Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕವು ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆಯನ್ನು ತಮಿಳುನಾಡಿನ ಹಲವರು ವಿರೋಧಿಸಿರುವುದು ನಮಗೆಲ್ಲಾ ಗೊತ್ತಿದೆ. ಆದರೆ ಈ ಯೋಜನೆಗೆ ಕರ್ನಾಟಕದ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ!

ಆಗಸ್ಟ್ 5 ರಂದು ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆ ಚಿತ್ರಗಳನ್ನು ಟ್ವೀಟ್ ಮಾಡಿ ಕರ್ನಾಟಕದ ಸಹೋದರ, ಸಹೋದರಿಯರು ಈ ಯೋಜನೆಗೆ ಒತ್ತಡ ಹೇರದಂತೆ ಮನವಿ ಮಾಡುತ್ತೇನೆ ಎಂದು ಬರೆದಿದ್ದರು. ಅದನ್ನು ಸಿ.ಟಿ ರವಿ ಮರುಟ್ವೀಟ್ ಮಾಡುವ ಮೂಲಕ ಅಣ್ಣಾಮಲೈಗೆ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಣ್ಣಾಮಲೈಗೆ ಅವರ “ರಾಜ್ಯ ಮೊದಲು”, ಇದನ್ನು ರಿಟ್ವೀಟ್ ಮಾಡಿದ ಸಿ.ಟಿ ರವಿಗೆ “ದೇಶ ಮೊದಲು”.. ಈ ‘ದೇಮೋ’ಗಳು ಮನೆಗೆ ಮಗಾನೂ ಆಗೋದಿಲ್ಲ, ಊರಿಗೆ ಆಳೂ ಆಗೋದಿಲ್ಲ. ಒಟ್ಟಿನಲ್ಲಿ ಟೋಟಲ್ ಕುಲಘಾತಕರು.. ಎಂದು ಗುರು ಕುಲಕರ್ಣಿ ಕಿಡಿಕಾರಿದ್ದಾರೆ.

ಇದನ್ನ ರೀಟ್ವಿಟ್ ಮಾಡಿ ಸಪೋರ್ಟ್ ಮಾಡ್ತಿದ್ದಿರೇನ್ರಿ ಸಿಟಿ ರವಿ ಅವ್ರೇ, ಮೊದಲು ನಮ್ಮ‌ ಜನ ಸರಿಯಿಲ್ಲ, ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ಬದ್ಧತೆ ಇಲ್ಲದವರನ್ನು ಆಯ್ಕೆ ಮಾಡ್ತಾರೆ. ನೋಡಿ ನಮ್ಮದೆ ತಪ್ಪು, ಅವಯ್ಯನಿಗೆ ತನ್ನ ನಾಡೇ ಮೊದಲಾಯಿತು, ಇವಯ್ಯನಿಗೆ?? ಎಂದು ಶಿವಸೂರ್ಯ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ಕನ್ನಡಿಗರ ಹಿತಾಸಕ್ತಿ ವಿರುದ್ಧ ಬೆಂಬಲ ಕೊಡಲು? ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಮಾತನಾಡಿ, “ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕನ್ನಡ ವಿರೋಧಿ ಧೋರಣೆ ಅನುಸರಿಸುವುದು ಚಟವಾಗಿಬಿಟ್ಟಿದೆ. ಇದರಲ್ಲಿ ಅವರು ವಿಕೃತ ಆನಂದ ಅನುಭವಿಸುತ್ತಿದ್ದಾರೆ. ಈ ಹಿಂದೆ ಕೂಡ ಶ್ರೀಲಂಕಾ ಪಾಸ್‌ಪೋರ್ಟ್ ವಿವಾದಯೆದ್ದಾಗ 5-6 ಭಾಷೆಗಳಲ್ಲಿ ಪಾಸ್‌ಪೋರ್ಟ್ ಮಾಹಿತಿ ಸಿಗುತ್ತಿರುವಾಗ ಕನ್ನಡದಲ್ಲಿ ಏಕಿಲ್ಲ? ಎಂದು ಒಬ್ಬರು ಪ್ರಶ್ನಿಸಿದ್ದರು. ಆಗ ಲೋಕಲ್ ಭಾಷೆಯಲ್ಲಿ ಪ್ರಿಂಟ್ ಹಾಕಲು ಇದೇನು ನಿಮ್ಮ ರೇಷನ್ ಕಾರ್ಡ್ ಅಂದುಕೊಂಡಿದ್ದೀರಾ? ಎಂದು ಸಿ.ಟಿ ರವಿ ವ್ಯಂಗ್ಯವಾಡಿದ್ದರು. ಆಗಲೂ ಜನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಸಿ.ಟಿ ರವಿಯವರು ಹಿಂದೆ ನಾನು ನನ್ನ ಮಕ್ಕಳೊಡನೆ ಇಂಗ್ಲಿಷ್‌ನಲ್ಲಿ ಮಾತನಾಡಿಸುತ್ತೇನೆ, ಅವರನ್ನು ಇಂಗ್ಲಿಷ್ ಶಾಲೆಗೆ ಕಳಿಸುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಕ್ಕಿಂತ ಇಂಗ್ಲಿಷ್ ಮೇಲು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅವರಿಗೆ ಕನ್ನಡದ ಭಾವನೆಗಳಿಗೆ ಬೆಲೆ ಕೊಡಬೇಕೆನ್ನುವ ಕನಿಷ್ಟ ಸೌಜನ್ಯವಿಲ್ಲ. ಅವರಿಗೆ ಅಧಿಕಾರದ ಮದ ಏರಿದ್ದು ನಾವು ಏನು ಜನಪರ ಕೆಲಸ ಮಾಡದಿದ್ದರೂ ಸಹ ನಾವು ಗೆಲ್ಲುತ್ತೇವೆ ಎನ್ನುವ ಅಹಂ ಅವರದು. ಬಿಜೆಪಿ ಪ್ರಾದೇಶಿಕ ಭಾವನೆಗಳಿಗೆ ಯಾವತ್ತೂ ಬೆಲೆ ಕೊಡುವುದಿಲ್ಲ. ಇದನ್ನು ಜನ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಮತ್ತು ಬಿಸಿ ಮುಟ್ಟಿಸಬೇಕು ಎಂದು ದರ್ಶನ್ ಜೈನ್ ಅಭಿಪ್ರಾಯಪಟ್ಟಿರು.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...