Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...