Homeಚಳವಳಿಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ.

- Advertisement -
- Advertisement -

ದೆಹಲಿಯ ನಂಗಲಿ ದಲಿತ ಮಗುವಿನ ಬರ್ಬರ ಅತ್ಯಾಚಾರವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡಲಿಲ್ಲ? ದೇಶದ ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ರಾಜ್ಯಾಧ್ಯಕ್ಷರಾದ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಅಪ್ರಾಪ್ತ ದಲಿತ ಮಗುವಿನ ಅತ್ಯಾಚಾರ ಖಂಡಿಸಿ ದಸಸಂ ಒಕ್ಕೂಟ (ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ಒಕ್ಕೂಟ), ಕರ್ನಾಟಕ ಜನಶಕ್ತಿ ಮತ್ತು ತಮಟೆ ವೇದಿಕೆಗಳ ವತಿಯಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಉನ್ನತ ಕುಟುಂಬದ ಹೆಣ್ಣು ಮಗಳಿಗೆ ಅನ್ಯಾಯವಾದರೆ ಇಡೀ ನಾಗರೀಕ ಸಮಾಜ ಪ್ರತಿಭಟಿಸುತ್ತದೆ. ಮಾಧ್ಯಮಗಳು ದೊಡ್ಡ ಸುದ್ದಿ ಮಾಡುತ್ತವೆ. ಇದು ಒಳ್ಳೆಯದು. ಆದರೆ ತಳಸಮುದಾಯದ, ದಲಿತರ ಮೇಲಿನ ಅತ್ಯಾಚಾರಗಳಿಗೆ ಇದೇ ರೀತಿಯ ಸ್ಪಂದನೆ ಇರುವುದಿಲ್ಲ. ಈ ತಾರತಮ್ಯ ಏಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಘಟನೆಗೆ ಇಡೀ ದೇಶ ತೀವ್ರವಾಗಿ ಸ್ಪಂದಿಸಿತು. ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಗುಂಡಿಟ್ಟು ಹತ್ಯೆ ಮಾಡಲಾಯಿತು. ಇದು ಮಾನವ ಹಕ್ಕುಗಳ ಉಲ್ಲಂಘನೆ ಸಹ. ಆದರೆ ಹತ್ರಾಸ್ ದಲಿತ ಮಗಳ ಅತ್ಯಾಚಾರಗೈದು ಕೊಲೆ ಮಾಡಿ ಶವ ಕೂಡದೇ ಸುಟ್ಟು ಹಾಕಿತು ಆದಿತ್ಯನಾಥ್ ಸರ್ಕಾರ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರದ ಮೋದಿ ಸರ್ಕಾರ ಮನುಶಾಸ್ತ್ರದ ಅಡಿಪಾಯದ ಮೇಲೆ ನಡೆಯುತ್ತಿದೆ. ಹಾಗಾಗಿ ಅದಕ್ಕೆ ದಲಿತ ದಮನಿತರ ಕೂಗು ಕೇಳುತ್ತಿಲ್ಲ. ಪಂಚೇಂದ್ರೀಯ ಕಳೆದುಕೊಂಡಿರುವ ಸರ್ಕಾರಕ್ಕೆ ನಾವು ಬಿಸಿಮುಟ್ಟಿಸಿಬೇಕಿದೆ ಎಂದು ಅವರು ಹೇಳಿದರು.

ಹಿರಿಯ ಹೋರಾಟಗಾರರಾದ ಬಿ.ಶ್ರೀಪಾದ್ ಭಟ್ ಮಾತನಾಡಿ, “ಇಷ್ಟು ವರ್ಷಗಳಾದರೂ ಬರ್ಬರ ಅತ್ಯಾಚಾರಗಳನ್ನು ತಡೆಯಲು ನಾವು ವಿಫಲರಾಗಿದ್ದೇವೆ. ನಾಚಿಕೆಯಿಂದ ತಲೆತಗ್ಗಿಸಿ ಮಾತನಾಡುತ್ತಿದ್ದೇನೆ. ಇಲ್ಲಿ ಮಾತೇ ಒಂದು ಕ್ರೌರ್ಯದ ರೂಪದಲ್ಲಿದೆ. ನ್ಯಾವ್ಯಾರು ಮಾತನಾಡುವ ಅರ್ಹತೆ ಉಳಿಸಿಕೊಂಡಿಲ್ಲ” ಎಂದು ವಿಷಾಧ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಸಾಮಾಜಿಕ ಭದ್ರತೆ ಬಗ್ಗೆ ನಾವು ಮಾತನಾಡುತ್ತಿಲ್ಲ. ದುಷ್ಕರ್ಮಿಗಳು ಭಾರತ ತಂಡದ ಹಾಕಿ ಆಟಗಾರ್ತಿ ವಂದನಾ ಕಠಾರಿಯ ಮನೆ ಮುಂದೆ ಹೋಗಿ ಜಾತಿ ನಿಂದನೆ ಮಾಡುವ ಧೈರ್ಯ ಎಲ್ಲಿಂದ ಬಂತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮಗಳೂ ದೇಶದ ಮಗಳು ಎಂಬ ಘೋಷಣೆಗಳು ಮೊಳಗಿದವು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿ, ದಸಸಂ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ ಮಾತನಾಡಿದರು. ಹಿರಿಯ ದಲಿತ ಹೋರಾಟಗಾರರಾದ ವಿ.ನಾಗರಾಜ್, ರಾಜಾಸಾಬ್ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...