Homeಮುಖಪುಟಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮೌನವಹಿಸಿದೆ. ಆ ಸಾಧ್ಯತೆಯನ್ನು ಅದು ತಳ್ಳಿಹಾಕಿಲ್ಲ. “ಅಂತಹ ಪ್ರೊಜೆಕ್ಷನ್ ಅನ್ನು ಈಗಲೇ ನೀಡುವುದು ತೀರ ಮುಂಚಿತವಾಗುತ್ತದೆ. ಸೂಕ್ತ ಸಮಯ ಬರಲಿ” ಎಂದು ಪ್ರಿಯಾಂಕಾ ಗಾಂಧಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ದೇಶದ ಅತಿದೊಡ್ಡದಾದ ಮತ್ತು ರಾಜಕೀಯವಾಗಿ ಅತ್ಯಂತ ನಿರ್ಣಾಯಕ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ 2019 ರಿಂದ ಪ್ರಿಯಾಂಕಾಗಾಂಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶ ಉಸ್ತುವಾರಿ ಹೊತ್ತಿರುವ ಅವರು ಪಕ್ಷವನ್ನು ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ಅವರು ಉತ್ತರ ಪ್ರದೇಶದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪಕ್ಷದ ಧ್ಯೇಯವನ್ನು ಮನೆ-ಮನೆಗಳಿಗೆ ತಲುಪಿಸುವುದು ಅವರ ಸದ್ಯದ ಯೋಜನೆಯಾಗಿದೆ. ಅವರು ಕೆಲವು ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಪಕ್ಷದ ಹೊಸ ತಲೆಮಾರಿನ ನಾಯಕರು ಮತ್ತು ಹಳೆಯ ಕಾರ್ಯಕರ್ತರನ್ನು ಒಂದೇ ವೇದಿಕೆಯಲ್ಲಿ ತರಲು ಯತ್ನಿಸುತ್ತಿದ್ದಾರೆ.

“ಅವರ ಭೇಟಿಯು ಪ್ರಾಥಮಿಕವಾಗಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿಸುವುದಾಗಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ಅವರ ದೀರ್ಘಾವಧಿಯ ಅನುಪಸ್ಥಿತಿಯು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಪಕ್ಷವು ಹಲವು ಸವಾಲುಗಳನ್ನು ಎದುರಿಸುತ್ತಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಭದ್ರಗೊಳಿಸುವುದು. ಜಿಲ್ಲಾ ಮಟ್ಟದ ನಾಯರಿಗೆ ಪಕ್ಷದಲ್ಲಿ ತಮ್ಮ ಪಾತ್ರವನ್ನು ಅರ್ಥೈಸುವುದು. ಉತ್ತರ ಪ್ರದೇಶದಲ್ಲಿ ಪಕ್ಷದ ಪ್ರಭಾವವನ್ನು ಹೆಚ್ಚಿಸುವುದು ಸೇರಿದಂತೆ ಕೆಲವು ಕಠಿಣ ಸವಾಲುಗಳಿವೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಒಪ್ಪಿಕೊಂಡಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ, ಲಲ್ಲು ಅವರು ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ರಾಯ್ ಬರೇಲಿಯಲ್ಲಿ ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಅಮೇಥಿಯಲ್ಲಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಳ್ಳುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷದ ಮೇಲ್ವಿಚಾರಣೆಯನ್ನು ನೋಡಿಕೊಂಡಿದ್ದರು.

ಇದು ಅವರಿಗೆ ಹೆಚ್ಚಿನ ಒತ್ತಡವನ್ನು ತಂದಿತ್ತು. ಮಾತ್ರವಲ್ಲದೆ, ಫಲಿತಾಂಶವು ನಿರಾಶಾದಾಯಕವಾಗಿತ್ತು. ಕಾಂಗ್ರೆಸ್ ತನ್ನ ಭದ್ರಕೋಟೆಯಾದ ಅಮೇಥಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸೋತಿತು. ರಾಯ್ ಬರೇಲಿಯಲ್ಲಿ ಮಾತ್ರ ಗೆದ್ದು, ಒಂದೇ ಒಂದು ಸ್ಥಾನವನ್ನು ಉಳಿಸಿಕೊಂಡಿತು.

