- Advertisement -
- Advertisement -
ಹೊಸದಾಗಿ ರಚನೆಯಾದ ರಾಜ್ಯದ ಸಚಿವ ಸಂಪುಟಕ್ಕೆ ಕೊನೆಗೂ ಖಾತೆಹಂಚಿಯನ್ನು ಶನಿವಾರ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ 29 ನೂತನ ಸಚಿವರ ಪೈಕಿ ಯಾರಿಗೆ ಯಾವ ಖಾತೆ ನೀಡಲಾಗಿದೆ, ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
29 ನೂತನ ಸಚಿವರಿಗೆ ನೀಡಲಾದ ಖಾತೆಗಳು ಹೀಗಿವೆ.
-
-
- ಗೋವಿಂದ ಕಾರಜೋಳ- ಜಲ ಸಂಪನ್ಮೂಲ
- ಆರಗ ಜ್ಞಾನೇಂದ್ರ- ಗೃಹ
- ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
- ಆರ್. ಅಶೋಕ- ಆದಾಯ(ಮುಜರಾಯಿ ಇಲಾಖೆ ಬಿಟ್ಟು)
- ಬಿ. ಶ್ರೀರಾಮುಲು- ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ
- ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್ ಮತ್ತು ವಕ್ಫ್
ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ! - ವಿ. ಸೋಮಣ್ಣ- ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ
- ಉಮೇಶ್ ವಿ. ಕತ್ತಿ- ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ
- ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
- ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
- ಡಾ.ಸಿ.ಎನ್. ಅಶ್ವತ್ಥನಾರಾಯಣ- ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ
- ಸಿ.ಸಿ. ಪಾಟೀಲ- ಲೋಕೋಪಯೋಗಿ
- ಆನಂದ್ ಸಿಂಗ್- ಪರಿಸರ ಮತ್ತು ಪ್ರವಾಸೋದ್ಯಮ
- ಕೋಟ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ
ಇದನ್ನೂ ಓದಿ: ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ - ಪ್ರಭು ಚೌಹಾನ್- ಪಶು ಸಂಗೋಪಣೆ
- ಮುರುಗೇಶ್ ಆರ್. ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
- ಶಿವರಾಂ ಹೆಬ್ಬಾರ್- ಕಾರ್ಮಿಕ
- ಎಸ್.ಟಿ. ಸೋಮಶೇಖರ್- ಸಹಕಾರ
- ಬಿ.ಸಿ. ಪಾಟೀಲ- ಕೃಷಿ
- ಬೈರತಿ ಬಸವರಾಜ- ನಗರಾಭಿವೃದ್ಧಿ
- ಡಾ.ಕೆ. ಸುಧಾಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ
- ಕೆ. ಗೋಪಾಲಯ್ಯ- ಅಬಕಾರಿ
- ಎಂ.ಟಿ.ಬಿ. ನಾಗರಾಜು- ಪೌರಾಡಳಿತ, ಸಣ್ಣ ಕೈಗಾರಿಕೆ
- ನಾರಾಯಣ ಗೌಡ- ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ
- ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
- ವಿ. ಸುನೀಲ್ ಕುಮಾರ್- ಇಂಧನ, ಕನ್ನಡ ಮತ್ತು ಸಂಸ್ಕೃತಿ
- ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
- ಶಂಕರ ಪಾಟೀಲ್- ಕೈಮಗ್ಗ, ಜವಳಿ, ಸಕ್ಕರೆ
- ಮುನಿರತ್ನ- ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ
-
ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ಬಳಿಯೆ ಉಳಿಸಿಕೊಂಡಿದ್ದಾರೆ.
ಇದನ್ನೂ ಓದಿ: 2019-20 ರಲ್ಲಿ ಕಾರ್ಪೋರೇಟ್ ಮತ್ತು ಇತರರು ಬಿಜೆಪಿಗೆ ನೀಡಿದ್ದು 785 ಕೋಟಿಗಿಂತಲೂ ಹೆಚ್ಚು!


