Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕವು ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆಯನ್ನು ತಮಿಳುನಾಡಿನ ಹಲವರು ವಿರೋಧಿಸಿರುವುದು ನಮಗೆಲ್ಲಾ ಗೊತ್ತಿದೆ. ಆದರೆ ಈ ಯೋಜನೆಗೆ ಕರ್ನಾಟಕದ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ!

ಆಗಸ್ಟ್ 5 ರಂದು ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆ ಚಿತ್ರಗಳನ್ನು ಟ್ವೀಟ್ ಮಾಡಿ ಕರ್ನಾಟಕದ ಸಹೋದರ, ಸಹೋದರಿಯರು ಈ ಯೋಜನೆಗೆ ಒತ್ತಡ ಹೇರದಂತೆ ಮನವಿ ಮಾಡುತ್ತೇನೆ ಎಂದು ಬರೆದಿದ್ದರು. ಅದನ್ನು ಸಿ.ಟಿ ರವಿ ಮರುಟ್ವೀಟ್ ಮಾಡುವ ಮೂಲಕ ಅಣ್ಣಾಮಲೈಗೆ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಣ್ಣಾಮಲೈಗೆ ಅವರ “ರಾಜ್ಯ ಮೊದಲು”, ಇದನ್ನು ರಿಟ್ವೀಟ್ ಮಾಡಿದ ಸಿ.ಟಿ ರವಿಗೆ “ದೇಶ ಮೊದಲು”.. ಈ ‘ದೇಮೋ’ಗಳು ಮನೆಗೆ ಮಗಾನೂ ಆಗೋದಿಲ್ಲ, ಊರಿಗೆ ಆಳೂ ಆಗೋದಿಲ್ಲ. ಒಟ್ಟಿನಲ್ಲಿ ಟೋಟಲ್ ಕುಲಘಾತಕರು.. ಎಂದು ಗುರು ಕುಲಕರ್ಣಿ ಕಿಡಿಕಾರಿದ್ದಾರೆ.

ಇದನ್ನ ರೀಟ್ವಿಟ್ ಮಾಡಿ ಸಪೋರ್ಟ್ ಮಾಡ್ತಿದ್ದಿರೇನ್ರಿ ಸಿಟಿ ರವಿ ಅವ್ರೇ, ಮೊದಲು ನಮ್ಮ‌ ಜನ ಸರಿಯಿಲ್ಲ, ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ಬದ್ಧತೆ ಇಲ್ಲದವರನ್ನು ಆಯ್ಕೆ ಮಾಡ್ತಾರೆ. ನೋಡಿ ನಮ್ಮದೆ ತಪ್ಪು, ಅವಯ್ಯನಿಗೆ ತನ್ನ ನಾಡೇ ಮೊದಲಾಯಿತು, ಇವಯ್ಯನಿಗೆ?? ಎಂದು ಶಿವಸೂರ್ಯ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ಕನ್ನಡಿಗರ ಹಿತಾಸಕ್ತಿ ವಿರುದ್ಧ ಬೆಂಬಲ ಕೊಡಲು? ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಮಾತನಾಡಿ, “ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕನ್ನಡ ವಿರೋಧಿ ಧೋರಣೆ ಅನುಸರಿಸುವುದು ಚಟವಾಗಿಬಿಟ್ಟಿದೆ. ಇದರಲ್ಲಿ ಅವರು ವಿಕೃತ ಆನಂದ ಅನುಭವಿಸುತ್ತಿದ್ದಾರೆ. ಈ ಹಿಂದೆ ಕೂಡ ಶ್ರೀಲಂಕಾ ಪಾಸ್‌ಪೋರ್ಟ್ ವಿವಾದಯೆದ್ದಾಗ 5-6 ಭಾಷೆಗಳಲ್ಲಿ ಪಾಸ್‌ಪೋರ್ಟ್ ಮಾಹಿತಿ ಸಿಗುತ್ತಿರುವಾಗ ಕನ್ನಡದಲ್ಲಿ ಏಕಿಲ್ಲ? ಎಂದು ಒಬ್ಬರು ಪ್ರಶ್ನಿಸಿದ್ದರು. ಆಗ ಲೋಕಲ್ ಭಾಷೆಯಲ್ಲಿ ಪ್ರಿಂಟ್ ಹಾಕಲು ಇದೇನು ನಿಮ್ಮ ರೇಷನ್ ಕಾರ್ಡ್ ಅಂದುಕೊಂಡಿದ್ದೀರಾ? ಎಂದು ಸಿ.ಟಿ ರವಿ ವ್ಯಂಗ್ಯವಾಡಿದ್ದರು. ಆಗಲೂ ಜನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಸಿ.ಟಿ ರವಿಯವರು ಹಿಂದೆ ನಾನು ನನ್ನ ಮಕ್ಕಳೊಡನೆ ಇಂಗ್ಲಿಷ್‌ನಲ್ಲಿ ಮಾತನಾಡಿಸುತ್ತೇನೆ, ಅವರನ್ನು ಇಂಗ್ಲಿಷ್ ಶಾಲೆಗೆ ಕಳಿಸುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಕ್ಕಿಂತ ಇಂಗ್ಲಿಷ್ ಮೇಲು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅವರಿಗೆ ಕನ್ನಡದ ಭಾವನೆಗಳಿಗೆ ಬೆಲೆ ಕೊಡಬೇಕೆನ್ನುವ ಕನಿಷ್ಟ ಸೌಜನ್ಯವಿಲ್ಲ. ಅವರಿಗೆ ಅಧಿಕಾರದ ಮದ ಏರಿದ್ದು ನಾವು ಏನು ಜನಪರ ಕೆಲಸ ಮಾಡದಿದ್ದರೂ ಸಹ ನಾವು ಗೆಲ್ಲುತ್ತೇವೆ ಎನ್ನುವ ಅಹಂ ಅವರದು. ಬಿಜೆಪಿ ಪ್ರಾದೇಶಿಕ ಭಾವನೆಗಳಿಗೆ ಯಾವತ್ತೂ ಬೆಲೆ ಕೊಡುವುದಿಲ್ಲ. ಇದನ್ನು ಜನ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಮತ್ತು ಬಿಸಿ ಮುಟ್ಟಿಸಬೇಕು ಎಂದು ದರ್ಶನ್ ಜೈನ್ ಅಭಿಪ್ರಾಯಪಟ್ಟಿರು.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...