ಆದ್ದರಿಂದ, 2022ರ ಚುನಾವಣೆಯು ಪ್ರಿಯಾಂಕಾಗೆ ಮಹತ್ವವನ್ನು ನೀಡುತ್ತದೆ. ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ತಮ್ಮ ಚುನಾವಣಾ ಸ್ಟ್ರಾಟಜಿಯನ್ನು ಒರಗೆ ಹಚ್ಚಬೇಕಿದೆ. ಏಕೆಂದರೆ ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರಿಸಲು ಆಕೆಯ ಜನಪ್ರಿಯತೆ ಅಗತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟದಲ್ಲಿದೆ. ಅದು ಕೇವಲ ಏಳು ಶಾಸಕರನ್ನು ಹೊಂದಿದೆ. ಅವರಲ್ಲೂ ಇಬ್ಬರು ಪಕ್ಷದ ವಿರುದ್ಧ ಬಂಡೆದಿದ್ದಾರೆ.

“ಕಳೆದ ಮೂರು ದಶಕಗಳಲ್ಲಿ, ಪಕ್ಷವು ಯುಪಿಯಲ್ಲಿ ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ; ಪಕ್ಷದ ಸಂಘಟನೆ ನೆಲಕಚ್ಚಿದೆ. ತನ್ನ ನೆಲೆಯನ್ನು ಮರಳಿ ಪಡೆಯಲು ಪ್ರಿಯಾಂಕಾ ಹೆಚ್ಚಿನ ಶ್ರಮ ಹಾಕುವ ಅಗತ್ಯವಿದೆ. ಅವರು ಅದನ್ನು ಮಾಡಲು ಸಾಧ್ಯವಾಗುತ್ತದೆಯೇ ಎಂಬುದು ಒಂದು ಮುಖ್ಯ ಪ್ರಶ್ನೆಯಾಗಿದೆ”ಎಂದು ರಾಜಕೀಯ ವೀಕ್ಷಕರಾದ ಪ್ರೊಫೆಸರ್ ಎ.ಕೆ ಮಿಶ್ರಾ ಹೇಳುತ್ತಾರೆ.

ಪಕ್ಷವು 500 ಸದಸ್ಯರ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಹೊಂದಿತ್ತು. ಪ್ರಿಯಾಂಕಾ ಆ ಸಂಖ್ಯೆಯನ್ನು 115 ಕ್ಕೆ ಇಳಿಸಿದರು. ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಅಜಯ್ ಕುಮಾರ್ ಲಲ್ಲು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಈ 115ರಲ್ಲಿ ಶೇಕಡ 34 ರಷ್ಟು ಮೇಲ್ಜಾತಿಗಳು ಮತ್ತು ಹಿಂದುಳಿದವರು, ಶೇಕಡಾ 17 ರಷ್ಟು ಮುಸ್ಲಿಮರು ಮತ್ತು 12 % SC/ST ಮುಖಂಡರಿದ್ದಾರೆ.

ಈಗ ಯುಪಿಸಿಸಿ ಕಾರ್ಯಕಾರಿಣಿ 16 ಪ್ರಧಾನ ಕಾರ್ಯದರ್ಶಿಗಳು ಮತ್ತು ಆರು ಉಪಾಧ್ಯಕ್ಷರನ್ನು ಹೊಂದಿದೆ.

“ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಮರ್ಪಕ ಕ್ರಮಕ್ಕೆ ತರಲು ರಾಜ್ಯ ಮಟ್ಟದಲ್ಲಿ ರಚನೆಯಾದ ವಿವಿಧ ಸಮಿತಿಗಳಲ್ಲಿ ಅನುಭವಿಗಳನ್ನು ನೇಮಿಸಲಾಗಿದೆ” ಎಂದು ಲಲ್ಲೂ ಹೇಳುತ್ತಾರೆ.

ಆದರೆ ರಾಜ್ಯದಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಗೊಂದಲವಿದೆ. ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಮೈತ್ರಿಯ ವಿರುದ್ಧ ಇದ್ದರೂ, ಕಳೆದ ತಿಂಗಳು ನಡೆದ ಸಭೆಯಲ್ಲಿ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂದು ಪ್ರಿಯಾಂಕಾ ಹೇಳಿದ್ದರು.

ಚುನಾವಣೆಗೆ 160-165 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದರೊಂದಿಗೆ ಪಕ್ಷದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳುತ್ತವೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಸ್ವಾತಂತ್ರ್ಯ ದಿನಕ್ಕೆ ಕೆಂಪುಕೋಟೆಗೆ ಭದ್ರತೆ: ದೊಡ್ಡ ಕಂಟೈನರ್‌ಗಳ ಮೂಲಕ ಗೋಡೆ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...