Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕವು ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆಯನ್ನು ತಮಿಳುನಾಡಿನ ಹಲವರು ವಿರೋಧಿಸಿರುವುದು ನಮಗೆಲ್ಲಾ ಗೊತ್ತಿದೆ. ಆದರೆ ಈ ಯೋಜನೆಗೆ ಕರ್ನಾಟಕದ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ!

ಆಗಸ್ಟ್ 5 ರಂದು ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆ ಚಿತ್ರಗಳನ್ನು ಟ್ವೀಟ್ ಮಾಡಿ ಕರ್ನಾಟಕದ ಸಹೋದರ, ಸಹೋದರಿಯರು ಈ ಯೋಜನೆಗೆ ಒತ್ತಡ ಹೇರದಂತೆ ಮನವಿ ಮಾಡುತ್ತೇನೆ ಎಂದು ಬರೆದಿದ್ದರು. ಅದನ್ನು ಸಿ.ಟಿ ರವಿ ಮರುಟ್ವೀಟ್ ಮಾಡುವ ಮೂಲಕ ಅಣ್ಣಾಮಲೈಗೆ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಣ್ಣಾಮಲೈಗೆ ಅವರ “ರಾಜ್ಯ ಮೊದಲು”, ಇದನ್ನು ರಿಟ್ವೀಟ್ ಮಾಡಿದ ಸಿ.ಟಿ ರವಿಗೆ “ದೇಶ ಮೊದಲು”.. ಈ ‘ದೇಮೋ’ಗಳು ಮನೆಗೆ ಮಗಾನೂ ಆಗೋದಿಲ್ಲ, ಊರಿಗೆ ಆಳೂ ಆಗೋದಿಲ್ಲ. ಒಟ್ಟಿನಲ್ಲಿ ಟೋಟಲ್ ಕುಲಘಾತಕರು.. ಎಂದು ಗುರು ಕುಲಕರ್ಣಿ ಕಿಡಿಕಾರಿದ್ದಾರೆ.

ಇದನ್ನ ರೀಟ್ವಿಟ್ ಮಾಡಿ ಸಪೋರ್ಟ್ ಮಾಡ್ತಿದ್ದಿರೇನ್ರಿ ಸಿಟಿ ರವಿ ಅವ್ರೇ, ಮೊದಲು ನಮ್ಮ‌ ಜನ ಸರಿಯಿಲ್ಲ, ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ಬದ್ಧತೆ ಇಲ್ಲದವರನ್ನು ಆಯ್ಕೆ ಮಾಡ್ತಾರೆ. ನೋಡಿ ನಮ್ಮದೆ ತಪ್ಪು, ಅವಯ್ಯನಿಗೆ ತನ್ನ ನಾಡೇ ಮೊದಲಾಯಿತು, ಇವಯ್ಯನಿಗೆ?? ಎಂದು ಶಿವಸೂರ್ಯ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ಕನ್ನಡಿಗರ ಹಿತಾಸಕ್ತಿ ವಿರುದ್ಧ ಬೆಂಬಲ ಕೊಡಲು? ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಮಾತನಾಡಿ, “ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕನ್ನಡ ವಿರೋಧಿ ಧೋರಣೆ ಅನುಸರಿಸುವುದು ಚಟವಾಗಿಬಿಟ್ಟಿದೆ. ಇದರಲ್ಲಿ ಅವರು ವಿಕೃತ ಆನಂದ ಅನುಭವಿಸುತ್ತಿದ್ದಾರೆ. ಈ ಹಿಂದೆ ಕೂಡ ಶ್ರೀಲಂಕಾ ಪಾಸ್‌ಪೋರ್ಟ್ ವಿವಾದಯೆದ್ದಾಗ 5-6 ಭಾಷೆಗಳಲ್ಲಿ ಪಾಸ್‌ಪೋರ್ಟ್ ಮಾಹಿತಿ ಸಿಗುತ್ತಿರುವಾಗ ಕನ್ನಡದಲ್ಲಿ ಏಕಿಲ್ಲ? ಎಂದು ಒಬ್ಬರು ಪ್ರಶ್ನಿಸಿದ್ದರು. ಆಗ ಲೋಕಲ್ ಭಾಷೆಯಲ್ಲಿ ಪ್ರಿಂಟ್ ಹಾಕಲು ಇದೇನು ನಿಮ್ಮ ರೇಷನ್ ಕಾರ್ಡ್ ಅಂದುಕೊಂಡಿದ್ದೀರಾ? ಎಂದು ಸಿ.ಟಿ ರವಿ ವ್ಯಂಗ್ಯವಾಡಿದ್ದರು. ಆಗಲೂ ಜನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಸಿ.ಟಿ ರವಿಯವರು ಹಿಂದೆ ನಾನು ನನ್ನ ಮಕ್ಕಳೊಡನೆ ಇಂಗ್ಲಿಷ್‌ನಲ್ಲಿ ಮಾತನಾಡಿಸುತ್ತೇನೆ, ಅವರನ್ನು ಇಂಗ್ಲಿಷ್ ಶಾಲೆಗೆ ಕಳಿಸುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಕ್ಕಿಂತ ಇಂಗ್ಲಿಷ್ ಮೇಲು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅವರಿಗೆ ಕನ್ನಡದ ಭಾವನೆಗಳಿಗೆ ಬೆಲೆ ಕೊಡಬೇಕೆನ್ನುವ ಕನಿಷ್ಟ ಸೌಜನ್ಯವಿಲ್ಲ. ಅವರಿಗೆ ಅಧಿಕಾರದ ಮದ ಏರಿದ್ದು ನಾವು ಏನು ಜನಪರ ಕೆಲಸ ಮಾಡದಿದ್ದರೂ ಸಹ ನಾವು ಗೆಲ್ಲುತ್ತೇವೆ ಎನ್ನುವ ಅಹಂ ಅವರದು. ಬಿಜೆಪಿ ಪ್ರಾದೇಶಿಕ ಭಾವನೆಗಳಿಗೆ ಯಾವತ್ತೂ ಬೆಲೆ ಕೊಡುವುದಿಲ್ಲ. ಇದನ್ನು ಜನ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಮತ್ತು ಬಿಸಿ ಮುಟ್ಟಿಸಬೇಕು ಎಂದು ದರ್ಶನ್ ಜೈನ್ ಅಭಿಪ್ರಾಯಪಟ್ಟಿರು.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...