ತರಣೆಗೊಂಡಿದೆ. ಇಲ್ಲಿ ನೂರಾರು ನಾಡದೋಣಿ ತಂಗುತ್ತವೆ. ಫಲ್ಗುಣಿ ನದಿ ತೀರದ ಬೆಂಗರೆಯಲ್ಲಿ ತಲತಲಾಂತದಿಂದ ಸಾಂಪ್ರದಾಯಿಕ ಮೀನುಗಾರರು ದೋಣಿ ಕಟ್ಟಿ ಮೀನುಗಾರಿಕೆ ನಡೆಸುತ್ತಿದ್ದಾರೆ. ಎರಡು ತಿಂಗಳಿಂದ ಮೀನುಗಾರರು ಅಧಿಕೃತ ಮಾತುಕತೆ-ಪರ್ಯಾಯ ಜಾಗ ತೋರಿಸದೆ ದೋಣಿಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲವೆಂದು ಹೇಳುತ್ತಲೇ ಇದ್ದಾರೆ. ಇದ್ಯಾವುದನ್ನು ಕೇಳದ ಜಿಲ್ಲಾಡಳಿತ ಈಗ ಹಠಾತ್ತಾಗಿ ಪೋಲೀಸ್ ಬಲದಿಂದ ದೋಣಿ ತೆರವುಗೊಳಿಸಲು ಮುಂದಾಗಿದೆ. ಅಧಿಕಾರಿಗಳು ಸರ್ವಾಧಿಕಾರದಿಂದ ವರ್ತಿಸುತ್ತಿದ್ದು, ಜಿಲ್ಲಾಡಳಿತ ಸಭೆ ನಡೆಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಸಾಂಪ್ರದಾಯಿಕ ಮೀನುಗಾರರ ಸಂಘ ಎಚ್ಚರಿಸಿದೆ.

ಸಾಗರ ಮಾಲಾದಿಂದ ಮನೆ ಕಳೆದುಕೊಳ್ಳವ ಮೀನುಗಾರರಿಗೆ ಪುನರ್ವಸತಿ, ದೋಣಿ ನಿಲ್ಲಿಸಲು ಸರಿಯಾದ ವ್ಯವಸ್ಥೆ ಕುರಿತು ಬಾಯಿ ಮಾತಿನ ಭರವಸೆ ಬದಲಿಗೆ ಅಧಿಕೃತ ಸಭೆ ಕರೆದು ಜಿಲ್ಲಾಡಳಿತ ಮೀನುಗಾರರಿಗೆ ತೊಂದರೆಯಾಗದಂಥ ತೀರ್ಮಾನ ಪ್ರಕಟಿಸಬೇಕೆಂದು ಸಾಂಪ್ರದಾಯಿಕ ಮಿನುಗಾರರ ಸಂಘ ಜಿಲ್ಲಾಡಳಿತಕ್ಕೆ ಹೇಳಿತ್ತು. ಮೂರು ವಾರದ ಹಿಂದೆ ಜಿಲ್ಲಾ ಉಸ್ತವಾರಿ ಮಂತ್ರಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಒಂದು ವಾರದಲ್ಲಿ ಅಧಿಕೃತ ಸಭೆ ಏರ್ಪಡಿಸುವುದಾಗಿ ಹೇಳಿದ್ದರು. ಆದರೆ ಈಗ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳು ಯಾವುದೆ ಸಭೆ, ಸಮಾಲೋಚನೆ ಇಲ್ಲದೆ ದೋಣಿ ತೆರವಿಗೆ ಒತ್ತಾಯಿಸುತ್ತಿದೆ; ಒಪ್ಪದಿದ್ದರೆ ಪೊಲೀಸ್ ಬಲ ಪ್ರಯೋಗಿಸುವ ಬೆದರಿಕೆ ಹಾಕುತ್ತಿದ್ದಾರೆಂದು ಮೀನುಗಾರ ಮುಖಂಡರು ಹೇಳುತ್ತಿದ್ದಾರೆ.

ಜಿಲ್ಲಾಡಳಿತದ ಈ ಸರ್ವಾಧಿಕಾರಿ ಧೋರಣೆ ಖಂಡಿಸುವುದಾಗಿ ಹೇಳಿರುವ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘ, ನ್ಯಾಯಯುತ ಪರಿಹಾರ ಘೋಷಿಸದೆ ದೋಣಿ ತೆರವಿಗೆ ಅವಕಾಶ ಕೊಡುವುದಿಲ್ಲವೆಂದು ಹೆಳಿದೆ. ಬಲಾತ್ಕಾರಕ್ಕೆ ಮುಂದಾದರೆ ಮೀನುಗಾರರು ಒಗ್ಗಟ್ಟಾಗಿ ಶಾಂತಿಯುತ ಹೋರಾಟದಿಂದ ಎದುರಿಸುವುದಾಗಿ ಮೀನುಗಾರ ಮಖಂಡರು ಹೇಳುತ್ತಿದ್ದಾರೆ. ಇನ್ನಾದರು ಬಡ ಮೀನುಗಾರರಿಗೆ ನ್ಯಾಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ಯೋಜನೆ ನೀಲ ನಕ್ಷೆಯಂತೆ ನಡೆಯುತ್ತಿಲ್ಲ: ಮಾಜಿ ಶಾಸಕ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...