Homeಕ್ರೀಡೆಒಲಂಪಿಕ್ವಂದನಾ ಜಾತಿ ನಿಂದನೆ ಪ್ರಕರಣ; ಘಟನೆ ನಾಚಿಕೆಗೇಡು ಎಂದ ಹಾಕಿ ತಂಡದ ನಾಯಕಿ

ವಂದನಾ ಜಾತಿ ನಿಂದನೆ ಪ್ರಕರಣ; ಘಟನೆ ನಾಚಿಕೆಗೇಡು ಎಂದ ಹಾಕಿ ತಂಡದ ನಾಯಕಿ

- Advertisement -
- Advertisement -

ಭಾರತ ಹಾಕಿ ತಂಡದ ಮಹಿಳಾ ಆಟಗಾರ್ತಿ ವಂದನಾ ಕಟಾರಿಯಾ ವಿರುದ್ಧ ಜಾತಿ ನಿಂದನೆ ಮಾಡಿದ ಘಟನೆಯನ್ನು ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌ ‘ನಾಚಿಕೆಗೇಡು’ ಎಂದು  ಖಂಡಿಸಿದ್ದಾರೆ. ಆಟಗಾರರು ದೇಶದ ಎಲ್ಲಾ ಕಡೆಗಳಿಂದ ಬರುತ್ತಾರೆ, ಆದರೆ ಅವರು ಭಾರತದ ಧ್ವಜಕ್ಕಾಗಿ ಆಡುತ್ತಾರೆ ಎಂದು ಅವರು ಶನಿವಾರ ಹೇಳಿದ್ದಾರೆ.

“ಮಹಿಳೆಯರ ಹಾಕಿ ತಂಡದಲ್ಲಿ ದಲಿತ ಆಟಗಾರರೇ ಇರುವುದರಿಂದ ಸೆಮಿಫೈನಲ್ ಸೋತು ಹೋಯಿತು. ದಲಿತರನ್ನು ಹಾಕಿ ಮಾತ್ರವಲ್ಲ, ಯಾವುದೆ ಆಟಕ್ಕೂ ಸೇರಿಸಿಕೊಳ್ಳಬಾರದು” ಎಂದು ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಮೇಲ್ಜಾತಿಯ ವ್ಯಕ್ತಿಗಳು ಗಲಾಟೆ ಮಾಡಿದ್ದರು. ದುಷ್ಕರ್ಮಿಗಳು ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತಿದ್ದಕ್ಕಾಗಿ ಸಂತೋಷ ವ್ಯಕ್ತಪಡಿಸಿ ಜನಾಂಗೀಯ ಮತ್ತು ಜಾತಿ ನಿಂದನೆ ಮಾಡಿ ವಂದನಾ ಅವರ ಮನೆಯ ಮುಂದೆ ಕುಣಿದು ಸಂತೋಷ ವ್ಯಕ್ತಪಡಿಸಿದ್ದರು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿತ್ತು.

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

“ವಂದನಾ ಅವರ ಕುಟುಂಬದೊಂದಿಗೆ ನಡೆದ ಘಟನೆ ನಾಚಿಕೆಗೇಡು. ನಾನು ಜನರು ಜಾತಿವಾದವನ್ನು ಮೀರಲಿ ಎಂದು ಬಯಸುತ್ತೇನೆ. ನಮ್ಮ ಧರ್ಮಗಳು ವಿಭಿನ್ನವಾಗಿದ್ದು, ನಾವು ದೇಶದ ವಿವಿಧ ಭಾಗಗಳಿಂದ ಬಂದಿದ್ದೇವೆ. ಆದರೆ ನಾವು ಆಡುವಾಗ ನಾವು ಭಾರತದ ಧ್ವಜಕ್ಕಾಗಿ ಆಡುತ್ತೇವೆ” ಎಂದು ತಂಡದ ನಾಯಕ ರಾಣಿ ರಾಂಪಾಲ್ ಹೇಳಿದ್ದಾರೆ.

“ಇದು ಯಾವುದೇ ಕ್ರೀಡಾಪಟು ಅಥವಾ ಸಾಮಾನ್ಯ ವ್ಯಕ್ತಿಗೆ ಸಂಭವಿಸಬಾರದು. ನಮ್ಮ ತಂಡವು ಮೊದಲ ಪದಕ ಗೆಲ್ಲದಿದ್ದರೂ ಜನರಿಂದ ತುಂಬಾ ಪ್ರೀತಿಯನ್ನು ಗಳಿಸಿದೆ. ಆದರೆ ಇಂತಹ ದೌರ್ಜನ್ಯವನ್ನು ಕೊನೆಯಾಗಬೇಕು. ನಾವು ನಮ್ಮ ದೇಶವನ್ನು ಕ್ರೀಡಾ ರಾಷ್ಟ್ರವನ್ನಾಗಿ ಮಾಡಬೇಕು” ಎಂದು ಅವರು ಹೇಳಿದ್ದಾರೆ.

ಪ್ರಕರಣದ ಮೂರನೇ ವ್ಯಕ್ತಿಯನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಾನು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ಘಟನೆಯ ಬಗ್ಗೆ ನಾನು ಸ್ವಲ್ಪ ತಿಳಿದುಕೊಂಡಿದ್ದೇನೆ. ಕುಟುಂಬದೊಂದಿಗೆ ಮಾತನಾಡಿದ್ದು, ಅವರು ಎಲ್ಲವೂ ಚೆನ್ನಾಗಿದೆ ಎಂದು ಹೇಳಿದ್ದಾರೆ. ಪೊಲೀಸರು ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ” ವಂದನಾ ಕಟಾರಿಯಾ ಹೇಳಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...